ಈ ರಾಜ್ಯ ನೀಡುತ್ತಿದೆ ಎನ್ ಎಚ್ ಎಂ ನ ಗುತ್ತಿಗೆ ನೌಕರರಿಗೆ ನೀಡುತ್ತಿದೆ ಬಂಪರ್ ಬೋನಸ್..!
Team Udayavani, Jul 11, 2021, 3:54 PM IST
ನವ ದೆಹಲಿ : ರಾಜಸ್ಥಾನ ಸರ್ಕಾರ ಗುತ್ತಿಗೆ ನೌಕರರಿಗೆ ಹೆಚ್ಚಿನ ಬಿಡುವು ನೀಡುವ ಪ್ರಯತ್ನದಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ ಎಚ್ ಎಂ) ನಲ್ಲಿ ಕೆಲಸ ಮಾಡುವ ಎಲ್ಲಾ ನೌಕರರಿಗೆ ಬೋನಸ್ ಘೋಷಿಸಿದೆ.
ರಾಜ್ಯದ ಗುತ್ತಿಗೆ ನೌಕರರ ಖಾತೆಗಳಲ್ಲಿ ಒಂದು ಬಾರಿ ಬೋನಸ್ ವರ್ಗಾವಣೆ ಮಾಡುವ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅನುಮೋದನೆ ನೀಡಿದ್ದಾರೆ.
ಮಾರ್ಚ್ 31, 2021 ರಂದು ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ ಎಚ್ ಎಂ) ನಲ್ಲಿ ಮೂರರಿಂದ ಐದು ವರ್ಷಗಳ ಸೇವೆಯನ್ನು ಪೂರೈಸಿದ ಗುತ್ತಿಗೆ ಸಿಬ್ ಒಂದು ಬಾರಿ ನಿಷ್ಠೆ ಮತ್ತು ಅನುಭವ ಆಧಾರಿತ ಬೋನಸ್ ಪಡೆಯಲಿದ್ದಾರೆ ಎಂದು ರಾಜಸ್ಥಾನ ಸರ್ಕಾರ ಹೊರಡಿಸಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಇದನ್ನೂ ಓದಿ : ಕೋವಿಡ್ ಸಂಕಷ್ಟದಲ್ಲಿನ ಆದಿವಾಸಿಗಳಿಗೆ ನೆರವು ನೀಡಿದ ಐಟಿಫಾರ್ ಚೇಂಜ್ನ ಶ್ರೀಜಾ
ಇನ್ನು, ಮಾರ್ಚ್ 31, 2017 ರವರೆಗೆ ಈಗಾಗಲೇ ಪ್ರಯೋಜನಗಳನ್ನು ಪಡೆದಿರುವ ರಾಷ್ಟ್ರೀಯ ಆರೋಗ್ಯ ಮಿಷನ್ ಅಥವಾ ಎನ್ ಎಚ್ ಎಂ ನ ಗುತ್ತಿಗೆ ಪಡೆದ ನೌಕರರು ಈ ಪ್ರಯೋಜನ ಪಡೆಯಲಿದ್ದಾರೆ ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಆರೋಗ್ಯ ಮಿಷನ್ ನ ನೌಕರರು ಪಡೆಯುವ ಬೋನಸ್ ಎಷ್ಟು..?
ಮೂರು ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ಮಾರ್ಚ್ 31, 2021 ರವರೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ)ನ ಗುತ್ತಿಗೆ ನೌಕರರು ಶೇಕಡಾ 10 ದರದಲ್ಲಿ ಬೋನಸ್ ಪಡೆಯುತ್ತಾರೆ ಹಾಗೂ ಐದು ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದವರು ಶೇಕಡಾ 15 ರಷ್ಟು ಬೋನಸ್ ನನ್ನು ಪಡೆಯಲಿದ್ದಾರೆ.
ಇನ್ನು, ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ ಎಚ್ ಎಂ) ನ ಗುತ್ತಿಗೆ ನೌಕರರಿಗೆ ಮಿಷನ್ ನಲ್ಲಿನ ಅನುಭವ ಅಥವಾ ಸೇವೆ ಸಲ್ಲಿಸಿದ ವರ್ಷಗಳ ಆಧಾರದ ಮೇಲೆ ಒಂದು ಬಾರಿ ಬೋನಸ್ ನೀಡಲು ರಾಜಸ್ಥಾನ ರಾಜ್ಯ ಸರ್ಕಾರ ಒಟ್ಟು 987.62 ಲಕ್ಷ ರೂಪಾಯಿಯನ್ನು ವ್ಯಯ ಮಾಡುತ್ತಿದೆ ಎನ್ನುವುದು ವಿಶೇಷ.
ಇದನ್ನೂ ಓದಿ : ಗೋಪಾಲ ಸ್ವಾಮಿ ಬೆಟ್ಟದಲ್ಲಿ ಹಳ್ಳಕ್ಕೆ ಜಾರಿದ ಬಸ್: ಅಪಾಯದಿಂದ ಪಾರಾದ ಪ್ರಯಾಣಿಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?