ಸೆಪ್ಪೆಂಬರ್ ಹೊತ್ತಿಗೆ ಕೋವಿಡ್ ಲಸಿಕೆ ಹಾಕಿಸಿ 3ನೇ ಅಲೆ ತಡೆಗಟ್ಟಿ: ಸುರೇಶ್ ಕುಮಾರ್
Team Udayavani, Jul 11, 2021, 7:59 PM IST
ಬೆಂಗಳೂರು : ರಾಜಾಜಿನಗರ ವಿಧಾನಸಭಾ , ಕ್ಷೇತ್ರದ ಬಸವೇಶ್ವರ ನಗರ, ಶ್ರೀರಾಮ ಮಂದಿರ, ಹಾಗೂ ರಾಜಾಜಿ ನಗರದ ಆಟದ ಮೈದಾನದಲ್ಲಿ ಕೂಲಿ ಕಾರ್ಮಿಕರು ಮತ್ತು ಮನೆ ಕೆಲಸದವರು ,ದೇವಸ್ಥಾನ ಸಿಬ್ಬಂದಿಗಳು ,ವಿಕಲಚೇತನರಿಗೆ ದಿನಸಿ ಸಾಮಾಗ್ರಿಗಳ ಕಿಟ್ ಗಳನ್ನು ಸ್ಥಳೀಯ ಶಾಸಕರು, ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ರವರು ವಿತರಿಸಿದರು.
ಇದೇ ಸಂದರ್ಭದಲ್ಲಿ ಸಚಿವರಾದ ಸುರೇಶ್ ಕುಮಾರ್ ರವರು ಮಾತನಾಡಿ, ಕೊರೋನ ವೈರಸ್ ಬರದಂತೆ ತಡೆಗಟ್ಟಲು ಕೊವಿಡ್-19ಲಸಿಕೆ ಪ್ರತಿಯೊಬ್ಬರು ಹಾಕಿಸಿಕೊಳ್ಳಬೇಕು. ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸಪ್ಪೆಂಬರ್ ಹೊತ್ತಿಗೆ ಎಲ್ಲರಿಗೂ ಲಸಿಕೆ ಹಾಕಲಾಗುವುದು .
ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಜನರ ಸಹಕಾರದಿಂದ ಕೊರೋನ ವೈರಸ್ ಹರಡದಂತೆ ತಡೆಯಬಹುದು . ಮಕ್ಕಳಿಗೆ ಕೊವಿಡ್ ಲಸಿಕೆ ಕ್ಲಿನಿಕಲ್ ಟ್ರಯಲ್ ನಡೆಯುತ್ತಿದೆ ಇನ್ನ ಮೂರು ತಿಂಗಳ ಅವಧಿಯಲ್ಲಿ ಮಕ್ಕಳಿಗೆ ಕೊವಿಡ್-19ಲಸಿಕೆ ಬರುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಸಚಿವರಾದ ಸುಧಾಕರ್ ರವರು ಹೇಳಿದ್ದಾರೆ .
ಕೊವಿಡ್ ನಿಯಮಾವಳಿ ಪಾಲಿಸುವಂತೆ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ರಾಘವೇಂದ್ರರಾವ್ ಮಂಡಲದ ಉಪಾಧ್ಯಕ್ಷರಾದ ಬಿ.ಎನ್.ಶ್ರೀನಿವಾಸ್ ಬಿ.ಜೆ.ಪಿ.ಮುಖಂಡರುಗಳಾದ ಅನಿಲ್ ರಂಗಣ್ಣ, ,ವೆಂಕಟೇಶ್ ಬಾಬು,ಮೋಹನ್ ರಾಜ್, ಸೂರಜ್ ವಾರ್ಡ್ ಅಧ್ಯಕ್ಷರಾದ ಕಿರಣ್ ರವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ