ಕರಣಕುಪ್ಪೆ ಗ್ರಾಮ ಪಂಚಾಯತ್ ಗೆ ಶಾಸಕ ಎಚ್. ಪಿ. ಮಂಜುನಾಥ್ ಪ್ರಶಂಸೆ

ಸರ್ವಾಂಗೀಣ ಪ್ರಗತಿಗಾಗಿ ರಾಷ್ಟ್ರಮಟ್ಟದ ಪ್ರಶಸ್ತಿಗಳಿಸಿ ಎಲ್ಲ ಪಂಚಾಯ್ತಿಗಳಿಗೆ ಮಾದರಿಯಾಗಿ ಪ್ರತಿಬಿಂಬಿಸುತ್ತಿರುವುದು ಹೆಮ್ಮೆಯ ಸಂಗತಿ : ಶಾಸಕ ಎಚ್.ಪಿ.ಮಂಜುನಾಥ್

Team Udayavani, Jul 13, 2021, 7:10 PM IST

Mysore News

ಹುಣಸೂರು : ತಾಲೂಕಿನ ಕರಣಕುಪ್ಪೆ ಗ್ರಾಮ ಪಂಚಾಯ್ತಿಯು ಜಲ ಮರು ಹೂರಣ, ಸ್ವಚ್ಚತೆ, ಶಿಕ್ಷಣ ಪ್ರಗತಿ ಸೇರಿದಂತೆ ಸರ್ವಾಂಗೀಣ ಪ್ರಗತಿಗಾಗಿ ರಾಷ್ಟ್ರಮಟ್ಟದ ಪ್ರಶಸ್ತಿಗಳಿಸಿ ಎಲ್ಲ ಪಂಚಾಯ್ತಿಗಳಿಗೆ ಮಾದರಿಯಾಗಿ ಪ್ರತಿಬಿಂಬಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ಎಚ್.ಪಿ.ಮಂಜುನಾಥ್ ಪ್ರಶಂಸಿಸಿದರು.

ಗ್ರಾ.ಪಂ.ವತಿಯಿಂದ ಕಣಗಾಲು ಗ್ರಾಮದಲ್ಲಿ ಆಯೋಜಿಸಿದ್ದ ಸುಭದ್ರ ಶಾಲಾ ಯೋಜನೆ, ಹೈಟೆಕ್ ಸ್ಮಶಾನ ಅಭಿವೃದ್ದಿ ಕಾಮಗಾರಿಗೆ, ಮಾಸ್ಕ್ ವಿತರಣೆಗೆ  ಚಾಲನೆ ನೀಡಿ,  ಐಟಿಸಿ, ಔಟ್‌ ರಿಚ್ ಸಹಯೋಗದ ಜೀವ ವೈವಿದ್ಯ ವನ ನಿರ್ಮಾಣ ಕಾರ್ಯಕ್ರಮದಡಿ ಎಂ.ಎಲ್.ಸಿ.ಯಾದ ಅಡಗೂರುಎಚ್.ವಿಶ್ವನಾಥರೊಂದಿಗೆ ಸಸಿನೆಟ್ಟು, ಕೆರೆ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಿಸಿ ನಂತರ ಶಾಲಾ ಆವರಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ತಾಲೂಕಿನ 41 ಗ್ರಾ.ಪಂ.ಗಳ ಪೈಕಿ ಕರಣಕುಪ್ಪೆ ಪಂಚಾಯ್ತಿಯು ನರೇಗಾ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಎಲ್ಲ ವಿಭಾಗಗಳಲ್ಲೂ ಅತ್ಯುತ್ತಮ ಸಾಧನೆ ಮಾಡಿ ರಾಜ್ಯಕ್ಕೆ ಒಳ್ಳೆ ಹೆಸರು ತಂದುಕೊಟ್ಟಿದೆ.

ಇದನ್ನೂ ಓದಿ : ಸುರತ್ಕಲ್ : ಮನೆಗೆ ನುಗ್ಗಿದ ಕಳ್ಳರು, 14 ಲಕ್ಷ ರೂ. ಮೌಲ್ಯದ ಚಿನ್ನ ಕದ್ದು ಪರಾರಿ

ಪಂಚಾಯ್ತಿ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಕೆರೆಗಳು, ಶಾಲೆ ಅಂಗನವಾಡಿ ಕೇಂದ್ರಗಳನ್ನು ಅಭಿವೃದ್ದಿಗೊಳಿಸುತ್ತಿದ್ದು. ಇತರೆ ಗ್ರಾ.ಪಂ.ಗಳು ಈ ಮಾದರಿಯನ್ನು ಅನುಸರಿಸಿದಲ್ಲಿ ಗ್ರಾಮಾಭಿವೃದ್ದಿಯಾಗಲು ನೆರವಾಗಲಿದೆ. ಮುಖ್ಯವಾಗಿ ಜಲ ಮರು ಹೂರಣ ಕಾರ್ಯಕ್ರಮಕ್ಕೆ ಮತ್ತಷ್ಟು ಆದ್ಯತೆ ನೀಡಬೇಕೆಂದು ಆಶಿಸಿ. ಐಟಿಸಿ, ಔಟ್‌ ರೀಚ್ ಸಂಸ್ಥೆಯ ಗ್ರಾಮೀಣಾಭಿವೃದ್ದಿ ಕಾರ್ಯವನ್ನು ಶ್ಲಾಘಿಸಿದರು.

ಎಂ.ಎಲ್.ಸಿ.ವಿಶ್ವನಾಥ್ ಮಾತನಾಡಿ ಈ ಪಂಚಾಯ್ತಿ ಶಿಕ್ಷಣ, ಅಂತರ್ಜಲ ವೃದ್ದಿಗೆ ಹೆಚ್ಚಿನ ಆದ್ಯತೆ ನೀಡಿರುವುದು ಶ್ಲಾಘನೀಯ. ಪ್ರಜಾಪ್ರಭುತ್ವ ಗಟ್ಟಿಗೊಳ್ಳಲು ಪ್ರತಿಯೊಬ್ಬರು ಶಿಕ್ಷಣ ಪಡೆಯುವುದು ಅತ್ಯವಶ್ಯ, ವಿದ್ಯೆಯ ಪ್ರಾಮುಖ್ಯತೆಯನ್ನರಿತು ತಾವು ಶಿಕ್ಷಣ ಮಂತ್ರಿಯಾಗಿದ್ದಾಗ ಶಾಲೆಗಳಿಗೆ ಶುದ್ದ ಕುಡಿಯುವ ನೀರು, ಬಿಸಿಯೂಟ, ಕಟ್ಟಡ, ಕಾಂಪೌಂಡ್,  ಶೌಚಾಲಯ ನಿರ್ಮಾಣ ಹೀಗೆ ಹೊಸ ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತಂದ ಪರಿಣಾಮ ಉತ್ತರ ಕರ್ನಾಟಕದಲ್ಲಿ  2000ರಲ್ಲಿ ಶೇ.30ರಷ್ಟಿದ್ದ ಅಕ್ಷರಸ್ಥರ ಸಂಖ್ಯೆ ಇಂದು ಶೇ.೮೦ಕ್ಕೇರಿದೆ ಎಂದರು.

ಸ್ತ್ರೀ ಶಕ್ತಿಯ ಮೌನಕ್ರಾಂತಿ:  ಎಸ್.ಎಂ.ಕೃಷ್ಣರ ಅವಧಿಯಲ್ಲಿ ಹುಟ್ಟು ಹಾಕಿದ ಸ್ತ್ರೀಶಕ್ತಿ ಸಂಘಗಳು ದೊಡ್ಡ ಮೌನ ಕ್ರಾಂತಿಯನ್ನೇ ನಡೆಸಿವೆ. ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ರಷ್ಟು ಮೀಸಲಾತಿ ಪಡೆದಿದ್ದಾರೆ. ಎಲ್ಲ ರಂಗಗಳಲ್ಲೂ ಛಾಪು ಮೂಡಿಸಿದ್ದಾರೆ. ಗ್ರಾ.ಪಂ.ಗಳಲ್ಲಿ ಸಮರ್ಥ ಆಡಳಿತ ನೀಡುತ್ತಿದ್ದು, ವಿದ್ಯಾವಂತರಾದಲ್ಲಿ ಹಣಕಾಸು, ಆಡಳಿತ ನಿರ್ವಹಣೆ ಸಾದ್ಯವೆಂದರು.

ಪಿಡಿಓ ರಾಮಣ್ಣ ಮಾತನಾಡಿ ಗ್ರಾ.ಪಂ.ನಲ್ಲಿ ಈ ಬಾರಿ 15 ಕೆರೆಗಳು, ಸ್ಮಶಾನ ಅಭಿವೃದ್ದಿ ಕೈಗೊಳ್ಳಲಾಗುವುದು. 175 ಮಕ್ಕಳಿರುವ ಕಣಗಾಲು ಶಾಲೆಯನ್ನು ಸುಭದ್ರ ಶಾಲೆ ಕಾರ್ಯಕ್ರಮದಡಿ ಸರ್ವಾಂಗೀಣ ಅಭಿವೃದ್ದಿ ಪಡಿಸಲಾಗುವುದು. ದಾನಿಗಳ ನೆರವಿನಿಂದ ಮಾಸ್ಕ್ ಬ್ಯಾಂಕ್ ಮೂಲಕ  2 ಸಾವಿರ ಮಾಸ್ಕ್‌ಗಳನ್ನು ಸಂಗ್ರಹಿಸಲಾಗಿದ್ದು, ಪಂಚಾಯ್ತಿ ವ್ಯಾಪ್ತಿಯ ಎಲ್ಲರಿಗೂ ವಿತರಿಸಲಾಗುವುದೆಂದರು.

ಗ್ರಾ.ಪಂ.ಅಧ್ಯಕ್ಷೆ ಸರಸ್ವತಿ ಅಧ್ಯಕ್ಷತೆವಹಿಸಿದ್ದರು, ಉಪಾಧ್ಯಕ್ಷ ಕುಮಾರಸ್ವಾಮಿ, ತಹಸೀಲ್ದಾರ್ ಬಸವರಾಜು, ಇಒ ಗಿರೀಶ್, ಬಿಇಓ ನಾಗರಾಜ್, ಸಿ.ಆರ್.ಪಿ.ಪ್ರಸನ್ನ, ಮುಖ್ಯಶಿಕ್ಷಕ ಕುಬೇರ, ಹುಡಾ ಅಧ್ಯಕ್ಷ ಗಣೇಶ್‌ಕುಮಾರಸ್ವಾಮಿ, ಸದಸ್ಯರಾದ ಪಾಪಣ್ಣ, ಹರೀಶ್‌ಮಾವುಡು, ಸುಂದರ್, ಮಾದೇಗೌಡ, ಮಂಜುಳ, ರಾಣಿ, ಸುಂದರಮ್ಮ, ಸೋಮಶೇಖರ್, ವೆಂಕಟಯ್ಯ, ಕುಮಾರಸ್ವಾಮಿ,  ಮಾಜಿ ಸದಸ್ಯ ರವಿಕುಮಾರ್, ಇಂಜಿನಿಯರ್ ಪವಿತ್ರ, ಔಟ್‌ ರೀಚ್‌ ನ ಜಗದೀಶ್, ಮಹದೇವ್, ಡೇರಿ ಅಧ್ಯಕ್ಷ ಮಾದೇಗೌಡ, ಯಜಮಾನರಾದ ಕುಂಟನಾಯ್ಕ, ರಾಮೇಗೌಡ, ಮುಖಂಡರಾದ ರಾಮೇಗೌಡ, ರಾಘವೇಂದ್ರ, ಮಹೇಶ್‌ ಕುಮಾರ್ ಮತ್ತಿತರರಿದ್ದರು.

ಇದನ್ನೂ ಓದಿ : ಭಾರತದಲ್ಲಿ ಸ್ಪುಟ್ನಿಕ್ ಲಸಿಕೆ ಸೆಪ್ಟೆಂಬರ್‌ ನಿಂದ ಉತ್ಪಾದನೆ ಪ್ರಾರಂಭ : RDIF, SII

ಟಾಪ್ ನ್ಯೂಸ್

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.