ಜಗತ್ತಿಗೀಗ ರೂಪಾಂತರಿಗಳ ಭೀತಿ : ಬಹುತೇಕ ದೇಶಗಳಲ್ಲಿ ಡೆಲ್ಟಾ ಅಬ್ಬರ


Team Udayavani, Jul 11, 2021, 7:15 AM IST

ಜಗತ್ತಿಗೀಗ ರೂಪಾಂತರಿಗಳ ಭೀತಿ : ಬಹುತೇಕ ದೇಶಗಳಲ್ಲಿ ಡೆಲ್ಟಾ ಅಬ್ಬರ

ನಿರ್ಬಂಧಗಳು ಸಡಿಲಿಕೆಯಾದಂತೆ ಭಾರತದಲ್ಲಿ ಮಾತ್ರವಲ್ಲದೇ ಜಗತ್ತಿನ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಮತ್ತೆ ಏರಿಕೆಯ ಹಾದಿಯಲ್ಲಿ ಸಾಗುತ್ತಿದೆ. ಅದರಲ್ಲೂ ಕೊರೊನಾದ ರೂಪಾಂತರಿಗಳು ಜಗತ್ತಿನ ಮೂಲೆ ಮೂಲೆಯಲ್ಲೂ ಅಬ್ಬರಿಸುತ್ತಿದ್ದು, ಬಹುತೇಕ ದೇಶಗಳಲ್ಲಿ ಡೆಲ್ಟಾ ರೂಪಾಂತರಿಯು ಜನರ ನಿದ್ದೆಗೆಡಿಸಿದೆ. ಜೂನ್‌ 23ರ ಅನಂತರ ಸೋಂಕು ಪ್ರಕರಣ ಏರಿಕೆಯಾಗುತ್ತಾ ಸಾಗಿದೆ. ಜೂ. 22ರಂದು ಜಗತ್ತಿನಾದ್ಯಂತ 3.59 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿತ್ತು. ಜು.6ರ ವೇಳೆಗೆ ಇದು 4ಲಕ್ಷಕ್ಕೇರಿತ್ತು.

ಯುಕೆ
ಡೆಲ್ಟಾ ರೂಪಾಂತರಿಯು ಯುನೈಟೆಡ್‌ ಕಿಂಗ್‌ ಡಮ್‌ನಲ್ಲಿ ಹೊಸ ಆತಂಕ ಸೃಷ್ಟಿಸಿದೆ. ಶುಕ್ರವಾರ ಒಂದೇ ದಿನ ಬರೋಬ್ಬರಿ 54,268 ಪ್ರಕರಣಗಳು ದೃಢಪಟ್ಟಿದ್ದು, ಕಳೆದ ವಾರಕ್ಕೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಶೇ.32ರಷ್ಟು ಹೆಚ್ಚಳವಾಗಿದೆ. ಇಲ್ಲಿನ ಸೋಂಕಿತರ ಪೈಕಿ ಶೇ.99 ಮಂದಿಗೆ ಹರಡಿರುವುದು ಡೆಲ್ಟಾ ರೂಪಾಂತರಿ. ಇನ್ನು ಡೆಲ್ಟಾ ಪ್ಲಸ್‌ನ 44 ಪ್ರಕರಣಗಳೂ ಪತ್ತೆಯಾಗಿರುವುದು ಯು.ಕೆ. ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ.

ಅಮೆರಿಕ
ಅಮೆರಿಕದಲ್ಲೂ ಡೆಲ್ಟಾದಿಂದಾಗಿ ಕೇಸುಗಳು ಗಣನೀಯವಾಗಿ ಹೆಚ್ಚುತ್ತಿವೆೆ. ಜುಲೈ 6ರ ವೇಳೆಗೆ 7 ದಿನಗಳ ಸರಾಸರಿ ಪ್ರಕರಣ 13,859 ಆಗಿದ್ದು, ಹಿಂದಿನ ಎರಡು ವಾರಗಳಿಗೆ ಹೋಲಿಸಿದರೆ ಇದು ಶೇ.21ರಷ್ಟು ಹೆಚ್ಚಳವಾಗಿದೆ. ಸೋಂಕಿತರ ಪೈಕಿ ಶೇ.93 ಮಂದಿಗೆ ತಗಲಿರುವುದು ಡೆಲ್ಟಾ ವೇರಿಯೆಂಟ್‌. ಅಮೆರಿಕದಲ್ಲಿ ಸದ್ಯ 8 ರೂಪಾಂತರಿಗಳು ಸದ್ದು ಮಾಡುತ್ತಿವೆ.

ಕೆನಡಾ
ಕಳೆದ ವರ್ಷ ಪೆರುವಿನಲ್ಲಿ ಪತ್ತೆಯಾದ ಲಾಂಬಾx ರೂಪಾಂತರಿಯು ಈಗ ಕೆನಡಾದ ನಿದ್ದೆಗೆಡಿಸಿದೆ.
ಈಗಾಗಲೇ 27 ಪ್ರಕರಣಗಳು ಪತ್ತೆಯಾಗಿದ್ದು, ಇದು ಕೂಡ ಡೆಲ್ಟಾ ಮಾದರಿಯಲ್ಲೇ ಭಾರೀ ವೇಗವಾಗಿ ಹಬ್ಬುವ ರೂಪಾಂತರಿಯಾಗಿದೆ. ಒಟ್ಟಾರೆ 25 ದೇಶಗಳಲ್ಲಿ ಲಾಂಬಾx ಕಂಡುಬಂದಿದೆ.

ಪಾಕಿಸ್ಥಾನ
ಪಾಕ್‌ ನಲ್ಲೂ ಸೋಂಕು ಹೆಚ್ಚಳವಾಗುತ್ತಿದ್ದು, 24 ಗಂಟೆಗಳಲ್ಲಿ 1,828 ಪ್ರಕರಣ ಪತ್ತೆಯಾಗಿದೆ. ಈ ಪೈಕಿ ಸಿಂಧ್‌ ಪ್ರಾಂತ್ಯವೊಂದರಲ್ಲೇ 1,046 ಕೇಸುಗಳು ದೃಢಪಟ್ಟಿವೆ. ಈ ಹಿನ್ನೆಲೆಯಲ್ಲಿ ಇಲ್ಲಿ ಲಸಿಕೆ ಪ್ರಮಾಣ ಪತ್ರ ಇರುವವರಿಗಷ್ಟೇ ಆಸ್ಪತ್ರೆಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಲಸಿಕೆ ಪಡೆಯದವರು ಸರಕಾರಿ ಉದ್ಯೋಗದ ಸಂದರ್ಶನಕ್ಕೆ ಬರುವಂತಿಲ್ಲ, ಸರಕಾರಿ ಸಾರಿಗೆಗಳಲ್ಲಿ ಪ್ರಯಾಣಿಸುವಂತಿಲ್ಲ ಎಂಬ ಆದೇಶ ಹೊರಡಿಸಲಾಗಿದೆ.

ಆಸ್ಟ್ರೇಲಿಯಾ
ಇಲ್ಲಿನ ನ್ಯೂ ಸೌತ್‌ ವೇಲ್ಸ್‌ನಲ್ಲಿ ಕೊರೊನಾ ತೀವ್ರಗತಿಯಲ್ಲಿ ವ್ಯಾಪಿಸುತ್ತಿದೆ. ಸಿಡ್ನಿಯಲ್ಲಿ ಈಗಾಗಲೇ 2 ವಾರಗಳ ಲಾಕ್‌ ಡೌನ್‌ ಘೋಷಿಸಲಾಗಿದ್ದು, ಇದನ್ನು ಇನ್ನಷ್ಟು ವಿಸ್ತರಿಸುವ ಸಾಧ್ಯತೆಯಿದೆ. ಡೆಲ್ಟಾ ರೂಪಾಂತರಿಯು ಕಾಳ್ಗಿಚ್ಚಿನಂತೆ ಹರಡುತ್ತಿದ್ದು, ಇದನ್ನು ನಿಯಂತ್ರಿಸಲು ಆರೋಗ್ಯಾಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.

ರಷ್ಯಾ
2020ರ ಜೂನ್‌ಗೆ ಹೋಲಿಸಿದರೆ ಈ ವರ್ಷದ ಜೂನ್‌ ನಲ್ಲಿ ರಷ್ಯಾದಲ್ಲಿ ಸೋಂಕಿತರ ಸಾವು ಪ್ರಕರಣಗಳು ಶೇ.14ರಷ್ಟು ಹೆಚ್ಚಳವಾಗಿವೆೆ. ಸಾವು ಈ ಪ್ರಮಾಣದಲ್ಲಿ ಹೆಚ್ಚಲು ಡೆಲ್ಟಾ ರೂಪಾಂತರಿಯೇ ಕಾರಣ ಎಂದು ಕೋವಿಡ್‌ ಕಾರ್ಯಪಡೆ ಹೇಳಿದೆ. ಶುಕ್ರವಾರ ಒಂದೇ ದಿನ 25,766 ಪ್ರಕರಣಗಳು ಪತ್ತೆಯಾಗಿವೆೆ.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.