ಕೋವಿಡ್ ನಿಂದ ಮಕ್ಕಳ ರಕ್ಷಣೆಯೇ ನಮ್ಮ ಪ್ರಥಮ ಆದ್ಯತೆ: ಸಚಿವ ಆರ್ ಅಶೋಕ್


Team Udayavani, Jul 13, 2021, 9:10 PM IST

ಕೋವಿಡ್ ನಿಂದ ಮಕ್ಕಳ ರಕ್ಷಣೆಯೇ ನಮ್ಮ ಪ್ರಥಮ ಆದ್ಯತೆ: ಸಚಿವ ಆರ್ ಅಶೋಕ್

ಬೆಂಗಳೂರು : “ಸಂಭವನೀಯ ಮೂರನೇ ಅಲೆಯನ್ನು ನಿಭಾಯಿಸಲು ಕರ್ನಾಟಕ ಸರ್ಕಾರ ಸಜ್ಜಾಗಿದ್ದು, ಮಕ್ಕಳನ್ನ ಇದರಿಂದ ರಕ್ಷಿಸುವುದೇ ನಮ್ಮ ಪ್ರಥಮ ಆದ್ಯತೆಯಾಗಿದೆ” ಎಂದು ಕಂದಾಯ ಸಚಿವ ಶ್ರೀ ಆರ್ ಅಶೋಕ ಹೇಳಿದರು.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, “ತಜ್ಞರ ಶಿಫಾರಸುಗಳ ಆಧಾರದ ಮೇಲೆ, ನಾವು ಈಗಾಗಲೇ ಮೂಲಸೌಕರ್ಯಗಳನ್ನು ಹೆಚ್ಚಿಸುತ್ತಿದ್ದೇವೆ. ಔಷಧಿಗಳನ್ನು ಸಂಗ್ರಹಿಸುವುದರ ಜೊತೆಗೆ ಮಕ್ಕಳಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬುದರ ಕುರಿತು ವೈದ್ಯರಿಗೆ ತರಬೇತಿ ನೀಡುತ್ತಿದ್ದು, ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪಿಸಲಾಗುತ್ತಿದೆ. ಕೋವಿಡ್ ಪ್ರಕರಣಗಳು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಹೆಚ್ಚಾಗಿದೆ. ಕರ್ನಾಟಕದಲ್ಲಿ ನಿಯಂತ್ರಣದಲ್ಲಿರುವದಕ್ಕೆ ಕಾರಣ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದ ಎಲ್ಲ ಸಚಿವರು ತಂಡವಾಗಿ ಕಾರ್ಯನಿರ್ವಹಿಸುತ್ತಿರುವದು. ನಾವು ಈಗಾಗಲೇ ಗಡಿ ಪ್ರದೇಶಗಳಲ್ಲಿ ಚೆಕ್-ಪೋಸ್ಟ್ ಗಳನ್ನು ಸ್ಥಾಪಿಸಿದ್ದೇವೆ ಮತ್ತು ಗಡಿ ತಪಾಸಣೆಯನ್ನು ಇನ್ನಷ್ಟು ತೀವ್ರಗೊಳಿಸುವ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಅವರೊಂದಿಗೆ ಚರ್ಚಿಸುತ್ತೇವೆ” ಎಂದು ಹೇಳಿದರು.

ಕೋವಿಡ್ ಸಮಯದಲ್ಲಿ ಜನರಿಗೆ ಸಹಾಯ ಮಾಡಿದ್ದಕ್ಕಾಗಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರನ್ನು ಶ್ಲಾಘಿಸಿದ ಅಶೋಕ “ಬೊಮ್ಮನಹಳ್ಳಿಯಲ್ಲಿ ಬಹುಪಾಲು ಆಹಾರ ಕಿಟ್‍ಗಳನ್ನು ಒದಗಿಸಲಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ, ಅಲ್ಲಿ ಅಂತಹ ಒಂದು ಲಕ್ಷಕ್ಕೂ ಹೆಚ್ಚು ಕಿಟ್‍ಗಳನ್ನು ವಿತರಿಸಲಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ : ‘ನಿಜ ಜೀವನದಲ್ಲಿ ಹೀರೋ ಆಗಿ’ : ನಟ ವಿಜಯ್ ಗೆ ಬುದ್ಧಿವಾದ ಹೇಳಿ 1 ಲಕ್ಷ ದಂಡ ವಿಧಿಸಿದ ಕೋರ್ಟ್

ಕಲ್ಲುಗಣಿ ಪ್ರದೇಶಗಳನ್ನು ಕಾನೂನುಬದ್ಧವಾಗಿ ನಡೆಸಲಾಗುತ್ತಿದೆಯೇ ಎಂದು ಪರೀಕ್ಷಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕಂದಾಯ ಸಚಿವರು ಹೇಳಿದರು. “ಕ್ವಾರಿಗಳನ್ನು ತಪಾಸಣೆ ನಡೆಸಲು ನಾನು ಈಗಾಗಲೇ ಆಯಾ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ನಿರ್ದೇಶನ ನೀಡಿದ್ದೇನೆ. ಕೃಷ್ಣರಾಜ ಸಾಗರ್ ಆಣೆಕಟ್ಟಿಗೆ ತಾಂತ್ರಿಕ ತಜ್ಞರ ತಂಡವು ಜಲಾಶಯದಲ್ಲಿ ಯಾವುದೇ ಬಿರುಕುಗಳಿಲ್ಲ ಎಂದು ಸ್ಪಷ್ಟಪಡಿಸಿದೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದ ಎಂ.ಎಸ್. ಸುಮಲತಾ ಅಂಬರೀಶ್ ಅವರ ನಡುವೆ ನಡೆಯುತ್ತಿರುವ ಮಾತಿನ ಯುದ್ಧ, ಮಂಡ್ಯದ ಚುನಾವಣಾ ಫಲಿತಾಂಶದಿಂದ ಹೊರಬಂದ ಅವರ ವೈಯಕ್ತಿಕ ಪೈಪೆÇೀಟಿಯಿಂದಾಗಿವೆ “ಎಂದು ಅವರು ಹೇಳಿದರು.

ಸವಿತಾ ಸಮಾಜ ಸದಸ್ಯರಿಗೆ ಆಹಾರ ಕಿಟ್‍ಗಳನ್ನು ವಿತರಣೆ:
ಕಂದಾಯ ಸಚಿವ ಆರ್ ಅಶೋಕ ಅವರು ಸವಿತಾ ಸಮಾಜದ ಸದಸ್ಯರಿಗೆ ಆಹಾರ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ, “ನಮ್ಮ ಸಮಾಜದಲ್ಲಿ ಸವಿತಾ ಸಮಾಜವು ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಈ ಸಮುದಾಯವು ಕೋವಿಡ್ ಸಾಂಕ್ರಾಮಿಕ ರೋಗದಿಂದ ತೀವ್ರವಾಗಿ ತತ್ತರಿಸಿದೆ ಎಂದು ನನಗೆ ತಿಳಿದಿದೆ. ಆದ್ದರಿಂದ, ನಾನು ಮತ್ತು ನನ್ನ ತಂಡ ಯಾವಾಗಲೂ ನಿಮ್ಮ ಜೊತೆಯಾಗಿರುತ್ತೇವೆ ಎಂದು ಭರವಸೆ ನೀಡಲು ನಾನು ಬಯಸುತ್ತೇನೆ. ನಾವು ವಿವಿಧ ಸಮುದಾಯಗಳು ಮತ್ತು ಕ್ಷೇತ್ರಗಳಿಗೆ ಕಿಟ್‍ಗಳನ್ನು ಒದಗಿಸುತ್ತಿದ್ದೇವೆ. ನಿಮ್ಮೆಲ್ಲರ ಆಶೀರ್ವಾದಗಳನ್ನು ನಾನು ಬಯಸುತ್ತೇನೆ” ಎಂದರು

ಕರ್ನಾಟಕ ಸವಿತ ಸಮಾಜ ಅಭಿವೃದ್ಧಿ ಮಂಡಳಿ ಅಧ್ಯಕ್ಷ ನರೇಶ್ ಕುಮಾರ್, ಬಿಜೆಪಿ ಮಂಡಲ್ ಅಧ್ಯಕ್ಷ ರವಿ ಮತ್ತು ಪಕ್ಷದ ಮುಖಂಡರಾದ ಲಕ್ಷ್ಮೀಕಾಂತ್, ಕಬ್ಬಾಲು ಉಮೇಶ್ ಮತ್ತು ಬಸವರಾಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

Revanna 2

SIT ಅಧಿಕಾರಿಗಳಿಗೆ ತಲೆನೋವಾದ ಎಚ್‌.ಡಿ.ರೇವಣ್ಣ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.