ಡ್ರಗ್ಸ್‌ ಹಾವಳಿ: ವಿದೇಶಿ ವಿದ್ಯಾರ್ಥಿಗಳ ಮೇಲೆ ವಿಶೇಷ ನಿಗಾ


Team Udayavani, Jul 13, 2021, 3:46 AM IST

ಡ್ರಗ್ಸ್‌ ಹಾವಳಿ: ವಿದೇಶಿ ವಿದ್ಯಾರ್ಥಿಗಳ ಮೇಲೆ ವಿಶೇಷ ನಿಗಾ

ಮಂಗಳೂರು: ನಗರದ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ಪದಾರ್ಥಗಳ ವ್ಯವಹಾರ ನಡೆಯುತ್ತಿದೆ ಎಂಬ ಪೊಲೀಸರ ಮಾಹಿತಿಯ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿಗಳು ಈಗಾಗಲೇ ಇರುವ ಡ್ರಗ್ಸ್‌ ತಡೆ ಸಮಿತಿ ಮತ್ತು ಆ್ಯಂಟಿ ಡ್ರಗ್ಸ್‌ ಸ್ಕ್ವಾಡ್‌ಗಳನ್ನು ಇನ್ನಷ್ಟು ಕ್ರಿಯಾಶೀಲಗೊಳಿಸಲು ಮುಂದಾಗಿವೆ.

ಲಾಕ್‌ಡೌನ್‌ ಅವಧಿಯಲ್ಲಿ ಕಾಲೇಜು ಕ್ಯಾಂಪಸ್‌, ಹಾಸ್ಟೆಲ್‌ಗ‌ಳಲ್ಲಿ ವಿದ್ಯಾರ್ಥಿಗಳು ಇಲ್ಲದಿದ್ದರೂ ಕೆಲವು ವಿದ್ಯಾರ್ಥಿಗಳ ಕೈಗೆ ಡ್ರಗ್ಸ್‌ ತಲುಪಿಸುವಲ್ಲಿ ಡ್ರಗ್ಸ್‌ ಪೆಡ್ಲರ್‌ಗಳು ಯಶಸ್ವಿಯಾಗಿದ್ದಾರೆ. ಹಲವು ಪ್ರಕರಣಗಳಲ್ಲಿ ಪೊಲೀಸರ ಸಕಾಲಿಕ ಕಾರ್ಯಾಚರಣೆಯಿಂದಾಗಿ ಜಾಲದ ಕೆಲವು ಕೊಂಡಿಗಳು ಕಡಿದುಕೊಂಡಿವೆ. ಮುಂದೆ ಕಾಲೇಜುಗಳು, ಹಾಸ್ಟೆಲ್‌ಗ‌ಳು ತೆರೆದುಕೊಂಡಾಗ ಡ್ರಗ್ಸ್‌ ಚಟುವಟಿಕೆ ಹೆಚ್ಚಾಗಬಹುದು ಎಂಬ ಹಿನ್ನೆಲೆಯಲ್ಲಿ ಹೆಚ್ಚಿನ ನಿಗಾ ಇಡಲು ಯೋಜಿಸಲಾಗಿದೆ.

ವಿದೇಶೀಯರ ಸಂಪರ್ಕ
ಡ್ರಗ್ಸ್‌ ಮಾರಾಟ ಪ್ರಕರಣಗಳಿಗೆ ಸಂಬಂಧಿಸಿ ಮಂಗಳೂರು ಪೊಲೀಸರು ಈಗಾಗಲೇ ಬೆಂಗಳೂರಿನಿಂದ ವಿದೇಶಿ ಪ್ರಜೆಗಳನ್ನು ಕೂಡ ವಶಕ್ಕೆ ಪಡೆದಿದ್ದಾರೆ.

ವಿದ್ಯಾಭ್ಯಾಸಕ್ಕೆಂದು ಬಂದಿರುವ ಕೆಲವರು ಅಕ್ರಮವಾಗಿ ನೆಲೆಸಿದ್ದಾರೆ. ಡ್ರಗ್ಸ್‌ ಪೆಡ್ಲರ್‌ಗಳು ಬೆಂಗಳೂರಿನಲ್ಲಿದ್ದುಕೊಂಡೇ ಮಂಗಳೂರು, ಕಾಸರಗೋಡು ಭಾಗದ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಸಾಧಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿಯೂ ಭಾಗಿ
ಪೊಲೀಸರ ವಶವಾದವರ ಪೈಕಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮತ್ತು ಓರ್ವ ವಿದ್ಯಾರ್ಥಿಯೂ ಸೇರಿದ್ದಾರೆ. ಕೆಲವರು ಸ್ವಯಂ ಡ್ರಗ್ಸ್‌ ವ್ಯಸನಿ ಗಳಾಗಿದ್ದು ದುಬಾರಿ ಡ್ರಗ್ಸ್‌ ಖರೀದಿಗೆ, ಇನ್ನು ಕೆಲವರು ಶೋಕಿ ಜೀವನಕ್ಕಾಗಿ ಹಣ ಹೊಂದಿಸಿ ಕೊಳ್ಳಲು ಮಾರಾಟ, ಸಾಗಾಟದಲ್ಲಿ ತೊಡಗಿಸಿ ಕೊಂಡಿದ್ದಾರೆ.

ಕಮಿಟಿಗೆ ಜವಾಬ್ದಾರಿ
ಕಾಲೇಜುಗಳಲ್ಲಿ ಆ್ಯಂಟಿ ಡ್ರಗ್ಸ್‌ ಕಮಿಟಿ, ಆ್ಯಂಟಿ ಡ್ರಗ್ಸ್‌ ಸ್ಕ್ವಾಡ್‌, ಆ್ಯಂಟಿ ರ್ಯಾಗಿಂಗ್‌ ಕಮಿಟಿ ಗಳನ್ನು ರಚಿಸಬೇಕು. ಇದರಲ್ಲಿ ಪ್ರಾಂಶು ಪಾಲರು, ಆಪ್ತ ಸಮಾಲೋಚಕರು, ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿಗಳು, ಉಪನ್ಯಾಸಕರು ಮತ್ತು ಪೊಲೀಸರು ಇರಬೇಕು. ಈಗಾಗಲೇ ಕಮಿಟಿ ಇರುವ ಕಡೆಗಳಲ್ಲಿ ಹೆಚ್ಚು ಕ್ರಿಯಾಶೀಲವಾಗುವಂತೆ ನೋಡಿಕೊಳ್ಳಬೇಕು. ಹೆತ್ತವರು ಕೂಡ ಮಕ್ಕಳ ಚಟುವಟಿಕೆ, ವರ್ತನೆ ಬಗ್ಗೆ ಗಮನ ಹರಿಸುತ್ತಿರಬೇಕು ಎನ್ನುತ್ತಾರೆ ಪೊಲೀಸ್‌ ಅಧಿಕಾರಿಗಳು.

ಎಲ್ಲ ಕಾಲೇಜುಗಳಿಗೂ ಸೂಚನೆ
ಡ್ರಗ್ಸ್‌ ವಿರುದ್ಧ ಈಗಾಗಲೇ ಜಾಗೃತಿ ಕಾರ್ಯಕ್ರಮ ನಡೆಸಲಾಗಿದೆ. ವೈದ್ಯಕೀಯ ಕಾಲೇಜುಗಳು ನಮ್ಮ ವಿ.ವಿ.ಯ ನಿಯಂತ್ರಣದಲ್ಲಿಲ್ಲ. ಇತರ 207 ಕಾಲೇಜುಗಳಿಗೂ ಆ್ಯಂಟಿ ಡ್ರಗ್ಸ್‌ ಕಮಿಟಿ ರಚಿಸಲು ಯುಜಿಸಿ ಕೂಡ ಸೂಚಿಸಿದೆ. 38 ದೇಶಗಳ ವಿದ್ಯಾರ್ಥಿಗಳು ಕೂಡ ನಮ್ಮ ಕಾಲೇಜುಗಳಲ್ಲಿದ್ದು, ಅವರ ಮೇಲೆ ವಿಶೇಷ ನಿಗಾ ಇಡಲಾಗುವುದು. ಮಾದಕ ದ್ರವ್ಯ ಜಾಲಕ್ಕೆ ಬೀಳದಂತೆ ವಿದ್ಯಾರ್ಥಿಗಳು ಸ್ವಯಂ ಜಾಗೃತರಾಗಬೇಕು.
– ಪ್ರೊ| ಪಿ.ಎಸ್‌. ಯಡಪಡಿತ್ತಾಯ, ಕುಲಪತಿಗಳು, ಮಂಗಳೂರು ವಿಶ್ವವಿದ್ಯಾನಿಲಯ

ಸಿಂಥೆಟಿಕ್‌ ಡ್ರಗ್ಸ್‌ ಅಧಿಕ
ಕಾಲೇಜು ವಿದ್ಯಾರ್ಥಿಗಳಿಗೆ ಸಿಂಥೆಟಿಕ್‌ ಡ್ರಗ್ಸ್‌, ಗಾಂಜಾಗಳನ್ನು ಪೂರೈಸುತ್ತಿದ್ದ ಜಾಲವನ್ನು ಪತ್ತೆಹಚ್ಚಿ ತನಿಖೆ ನಡೆಸಲಾಗುತ್ತಿದೆ. ಸಿಂಥೆಟಿಕ್‌ ಡ್ರಗ್ಸ್‌ ಭಾರೀ ಪ್ರಮಾಣದಲ್ಲಿ ದಾಸ್ತಾನು ಇರುವುದು ಗೊತ್ತಾಗಿದೆ. ವಿದ್ಯಾರ್ಥಿಗಳ ಕೈಗೆ ದೊರೆಯದಂತೆ ಮಾಡುವುದರ ಜತೆಗೆ ಡ್ರಗ್ಸ್‌ ಹಾವಳಿಯನ್ನು ಸಂಪೂರ್ಣ ಮಟ್ಟ ಹಾಕುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
– ಹರಿರಾಂ ಶಂಕರ್‌, ಡಿಸಿಪಿ, ಮಂಗಳೂರು

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.