ನಮ್ಮಕುಟುಂಬದ ಸಂಸ್ಕೃತಿ ಜನತೆಗೆ ಅರ್ಥವಾಗಿದೆ: ನಿಖೀಲ್
Team Udayavani, Jul 8, 2021, 6:57 PM IST
ರಾಮನಗರ: ನಮ್ಮ ಕುಟುಂಬದ ಸಂಸ್ಕೃತಿಯನ್ನುರಾಜ್ಯದ ಜನರು ಅರ್ಥ ಮಾಡಿಕೊಂಡಿದ್ದಾರೆ, ಬೇರೆಯವರಿಂದ ಕಲಿಯುವ ಅಗತ್ಯವಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖೀಲ್ ಕುಮಾರಸ್ವಾಮಿ ಮಂಡ್ಯ ಸಂಸದೆ ಸುಮಲತಾ ವಿರುದ್ಧ ಕಿಡಿಕಾರಿದರು.
ಇಲ್ಲಿನ ಜಾನಪದ ಲೋಕದಲ್ಲಿ ಆಯೋಜಿಸಿದ್ದಕಾರ್ಯಕ್ರಮದಲ್ಲಿ ಜಾನಪದ ಕಲಾವಿದವರಿಗೆಆಹಾರ ಕಿಟ್ ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾಧ್ಯಮಗಳಲ್ಲಿ ಸಂಸದೆ ಸುಮಲತಾ ಅವರಹೇಳಿಕೆಗಳನ್ನು ತಾವು ಗಮನಿಸಿರುವುದಾಗಿ ತಿಳಿಸಿದರು.
ಅವರಿಂದ ತಮ್ಮ ಕುಟುಂಬ ಏನನ್ನು ಕಲಿಯಬೇಕಿಲ್ಲ.ಎಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಯನ್ನೇ ಅಸ್ತ್ರವನ್ನಾಗಿರಿಸಿಕೊಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸುವ ಉದ್ದೇಶ ತಮಗೆ ಕಾಣುತ್ತಿದೆ. ಸಂಸದರಾಗಿ ಅವರು ಹೊಣೆ ಅರಿತುವರ್ತಿಸಬೇಕು ಎಂದರು.
ಅಭ್ಯಂತರವೇನಿಲ್ಲ: ಕೆ.ಆರ್.ಎಸ್ ಡ್ಯಾಂಗೆ 100ವರ್ಷಗಳ ಇತಿಹಾಸವಿದೆ. ಡ್ಯಾಂ ಬಳಿ ಯಾರೇಅಕ್ರಮ ಗಣಿಗಾರಿಕೆ ನಡೆಸಿದರೂ ಅವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ತಮ್ಮ ಕುಟುಂಬ ಯಾರಜತೆಗೂ ಕೈ ಜೋಡಿಸಿಲ್ಲ. ಸಂಸದೆ ಸುಮಲತಾ ಮಂಡ್ಯಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗಳ ವೀಕ್ಷಣೆಗೆ ತೆರಳಿದ್ದಾರೆ.
ವೀಕ್ಷಣೆ ಮಾಡಿಕೊಂಡು ಬರಲಿ. ಆದರೆ,ಜನರಲ್ಲಿ ಗೊಂದಲ ಮೂಡಿಸದಿರಲಿ, ವೈಯಕ್ತಿಕವಾಗಿಯಾರ ಮೇಲೂ ದ್ವೇಷ ಸಾಧಿಸುವ ಮನಸ್ಥಿತಿಯಲ್ಲಿ ಮಾತನಾಡಬಾರದು. ಇದು ಸಂಸದರಿಗೆ ಶೋಭೆ ತರುವುದಿಲ್ಲ. ಮಂಡ್ಯ ಜನತೆ ಸುಮಲತಾ ಅವರನ್ನು5ವರ್ಷಕ್ಕೆ ಆಯ್ಕೆ ಮಾಡಿದ್ದಾರೆ. ಜನರ ಕೆಲಸಮಾಡಲೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ