ಹಿಮಾಚಲ ಪ್ರದೇಶದಲ್ಲಿ ಆರು ಬಾರಿ ಮುಖ್ಯಮಂತ್ರಿಯಾಗಿದ್ದ ವೀರಭದ್ರ ಸಿಂಗ್ ನಿಧನ
Team Udayavani, Jul 8, 2021, 8:19 AM IST
ಶಿಮ್ಲಾ: ಹಿಮಾಚಲ ಪ್ರದೇಶ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ಧುರೀಣ ವೀರಭದ್ರ ಸಿಂಗ್ ಅವರು ಇಂದು ಮುಂಜಾನೆ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು.
ಬೆಟ್ಟ ಗುಡ್ಡಗಳ ರಾಜ್ಯದ ಈ ಹಿರಿಯ ನಾಯಕ ಇಂದು (ಜು.8) ಮುಂಜಾನೆ 3.40ಕ್ಕೆ ಇಂದಿರಾ ಗಾಂಧಿ ಮೆಡಿಕಲ್ ಕಾಲೇಜಿನಲ್ಲಿ ನಿಧನರಾಗಿದ್ದಾರೆ. ಸೋಮವಾರ ವೀರಭದ್ರ ಸಿಂಗ್ ಅವರಿಗೆ ಹೃದಯಾಘಾತವಾಗಿತ್ತು. ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದನ್ನೂ ಓದಿ:30 ವರ್ಷಗಳ ಹಿಂದೆ ತಂದೆ ಮಾಧವರಾವ್ ನಿರ್ವಹಿಸಿದ್ದ ಖಾತೆಯನ್ನೇ ಪಡೆದ ಜ್ಯೋತಿರಾದಿತ್ಯ ಸಿಂಧಿಯಾ
ವೀರಭದ್ರ ಸಿಂಗ್ ಅವರು ತನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ಒಂಬತ್ತು ಬಾರಿ ಶಾಸಕನಾಗಿ, ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಅದಲ್ಲದೆ ಆರು ಬಾರಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾದ ಹೆಗ್ಗಳಿಗೆ ವೀರಭದ್ರ ಸಿಂಗ್ ಅವರದ್ದು.
ಕಳೆದ ಎಪ್ರಿಲ್ 12ರಂದು ಅವರಿಗೆ ಕೋವಿಡ್ ಪಾಸಿಟಿವ್ ಆಗಿತ್ತು. ಇದಾದ ಬಳಿಕ ಎರಡು ತಿಂಗಳ ಬಳಿಕ ಅಂದರೆ ಜೂನ್ 11ರಂದು ಮತ್ತೆ ಕೋವಿಡ್ ಸೋಂಕು ದೃಢವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್