ಔಷಧಿ ಸಸಿ ನೆಡಲು ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಕಾಯಕಲ್ಪ ಕಾರ್ಯಕ್ರಮ ಅನುಷ್ಠಾನಗೊಳಿಸುವಲ್ಲಿ ಆಗುತ್ತಿರುವ ಅನಾನುಕೂಲತೆಗಳ ಬಗ್ಗೆ ಚರ್ಚಿಸಲಾಯಿತು.

Team Udayavani, Jul 7, 2021, 7:27 PM IST

Bidar

ಬೀದರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಗುಣಮಟ್ಟ ಖಾತ್ರಿ ಸಮಿತಿಯ ತ್ತೈಮಾಸಿಕ ಸಭೆ ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಕಾಯಕಲ್ಪ, ಎನ್‌ ಕ್ಯೂಎಎಸ್‌ ಹಾಗೂ ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಪ್ರಗತಿ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ತೋಟಗಾರಿಕೆ ಇಲಾಖೆಗೆ ಅನುಕೂಲವಾಗುವ ಹಾಗೂ ನೀರಿನ ವ್ಯವಸ್ಥೆ ಇರುವ ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ವನಸ್ಪತಿ ಉದ್ಯಾನದ ಸಲುವಾಗಿ ಬೇಕಾಗಿರುವ ಔಷಧೀಯ ಸಸಿಗಳನ್ನು ನೆಡಲು ಕ್ರಮ ವಹಿಸಬೇಕು ಎಂದು ತೋಟಗಾರಿಕಾ ಉಪ ನಿರ್ದೇಶಕರಿಗೆ ಸೂಚಿಸಿದರು.

ಹಳೆಯ ಕಟ್ಟಡ ಹೊಂದಿದ ಆಸ್ಪತ್ರೆಗಳಿದ್ದಲ್ಲಿ ಅವುಗಳ ಪಟ್ಟಿ ಮಾಡಿ ಲೋಕೋಪಯೋಗಿ ಅಭಿಯಂತರರಿಗೆ ಸಲ್ಲಿಸಬೇಕು. ಈ ಬಗ್ಗೆ ಆಯಾ ತಹಶೀಲ್ದಾರರೊಂದಿಗೆ ಚರ್ಚಿಸಿ ಮುಂದಿನ ಕ್ರಮ ವಹಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರಿ ಆರೋಗ್ಯ ಸಂಸ್ಥೆಗಳ ಜಾಗದಲ್ಲಿ ಖಾಸಗಿ ಕಟ್ಟಡಗಳು ಅಥವಾ ರಸ್ತೆ ನಿರ್ಮಾಣ ಇನ್ನಾವುದೇ ರೀತಿಯ ಅತಿಕ್ರಮಣ ಆಗಿದ್ದ ವಿವರವಾದ ವರದಿಯನ್ನು ಸಂಸ್ಥೆವಾರು ಸಲ್ಲಿಸಲು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ನೀರುಪಯುಕ್ತ ವಸ್ತುಗಳನ್ನು ಒಂದು ತಿಂಗಳಲ್ಲಿ ಎಲ್ಲ ಆರೋಗ್ಯ ಸಂಸ್ಥೆಗಳಿಂದ ಟೆಂಡರ್‌ ಮೂಲಕ ವಿಲೇವಾರಿ ಮಾಡಿಸಲು ತಿಳಿಸಿದರು.

ತುರ್ತಾಗಿ ಪರಿಹಾರ ಧನ ನೀಡಿ:
ಕುಟುಂಬ ಕಲ್ಯಾಣ ಸಂತಾನಹರಣ ಶಸ್ತ್ರ ಚಿಕಿತ್ಸೆ ವಿಫಲವಾದ ಪ್ರಕರಣಗಳಿಗೆ ತುರ್ತಾಗಿ ಪರಿಹಾರ ಧನವನ್ನು ಆದ್ಯತೆ ಮೆರೆಗೆ ನೀಡಲು ಕ್ರಮ ವಹಿಸಬೇಕು ಎಂದು ಡಿಸಿ ಈ ವೇಳೆ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು. ಆಸ್ಪತ್ರೆ ಸುತ್ತಲಿನ ಪ್ರದೇಶವನ್ನು
ಪಂಚಾಯತ್‌ನಿಂದ ಕಾಲಕಾಲಕ್ಕೆ ಶುಚಿಗೊಳಿಸಲು ಎಲ್ಲ ಗ್ರಾ.ಪಂಗಳಿಗೆ ನಿರ್ದೇಶನ ನೀಡಿ ತಿಳಿಸಲು ಜಿ.ಪಂ ಸಿಇಒಗೆ ವಿನಂತಿಸುವುದಾಗಿ ಡಿಎಚ್‌ಒ ಡಾ| ವಿ.ಜಿ. ರೆಡ್ಡಿ ತಿಳಿಸಿದರು.

ಬೀದರ್‌ ಮೊದಲನೇ ಸ್ಥಾನ: ಕಾಯಕಲ್ಪ ಕಾರ್ಯಕ್ರಮ ಅನುಷ್ಠಾನಗೊಳಿಸುವಲ್ಲಿ ಆಗುತ್ತಿರುವ ಅನಾನುಕೂಲತೆಗಳ ಬಗ್ಗೆ ಚರ್ಚಿಸಲಾಯಿತು. ಅಂತರ ಮತ್ತು ಛಾಯಾ ಗುರಿ ಸಾಧನೆಯಲ್ಲಿ ರಾಜ್ಯದಲ್ಲಿ ಬೀದರ್‌ ಜಿಲ್ಲೆಯು ಮೊದಲನೇ ಸ್ಥಾನದಲ್ಲಿದೆ. ಕಾಯಕಲ್ಪ ಕಾರ್ಯಕ್ರಮದ ಕಳೆದ ವರ್ಷದ ಸಾಧನೆಗಳ ಬಗ್ಗೆ ಹಾಗೂ ಸದರಿ ವರ್ಷದ ಗುರಿಗಳ ಬಗ್ಗೆ ವೈದ್ಯಾಧಿಕಾರಿ ಡಾ| ಶಿವಶಂಕರ ಸಭೆಗೆ ವಿವರಿಸಿದರು.

ಆಸ್ಪತ್ರೆಗಳಿಗೆ ಅನುಮತಿ: ಟ್ಯೂಬೆಕ್ಟಮಿ ಎಂಪಾನಲಮೆಂಟ್‌ಗಾಗಿ ಮನವಿ ಸಲ್ಲಿಸಿದ್ದ ಐದು ಖಾಸಗಿ ಆಸ್ಪತ್ರೆಗಳಿಗೆ ಸಭೆಯಲ್ಲಿ ಅನುಮತಿ ನೀಡಲಾಯಿತು. ಸಿ.ಎ.ಸಿ ಸುರಕ್ಷಿತ ಗರ್ಭಪಾತಗಳನ್ನು ಮಾಡಲು ಮನವಿ ಸಲ್ಲಿಸಿದ ವೈದ್ಯರಿಗೆ ಕೂಡ ಇದೆ ವೇಳೆ
ಅನುಮತಿ ನೀಡಲಾಯಿತು. ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ವೈದ್ಯಾಧಿಕಾರಿ ಡಾ| ಮಹೇಶ ಬಿರಾದಾರ ಹಾಗೂ ಇನ್ನೀತರರು ಇದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.