ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 183 ಅಂಕ ಇಳಿಕೆ, 15,700ಕ್ಕೆ ಕುಸಿದ ನಿಫ್ಟಿ
ದೇಶೀಯ ಷೇರುಮಾರುಕಟ್ಟೆ ವಹಿವಾಟು ಇಳಿಕೆ ಕಂಡಿರುವುದಾಗಿ ರಿಲಯನ್ಸ್ ಸೆಕ್ಯುರಿಟೀಸ್ ಸ್ಟ್ರೆಟಜಿ ಹೆಡ್ ಬಿನೋದ್ ಮೋದಿ ತಿಳಿಸಿದ್ದಾರೆ.
Team Udayavani, Jul 9, 2021, 5:20 PM IST
ನವದೆಹಲಿ: ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಶುಕ್ರವಾರ (ಜುಲೈ 09) 183 ಅಂಕಗಳಷ್ಟು ಇಳಿಕೆಯಾಗುವ ಮೂಲಕ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಎಚ್ ಡಿಎಫ್ ಸಿ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ನಷ್ಟ ಅನುಭವಿಸಿದೆ.
ಇದನ್ನೂ ಓದಿ:ವರ್ಷದ ಹಿಂದೆ ಬಾಲ ಮಂದಿರದಿಂದ ಬಾಲಕಿ ನಾಪತ್ತೆ:ಬೆನ್ನುಬಿದ್ದ ಪೊಲೀಸರು
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 182.75 ಅಂಕ ಇಳಿಕೆಯೊಂದಿಗೆ 52,386.19 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 38.10 ಅಂಕಗಳಷ್ಟು ಇಳಿಕೆಯಾಗಿ 15,689.80ರ ಗಡಿಗೆ ಇಳಿದಿದೆ.
ಸೆನ್ಸೆಕ್ಸ್ ಇಳಿಕೆಯಿಂದ ಬಜಾಜ್ ಆಟೋ, ಟಿಸಿಎಸ್, ಎಚ್ ಡಿಎಫ್ ಸಿ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಟೆಕ್ ಮಹೀಂದ್ರಾ ಷೇರುಗಳು ನಷ್ಟ ಅನುಭವಿಸಿದೆ. ಮತ್ತೊಂದೆಡೆ ಟಾಟಾ ಸ್ಟೀಲ್, ಬಜಾಜ್ ಫಿನ್ ಸರ್ವ್, ಭಾರ್ತಿ ಏರ್ ಟೆಲ್ ಮತ್ತು ಎನ್ ಟಿಪಿಸಿ ಷೇರುಗಳು ಲಾಭಗಳಿಸಿದೆ.
ಹೂಡಿಕೆದಾರರು ಹೆಚ್ಚಿನ ಮೊತ್ತದ ಲಾಭವನ್ನು ಕಾಯ್ದಿರಿಸಿದ ಪರಿಣಾಮ ದೇಶೀಯ ಷೇರುಮಾರುಕಟ್ಟೆ ವಹಿವಾಟು ಇಳಿಕೆ ಕಂಡಿರುವುದಾಗಿ ರಿಲಯನ್ಸ್ ಸೆಕ್ಯುರಿಟೀಸ್ ಸ್ಟ್ರೆಟಜಿ ಹೆಡ್ ಬಿನೋದ್ ಮೋದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
MUST WATCH
ಹೊಸ ಸೇರ್ಪಡೆ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ