ಆದಾಯಕ್ಕಾಗಿ ಪೆಟ್ರೋಲ್‌ ಬಂಕ್ ಹಾದಿ ತುಳಿದ ಬಿಎಂಟಿಸಿ

10 ಕಡೆ ಜಾಗ ಗುರುತು?15 ದಿನಗಳಲ್ಲಿಟೆಂಡರ್‌ ಪ್ರಕ್ರಿಯೆ ಶುರು!  ತೈಲ ಮಾರಾಟಕ್ಕೆ ಮುಂದಾದ ನಿಗಮ

Team Udayavani, Jul 12, 2021, 1:07 PM IST

cats

 

  • ವಿಜಯಕುಮಾರ್‌ ಚಂದರಗಿ

ಬೆಂಗಳೂರು: ನಿರಂತರ ಆರ್ಥಿಕ ನಷ್ಟ ಎದುರಿಸುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪರ್ಯಾಯ ಆದಾಯ ಮೂಲಗಳತ್ತ ಮುಖಮಾಡುತ್ತಿದ್ದು,ಈ ನಿಟ್ಟಿನಲ್ಲಿ ಪೆಟ್ರೋಲ್‌- ಡೀಸೆಲ್‌ ಮಾರಾಟಕ್ಕೆ ಮುಂದಾಗಿದೆ! ಇದಕ್ಕಾಗಿ ಪೆಟ್ರೋಲ್‌ ಬಂಕ್‌ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಶಾಂತಿನಗರ, ಮೈಸೂರು ರಸ್ತೆ ಸೇರಿದಂತೆ ಕೇಂದ್ರಭಾಗದಲ್ಲಿರುವ ಆಯ್ದ ಹತ್ತು ಘಟಕಗಳನ್ನು ಗುರುತಿಸಲಾಗಿದೆ. ಅಲ್ಲಿ ಖಾಸಗಿ ವಾಹನಗಳಿಗೆ ಪೆಟ್ರೋಲ್‌ ಮತ್ತು ಡೀಸೆಲ್‌ ತುಂಬಲಿದೆ.

ಬಿಎಂಟಿಸಿ ಡಿಪೋಗಳಲ್ಲಿ ಖಾಲಿ ಜಾಗಗಳಿವೆ. ಅದನ್ನು ಬಂಕ್‌ ಸ್ಥಾಪನೆಗಾಗಿ ಬಾಡಿಗೆ ಕೊಡಬಹುದು ಅಥವಾ ಸ್ವತಃ ಸಾರಿಗೆ ಸಂಸ್ಥೆಯು ಡೀಲರ್‌ಶಿಪ್‌ ತೆಗೆದುಕೊಂಡು ನೇರವಾಗಿ ಗ್ರಾಹಕರಿಗೆ ಪೆಟ್ರೋಲ್‌-ಡೀಸೆಲ್‌ ಮಾರಾಟ ಮಾಡಬಹುದು. ಈ ಎರಡೂ ಮಾದರಿಗಳು ತನ್ನ ಮುಂದಿವೆ. ಸೂಕ್ತವಾದುದನ್ನು ಆಡಳಿತ ಮಂಡಳಿ ಮುಂದಿಟ್ಟು ತೀರ್ಮಾನ ಕೈಗೊಳ್ಳಲಿದೆ ಎಂದು ಮೂಲ ಗಳು ತಿಳಿಸಿವೆ. ಮೂಲಗಳಪ್ರಕಾರ ಡೀಲರ್‌ಶಿಪ್‌ಪಡೆಯಲುಬಿಎಂ ಟಿಸಿ ಆಸಕ್ತಿ ಹೊಂದಿದೆ. ಇದಕ್ಕಾಗಿ ಟೆಂಡರ್‌ ಕರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಒಂದು ವೇಳೆ ಇದೆಲ್ಲವೂ ಅಂದುಕೊಂಡಂತಾದರೆ, ಪೆಟ್ರೋಲ್‌- ಡೀಸೆಲ್‌ ನೇರ ಮಾರಾಟದಿಂದಲೇ ತಲಾ ಒಂದು ಬಂಕ್‌ನಿಂದ ಸಂಸ್ಥೆಗೆ ಕನಿಷ್ಠ ಐದು ಲಕ್ಷ ರೂ. ಆದಾಯ ಬರುತ್ತದೆ ಎಂದು ಅಂದಾಜಿಸಲಾಗಿದೆ.

ಆರಂಭದಲ್ಲಿ ಹತ್ತು ಡಿಪೋಗಳನ್ನು ತೆಗೆದುಕೊಂಡರೂ 50 ಲಕ್ಷ ರೂ. ಆಗುತ್ತದೆ. ಕೋವಿಡ್‌ ನಂತರ ಬಿಎಂಟಿಸಿ ಕಾರ್ಯಾಚರಣೆ ಆದಾಯ ಒಂದೂವರೆಕೋಟಿ ರೂ. ಇದೆ. ಅಂದರೆ ಹೆಚ್ಚು-ಕಡಿಮೆ ಶೇ. 30-40ರಷ್ಟು ಆದಾಯ ಹೆಚ್ಚು ಶ್ರಮವಿಲ್ಲದೆ, ಅನಾಯಾಸವಾಗಿ ಬರುತ್ತದೆ ಎನ್ನಲಾಗಿದೆ. ಸರ್ಕಾರದಒಂದುಅಂಗಸಂಸ್ಥೆಪೆಟ್ರೋಲ್‌-ಡೀಸೆಲ್‌ ಮಾರಾಟ ಮಾಡುವುದರಿಂದ ಗ್ರಾಹಕರಿಗೆ ಹೆಚ್ಚು ವಿಶ್ವಾಸ ಇರುತ್ತದೆ. ಅಲ್ಲದೆ, ಕೇಂದ್ರ ಭಾಗದಲ್ಲಿ ಡಿಪೋಗಳಿವೆ. ಈ ಕಾರಣಗಳಿಂದ ಸಹಜವಾಗಿ ಗ್ರಾಹಕರುಬಿಎಂಟಿಸಿಬಂಕ್‌ ಗಳಿಗೆ ಬರುತ್ತಾರೆ. ಬಂಕ್‌ಗಳಿಗೆ ಲೈಟ್‌ ಡ್ಯುಟಿಗೆ ನೇಮಿಸುವವರನ್ನು (ಸಾಮಾನ್ಯವಾಗಿ 50 ವರ್ಷ ಮೇಲ್ಪಟ್ಟವರು) ನಿಯೋಜಿಸಲು ಉದ್ದೇಶಿಸಲಾಗಿದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಉದಯವಾಣಿಗೆ ತಿಳಿಸಿದರು.

ಉಳಿತಾಯ ಮತ್ತು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಕೆಲಸಕ್ಕೆಕತ್ತರಿ,ಕಡ್ಡಾಯ ಸ್ವಯಂ ನಿವೃತ್ತಿಯಂತಹ ಹಲವು ಆಯ್ಕೆಗಳು ಬಿಎಂಟಿಸಿ ಮುಂದಿವೆ. ಆದರೆ, ಮುಂದಿನ ದಿನಗಳಲ್ಲಿ ಕೊರೊನಾ ಅಲೆಗಳುಬರುತ್ತಲೇ ಇರುತ್ತವೆ.ಹಾಗಾಗಿ,ಜನವೈಯಕ್ತಿಕ ವಾಹನಗಳತ್ತ ಮುಖಮಾಡುತ್ತಿದ್ದಾರೆ. ಈ ಮಧ್ಯೆ ನಮ್ಮ ಮೆಟ್ರೋ ಜಾಲ ವಿಸ್ತರಣೆಯಾಗುತ್ತಿದೆ. ಉಪನಗರ ರೈಲು ಕೂಡ ಬರುತ್ತಿದೆ. ಪರಿಣಾಮ ಮಹಾನಗರ ಸಾರಿಗೆ ಸಂಸ್ಥೆ ತನ್ನ ಪ್ರಯಾಣಿಕರನ್ನು ಕಳೆದುಕೊಳ್ಳುತ್ತಿದೆ. ಆದ್ದರಿಂದ ಶಾಶ್ವತಆದಾಯ ಮೂಲಕ್ಕಾಗಿ ಪೆಟ್ರೋಲ್‌ ಬಂಕ್‌ಗಳನ್ನು ತೆರೆಯಲು ಅದು ಆಸಕ್ತಿ ಹೊಂದಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು. ಮುಂದಿನ ದಿನಗಳಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇದೇ ಬಂಕ್‌ಗಳ ಆವರಣದಲ್ಲಿ ವಾಣಿಜ್ಯ ಮಳಿಗೆಗಳನ್ನು ತೆರೆಯಲೂ ಬಿಎಂಟಿಸಿ ಚಿಂತನೆ ನಡೆಸಿದೆ. ಇಲ್ಲಿ ರೈತರ ಉತ್ಪನ್ನಗಳ ನೇರ ಮಾರಾಟಕ್ಕೆ ವೇದಿಕೆಕಲ್ಪಿಸು ವುದು, ಇದರಿಂದ ಗ್ರಾಹಕರಿಗೆ ಗುಣಮಟ್ಟದ ತರಕಾರಿ- ಹಣ್ಣು ದೊರೆಯುತ್ತವೆ. ಮತ್ತೂಂದೆಡೆ ರೈತರಿಗೂ ಅನುಕೂಲ ಆಗುತ್ತದೆ.ಈನಿಟ್ಟಿನಲ್ಲಿ ರೈತ ಉತ್ಪಾದಕ ಸಂಘಗಳ ಹುಡುಕಾಟ ನಡೆದಿದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.