ಪಕ್ಷಕ್ಕಾಗಿ ದುಡಿದಿದ್ದೇನೆ,ಶಿರಸಿ ಕ್ಷೇತ್ರಕ್ಕೆ ನಾನೂ ಟಿಕೆಟ್ ಆಕಾಂಕ್ಷಿ:- ದೀಪಕ್ ದೊಡ್ಡೂರು
Team Udayavani, Jul 10, 2021, 2:36 PM IST
ಶಿರಸಿ: ಕಾಂಗ್ರೆಸ್ ಗೆ ನಾನು ನಿನ್ನೆ ಮೊನ್ನೆ ಬಂದವನಲ್ಲ. ನಾನೂ ಶಿರಸಿ ಸಿದ್ದಾಪುರ ಆಕಾಂಕ್ಷಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ದೀಪಕ್ ದೊಡ್ಡೂರು ಹೇಳಿದರು.
ಶನಿವಾರ ಅವರು ನಗರದಲ್ಲಿ ಸುದ್ದಿಗೋಷ್ಡಿಯಲ್ಲಿ ಮಾತನಾಡಿ, ಕಳೆದ 2004 ರಿಂದ ಕಾಂಗ್ರೆಸ್ ಕಾರ್ಯಕರ್ತನಾಗಿ, ವಿವಿಧ ಜವಬ್ದಾರಿ ನಿರ್ವಹಿಸಿದ್ದೇನೆ. ನಾನೂ ವಿವಿಧ ಚುನಾವಣೆಯಲ್ಲಿ ಮುಖ್ಯವಾಗಿ ದುಡಿದಿದ್ದೇನೆ. ಈ ಕಾರಣದಿಂದ ಆಕಾಂಕ್ಷಿಯಾಗಿದ್ದು, ಪಕ್ಷದ ವರಿಷ್ಠರು, ನಾಯಕರಾದ ಆರ್.ವಿ.ದೇಶಪಾಂಡೆ, ಜಿಲ್ಲಾಧ್ಯಕ್ಷರಾದ ಭೀಮಣ್ಣನಾಯ್ಕ ಅವರು ನೀಡುವ ತೀರ್ಮಾನಕ್ಕೆ ಬದ್ದನಿದ್ದೇನೆ. ಯಾವುದೇ ಕ್ಷೇತ್ರದ ಸೇವಾ ಕರ್ತನಿಗೆ ಅದರಲ್ಲಿ ಬೆಳೆಯಬೇಕು ಎಂಬ ಕನಸು ಸಹಜ. ಈ ಕಾರಣದಿಂದ ನಾನೂ ಆಕಾಂಕ್ಷಿತ. ಆದರೆ ವಿಧಾನ ಸಭಾ ಚುನಾವಣೆಗೆ ಎರಡು ವರ್ಷ ಉಂಟು ಎಂದೂ ಹೇಳಿದರು.
ಇದನ್ನೂ ಓದಿ: ಮಾಜಿ ಸಚಿವ ಎಂ.ಬಿ.ಪಾಟೀಲಗೆ ಸ್ವಪಕ್ಷೀಯ ಶಾಸಕ ವೈ.ವಿ.ಪಾಟೀಲ್ ಸವಾಲು
ಈಗಾಗಲೇ ಶಿರಸಿ ಕ್ಷೇತ್ರದ ಮೇಲೆ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಭೀಮಣ್ಣ ನಾಯ್ಕ, ಕೆಪಿಸಿಸಿ ಕಾರ್ಯದರ್ಶಿ ಸುಷ್ಮಾ ರೆಡ್ಡಿ ಕಣ್ಣಿಟ್ಟು ಬಹಿರಂಗವಾಗಿ ಪ್ರಕಟಿಸಿದ್ದು ಉಲ್ಲೇಖನೀಯ. ಈಗ ದೀಪಕ್ ದೊಡ್ಡೂರು ತಾನೂ ಆಕಾಂಕ್ಷಿ ಎಂದಿದ್ದಾರೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ನಾಯಕರಾದ ಬಿ.ಕೆ.ಹರಿಪ್ರಸಾದ ಅವರು ಜೀವ ಜಲಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರರ ಮನೆಗೂ ತೆರಳಿ ಸಮಾಲೋಚನೆ ನಡೆಸಿದ್ದು ಹೊಸಬರಿಗೂ ಮಣೆ ನಡೆಯುತ್ತಿದೆ ಎಂಬ ಮಾತುಗಳೂ ಕಾಂಗ್ರೆಸ್ ವಲಯದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..