ಆಕ್ಸಿಜನ್ ದುರಂತ ಮಂಡ್ಯದಲ್ಲಿ ನಡೆದಿದ್ದರೆ ಸರ್ಕಾರವೇ ಬೀಳುತ್ತಿತ್ತು: ಚಲುವರಾಯಸ್ವಾಮಿ
Team Udayavani, Jul 8, 2021, 8:25 PM IST
ಚಾಮರಾಜನಗರ: ಚಾಮರಾಜನಗರದಲ್ಲಿ ನಡೆದ ಆಕ್ಸಿಜನ್ ದುರಂತ ಸಾಧಾರಣ ವಿಷಯ ಅಲ್ಲ. ಇದೇ ಪ್ರಕರಣ ಮಂಡ್ಯ, ಬೆಳಗಾವಿ ಜಿಲ್ಲೆಗಳಲ್ಲಾಗಿದ್ದರೆ ಸರ್ಕಾರವೇ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಬರುತ್ತಿತ್ತು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಹೇಳಿದರು.
ನಗರದಲ್ಲಿ ಗುರುವಾರ, ಕಾಂಗ್ರೆಸ್ ಸಹಾಯ ಹಸ್ತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಬ್ಬರ ಸಾವಿಗೇ ಸರ್ಕಾರವು ಅಲುಗಾಡಿರುವ ಪ್ರಕರಣಗಳನ್ನು ನೋಡಿದ್ದೇವೆ. ಇಲ್ಲಿ 36 ಜನರು ಮೃತಪಟ್ಟಿದ್ದರೂ ಈ ಸರ್ಕಾರ ಈ ಪ್ರಕರಣವನ್ನು ಹಗುರವಾಗಿ ಪರಿಗಣಿಸಿದೆ. ಜನರು ಇಂಥ ವಿಷಯದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ಸತ್ಯ. ಯಾವುದು ಅಕ್ರಮ, ಸಕ್ರಮ, ಕೆಆರ್ಎಸ್ಗೆ ಹಾನಿ ವಿಚಾರ ಹಲವು ವರ್ಷಗಳಿಂದ ಪ್ರಸ್ತಾಪವಾಗುತ್ತಿದೆ. ಇಂತಹ ವಿಚಾರದಲ್ಲಿ ಸರ್ಕಾರ ಉದಾಸೀನ ಮಾಡಬಾರದು. ಗಣಿಗಾರಿಕೆಯಿಂದ ಕೆಆರ್ಎಸ್ ಡ್ಯಾಂ ಗೆ ಆಗುವ ಹಾನಿಯ ಬಗ್ಗೆ ಅಧ್ಯಯನ ನಡೆಸಿ, ನಿರ್ದಿಷ್ಟ ಪ್ರದೇಶದಲ್ಲಿರುವ ಕ್ರಷರ್ ಕಲ್ಲಿನ ಗಣಿಗಳನ್ನು ಶಾಶ್ವತವಾಗಿ ಮುಚ್ಚಬೇಕು. ಜಿಲ್ಲೆ ಹಾಗೂ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.
ಈ ವಿಷಯದಲ್ಲಿ ಸಂಸದೆ ಸುಮಲತಾ ಹಾಗೂ ಜೆಡಿಎಸ್ ನಾಯಕರು ಬೀದಿ ಜಗಳ ಮಾಡುವುದು ಗೌರವ ತರುವಂತಹದ್ದಲ್ಲ. ಜಿಲ್ಲೆಯಲ್ಲಿ ಹಲವು ಗಂಭೀರ ವಿಷಯಗಳಿವೆ. ಇಂತಹ ವಿಚಾರಗಳ ಬಗ್ಗೆ ಜನಪ್ರತಿನಿಧಿಗಳು ಚರ್ಚಿಸಬೇಕು. ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಕುಮಾರಸ್ವಾಮಿಯವರಿಗೆ ಇದೇನೂ ಹೊಸತಲ್ಲ. ಜನರ ಹಿತಾಸಕ್ತಿಗಳು ಇವರಿಗೆ ಬೇಕಾಗಿಲ್ಲ. ಜನರನ್ನು ದಾರಿ ತಪ್ಪಿಸುವುದಕ್ಕೆ ಇಂತಹದ್ದೆಲ್ಲವನ್ನು ಮಾಡುತ್ತಲೇ ಇರುತ್ತಾರೆ. ತಾತ್ಕಾಲಿಕ ರಾಜಕಾರಣ ಮಾಡಿ ಲಾಭ ಗಳಿಸುವುದು ಅವರ ಉದ್ದೇಶ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ
MUST WATCH
ಹೊಸ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ