ಎತ್ತಿನ ಹೊಳೆಯೋಜನೆಗೆ ಮರು ಜೀವ

ಬೈರಗೊಂಡ್ಲು ಜಲಾಶಯ ನಿರ್ಮಾಣದ ಸರ್ವೆ ಕಾರ್ಯಕ್ಕೆ ಡೀಸಿ ಆದೇಶ „ ಅವಳಿ ಜಿಲ್ಲೆಗೂ ನೀರು ಹರಿಸಲು ಅನುಕೂಲ

Team Udayavani, Jul 13, 2021, 2:08 PM IST

12_7_dbp_2_1207bg_2

ಡಿ.ಶ್ರೀಕಾಂತ

ದೊಡ್ಡಬಳ್ಳಾಪುರ: ಬಯಲು ಸೀಮೆಗೆ ನೀರುಣಿಸುವ ರಾಜ್ಯ ಸರ್ಕಾರದ ಎತ್ತಿನಹೊಳೆ ಯೋಜನೆ ಕಾಮಗಾರಿ ಗಳು ಭರದಿಂದ ಸಾಗಿವೆ. ಯೋಜನೆಯ ಪ್ರಮುಖ ಅಂಗವಾದ ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಒಳಪಡುವ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಆಯ್ದ ಗ್ರಾಮಗಳಲ್ಲಿ ಸರ್ವೆ ಕಾರ್ಯ ಮತ್ತು ಜಿಯೋಟೆಕ್ನಿಕಲ್‌ ತನಿಖೆ ಮಾಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿರುವುದು ಯೋಜನೆಗೆ ಮರು ಜೀವ ಬಂದಂತಾಗಿದೆ.

ಬೈರಗೊಂಡ್ಲು ಜಲಾಶಯ ನಿರ್ಮಾಣ: ಎತ್ತಿನಹೊಳೆ ಯೋಜನೆಗಾಗಿ ನಿರ್ಮಾಣಗೊಳ್ಳಲಿರುವ ಬೈರ ಗೊಂಡ್ಲು ಜಲಾಶಯ ನಿರ್ಮಾಣಕ್ಕಾಗಿ ದೊಡ್ಡಬಳ್ಳಾ ಪುರ ತಾಲೂಕಿನ ಸಾಸಲು ಹೋಬಳಿಯ 11 ಗ್ರಾಮಗಳು ಹಾಗೂ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ 17 ಗ್ರಾಮಗಳು ಮುಳುಗಡೆಯಾಗಲಿವೆ. ಬೈರಗೊಂಡ್ಲು ಜಲಾಶಯದ ಏರಿ ಹಾಗೂ ಮುಳಗಡೆ ಪ್ರದೇಶ ತುಮಕೂರು ಜಿಲ್ಲೆಯಕೊರಟೆಗೆರೆ ತಾಲೂಕು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಗುರುತಿಸಲಾಗಿದೆ.

ಅಂತಿಮ ಹಂತದಲ್ಲಿದೆ ಪೈಪ್‌ಲೈನ್‌ ಕಾಮಗಾರಿ: ಏರಿಯ ಉದ್ದ 4.62 ಕಿ.ಮೀ ಇದೆ. ಈ ಜಲಾಶಯದ ಒಟ್ಟಾರೆ ಮುಳುಗಡೆ ಪ್ರದೇಶ 5,200 ಎಕರೆಯಾ ಗಿದ್ದು, ತಾಲೂಕಿನ 2,534 ಎಕರೆ ಮುಳುಗಡೆ ಯಾಗಲಿದ್ದು, ಭೂ ಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಕೊರಟಗೆರೆವರೆಗೆ ಹಾಗೂ ತಾಲೂಕಿನ ಸಾಸಲು ಹೋಬಳಿಯಲ್ಲಿ ಪೈಪ್‌ಲೈನ್‌ ಕಾಮಗಾರಿಗಳು ಅಂತಿಮ ಹಂತದಲ್ಲಿವೆ.

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಒಟ್ಟು11 ಗ್ರಾಮಗಳಲ್ಲಿ ಲಕ್ಕೇನ ಹಳ್ಳಿ, ಗರುಡುಗಲ್ಲು ಗ್ರಾಮಗಳು ಪೂರ್ಣ ಮುಳುಗಡೆ ಯಾಗಲಿದೆ. ಮಚ್ಚೇನಹಳ್ಳಿ, ಶ್ರೀರಾಮನಹಳ್ಳಿ, ಶಿಂಗೇನ ಹಳ್ಳಿ, ಭಾಗಶಃ ಮುಳುಗಡೆಯಾಗಲಿದ್ದು, ಪ್ರಸ್ತಾವನೆ ಅಂತಿಮ ಹಂತದಲ್ಲಿದೆ. ಗಾಣದಾಳು, ಕನಕೇನಹಳ್ಳಿ, ನರಸಾಪುರ, ಆಲಪ್ಪನಹಳ್ಳಿ, ಬೈಯಪ್ಪನಹಳ್ಳಿ, ಅಂಕೋನ ಹಳ್ಳಿ ಗ್ರಾಮಗಳು ಯೋಜನೆಯ ವ್ಯಾಪ್ತಿಗೆ ಒಳಪಡ ಲಿದ್ದು, ಪ್ರಸ್ತಾವನೆ ಸಲ್ಲಿಸಲಾಗಿದೆ.

ವಿವಿಧೆಡೆ ಭೂ ಸ್ವಾಧೀನ: ದೊಡ್ಡಬಳ್ಳಾಪುರದಲ್ಲಿ ಎತ್ತಿನಹೊಳೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿಗಳ ಕಚೇರಿ ಕಾರ್ಯ ನಿರ್ವಹಿಸುತ್ತಿದೆ. ಬೈರಗೊಂಡ್ಲು ಜಲಾಶಯ ನಿರ್ಮಾಣದ ವ್ಯಾಪ್ತಿಗೆ ಟಿ.ಜಿ.ಹಳ್ಳಿ- ರಾಮನಗರ – ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಫೀಡರ್‌ಕಾಲುವೆ ಯೋಜನೆಬರಲಿದ್ದು, ಇದರಲ್ಲಿ ನೆಲಮಂಗಲ ತಾಲೂಕಿನ 33 ಗ್ರಾಮಗಳು, ರಾಮನಗರದ ಮಾಗಡಿ ತಾಲೂಕಿನ2ಗ್ರಾಮಗಳು ಸೇರಿ 35 ಗ್ರಾಮಗಳ 83 ಎಕರೆ ಭೂ ಸ್ವಾಧೀನ ನಡೆಯಲಿದೆ. ಗೌರಿಬಿದನೂರು ದೊಡ್ಡಬಳ್ಳಾಪುರ ಗ್ರಾವಿಟಿ ಫೀಡರ್‌ ಕಾಲುವೆ ಯೋಜನೆಗೆ ದೊಡ್ಡಬಳ್ಳಾ ಪುರ ತಾಲೂಕಿನ 17 ಗ್ರಾಮಗಳ 53 ಎಕರೆ, ಗೌರಿಬಿದನೂರು ತಾಲೂಕಿನ35 ಗ್ರಾಮಗಳ92 ಎಕರೆ ಸೇರಿ 145 ಎಕರೆ ಭೂಸ್ವಾಧೀನ ನಡೆಯಲಿದೆ. ಇದರಿಂದ ಕೋಲಾರ – ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಎತ್ತಿನ ಹೊಳೆ ನೀರು ಹರಿಸಲು ಅನುಕೂಲವಾಗಲಿದೆ.

ಸರ್ವೆ ಕಾರ್ಯಕ್ಕೆ ಸಹಕಾರ ನೀಡಿ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಿಂದ ಬೆಂಗಳೂರು ಗ್ರಾಮಾಂತರ, ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಕಲ್ಪಿಸಲು ಉದ್ದೇಶಿಸಿ ರುವ ಬೈರಗೊಂಡಲು ಜಲಾಶಯದ ನಿರ್ಮಾಣಕ್ಕಾಗಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿ, ಗರಡುಗಲ್ಲು, ಮಚ್ಚೇನಹಳ್ಳಿ, ಶೀರಾಮನ ಹಳ್ಳಿ, ಶಿಂಗೇನಹಳ್ಳಿ, ಗಾಣದಾಳು, ಕಣಕೇನಹಳ್ಳಿ, ನರಸಾಪುರ, ಆಲಪ್ಪನಹಳ್ಳಿ, ಬೈಯಪ್ಪನಹಳ್ಳಿ ಮತ್ತು ಅಂಕೋನಹಳ್ಳಿ ಗ್ರಾಮಗಳಲ್ಲಿ ಜಲಾಶಯ ಮುಳುಗಡೆಯ ಸಾಧಕ ಬಾಧಕಗಳ ಸರ್ವೆ ಕಾರ್ಯ ಮಾಡಲು ಸರ್ಕಾರದಿಂದ ನಿರ್ದೇಶನವಿದೆ.

ದೊಡ್ಡಬಳ್ಳಾಪುರ ಜಲಾಶಯದ ಸರ್ವೆ ಕಾರ್ಯ ಮಾಡಿದ್ದಲ್ಲಿ ಮಾತ್ರ ಜಲಾಶಯದ ಮುಳುಗಡೆ ಪ್ರದೇಶದ ನಿಖರವಾಗಿ ಭೂ ಸ್ವಾಧೀನಕ್ಕೆ ಒಳಪಡುವ ವಿಸ್ತೀರ್ಣ,ಭೂ ಪರಿಹಾರ ಮೊತ್ತ, ಪುನರ್ವಸತಿ ಮತ್ತು ಪುನರ್‌ ನಿರ್ಮಾಣದ ಅಂದಾಜು ಲೆಕ್ಕಚಾರ ಮಾಡ ಲಾಗುವುದು. ಜಲಾಶಯದ ಸಾಧಕ ಬಾಧಕಗಳ ಸರ್ವೆ ಕಾರ್ಯದಿಂದ ಭೂಮಿಗಾಗಲಿ ಅಥವಾ ವೈಯಕ್ತಿಕ ದಿನ ನಿತ್ಯಕೆಲಸ ಕಾರ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ತನಿಖೆ ಮಾಡಲು ಸ್ಥಳೀಯ ಜನರು ಅಡ್ಡಿಪಡಿಸದೆ ಸಹಕಾರ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.