ದಿಢೀರನೆ ಸಚಿವ ಮುರುಗೇಶ್ ನಿರಾಣಿಯನ್ನು ಭೇಟಿಯಾದ ಸಂಸದೆ ಸುಮಲತಾ ಅಂಬರೀಶ್
Team Udayavani, Jul 12, 2021, 4:53 PM IST
ಬೆಂಗಳೂರು: ಮಂಡ್ಯ ಲೋಕಸಭಾ ಸದಸ್ಯರಾಗಿರುವ ಸುಮಲತಾ ಅಂಬರೀಶ್ ಇಂದು ( ಸೋಮವಾರ) ಗಣಿ ಮತ್ತು ಭೂ ವಿಜ್ಞಾನ ಸಚಿವರಾಗಿರುವ ಮುರುಗೇಶ್ ನಿರಾಣಿ ಅವರನ್ನು ಸಚಿವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ಇದೇ ವೇಳೆ ಸಚಿವರಿಗೆ ಮನವಿ ಸಲ್ಲಿಸಿರುವ ಸುಮಲತಾ ಅಂಬರೀಶ್, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಲವು ಅರಣ್ಯ ಪ್ರದೇಶದಲ್ಲಿ ಅಕ್ರಮ ಕಲ್ಲು ಗಣಿಗಾರಿಗೆ ಮಾಡಲಾಗುತ್ತಿದೆ. ಇದರಿಂದ ರೈತರಿಗೆ, ಪರಿಸರಕ್ಕೆ ಹಾಗೂ ಕೆಆರ್ ಎಸ್ ಅಣೆಕಟ್ಟೆಗೆ ದೊಡ್ಡ ಮಟ್ಟದಲ್ಲಿ ಹಾನಿಯಾಗುತ್ತಿದೆ. ಈ ಗಣಿಗಾರಿಗೆಯನ್ನು ಕೂಡಲೇ ತಡೆಯಬೇಕೆಂದು ಸಚಿವರಿಗೆ ಸುಮಲತಾ ಪತ್ರ ಬರೆದಿದ್ದಾರೆ.
ಗಣಿಗಾರಿಗೆ ಕುರಿತಂತೆ ಈ ಹಿಂದೆ ಹಲವು ಬಾರಿ ನೋಟಿಸ್ ನೀಡಲಾಗಿದೆ. ಅಲ್ಲದೆ ರಾಜಧನ 1200 ಕೋಟಿ ಮತ್ತು ದಂಡವನ್ನು ವಸೂಲಾತಿ ಮಾಡಿ ಸರ್ಕಾರದ ಬೊಕ್ಕಸಕ್ಕೆ ಒಪ್ಪಿಸಬೇಕೆಂದು ಸುಮಲತಾ ಅಂಬರೀಶ್ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಇನ್ನು ಕಳೆದ ಹಲವು ದಿನಗಳಿಂದ ಕೆಆರ್ ಎಸ್ ಬಿರುಕು ವಿಚಾರವಾಗಿ ಮತ್ತು ಅಕ್ರಮ ಗಣಿಗಾರಿಗೆ ಕುರಿತಂತೆ ಸುಮಲತಾ ಅಂಬರೀಶ್ ಮತ್ತು ಕುಮಾರಸ್ವಾಮಿ ನಡುವೆ ವಾಗ್ವಾದ ನಡೆದಿದ್ದವು. ಇದೀಗ ಮನವಿ ಪತ್ರ ಸಲ್ಲಿಕೆ ಮಾಡಿರುವುದು ಕೂಡ ಎಲ್ಲರ ಗಮನ ಸೆಳೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ