ಒಲಿಂಪಿಕ್ಸ್‌ ತಾರೆಯರ ಜತೆ ಮೋದಿ ಕುಶಲ : ಆ್ಯತ್ಲೀಟ್‌ಗಳಿಗೆ ಧೈರ್ಯ ತುಂಬಿದ ಪ್ರಧಾನಿ


Team Udayavani, Jul 14, 2021, 7:25 AM IST

ಒಲಿಂಪಿಕ್ಸ್‌ ತಾರೆಯರ ಜತೆ ಮೋದಿ ಕುಶಲ : ಆ್ಯತ್ಲೀಟ್‌ಗಳಿಗೆ ಧೈರ್ಯ ತುಂಬಿದ ಪ್ರಧಾನಿ

ಹೊಸದಿಲ್ಲಿ : ಟೋಕಿಯೊಗೆ ಹೊರಟಿರುವ ದೇಶದ ಪ್ರಮುಖ ಆ್ಯತ್ಲೀಟ್‌ಗಳೊಂದಿಗೆ ಪ್ರಧಾನಿ ಮೋದಿ ಮಂಗಳವಾರ ಆತ್ಮೀಯ ಮಾತುಕತೆ ನಡೆಸಿದ್ದಾರೆ. ಜನರ ನಿರೀಕ್ಷೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ, ಒಲಿಂಪಿಕ್ಸ್‌ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಬಗ್ಗೆ ಗಮನಹರಿಸಿ ಎಂದು ಧೈರ್ಯ ತುಂಬಿದ್ದಾರೆ.

ಮೋದಿ ಹೇಳಿದ್ದು
ನಿಮ್ಮನ್ನೆಲ್ಲ ಮುಖತಃ ಭೇಟಿಯಾಗುವ ಇಚ್ಛೆಯಿದೆ. ಟೋಕಿಯೊ ದಿಂದ ವಾಪಸ್‌ ಬಂದ ಮೇಲೆ ಖಂಡಿತ ನಿಮ್ಮೊಂದಿಗೆ ಸಮಯ ಕಳೆಯುತ್ತೇನೆ. ದೇಶ ನಿಮ್ಮ ಯಶಸ್ಸಿಗಾಗಿ ತುಡಿಯುತ್ತಿರುವುದನ್ನು ಕಂಡು ಸಂತಸವಾಗಿದೆ. ದೇಶದ ಭಾವನೆಗಳು ನಿಮ್ಮೊಂದಿಗಿವೆ.

ಕ್ರೀಡಾಪಟುಗಳು ಹೇಳಿದ್ದು
ದೀಪಿಕಾ ಕುಮಾರಿ, ವಿಶ್ವ ನಂ.1 ಬಿಲ್ಗಾರ್ತಿ
ನನ್ನ ಕ್ರೀಡಾಜೀವನ ಆರಂಭ ದಿಂದಲೂ ಉತ್ತಮವಾಗಿತ್ತು. ಮೊದಲು ಬಿದಿರಿನ ಬಿಲ್ಲು ಬಳಸುತ್ತಿದ್ದೆ. ನಮ್ಮಿಂದ ಇತರರು ಬಹಳಷ್ಟನ್ನು ನಿರೀಕ್ಷಿಸುತ್ತಾರೆ. ಆದ್ದರಿಂದ ಅಭ್ಯಾಸದ ಮೇಲೆ ಬಹಳ ಗಮನ ಹರಿಸಿದ್ದೇನೆ. ಅತ್ಯುತ್ತಮ ಪ್ರದರ್ಶನ ನೀಡುವ ಭರವಸೆಯಿದೆ.
**
ಪಿ.ವಿ. ಸಿಂಧು, ಪ್ರಖ್ಯಾತ ಬ್ಯಾಡ್ಮಿಂಟನ್‌ ಪಟು
ಅಭ್ಯಾಸ ಚೆನ್ನಾಗಿ ಸಾಗಿದೆ. ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಅಂಕಣ ಗಳಿವೆ. ಅದಕ್ಕಾಗಿ ದೊಡ್ಡ ಅಂಕಣಗಳಲ್ಲಿ ಅಭ್ಯಾಸ ನಡೆಸುತ್ತಿದ್ದೇನೆ. ಆ್ಯತ್ಲೀಟ್‌ಗಳು ಕಠಿನ ಆಹಾರ ಪದ್ಧತಿ ಪಾಲಿಸ ಬೇಕಾಗುತ್ತದೆ. ಐಸ್‌ಕ್ರೀಮ್‌ ತಿನ್ನುವು ದನ್ನು ನಿಗ್ರಹಿಸಿದ್ದೇನೆ.
**
ಸಾಜನ್‌ ಪ್ರಕಾಶ್‌, ಖ್ಯಾತ ಈಜುಪಟು
ನನ್ನ ತಾಯಿ ಶಾಂತಿಮೋಳ್‌ ನನಗೆ ಎಲ್ಲ ಒತ್ತಡಗಳನ್ನು ಮೀರಿ ಬದುಕಲು ಕಲಿಸಿದರು. ಕೊರೊನಾದಿಂದ 18 ತಿಂಗಳು ಈಜುಕೊಳ ತೆರೆದಿರಲಿಲ್ಲ. ಇದು ಬಹಳ ಹತಾಶೆಗೊಳಪಡಿಸಿತ್ತು. ಆದರೆ ಎಲ್ಲರ ಬೆಂಬಲದಿಂದ ಸಂಕಟ ಗಳನ್ನು ಮೀರಿ ನಿಲ್ಲಲು ಸಾಧ್ಯವಾಗಿದೆ.
**
ಮೇರಿ ಕೋಮ್‌, ವಿಶ್ವಶ್ರೇಷ್ಠ ಮಹಿಳಾ ಬಾಕ್ಸರ್‌
ನನಗೆ ಬಾಕ್ಸರ್‌ಗಳಲ್ಲಿ ಅಮೆರಿಕದ ದಂತಕಥೆ ಮೊಹಮ್ಮದ್‌ ಅಲಿ ಬಹಳ ಇಷ್ಟ. ಅವರಿಂದ ನಾನು ಬಹಳ ಪ್ರೇರಣೆ ಪಡೆದಿದ್ದೇನೆ. ನಾನು ಸ್ಪರ್ಧಿಸುವಾಗ ಹುಕ್‌ ಶಾಟ್‌ಗಳನ್ನು ಉತ್ತಮವಾಗಿ ಪ್ರಯೋಗಿಸುತ್ತೇನೆ. ಅದು ನನಗೆ ಇಷ್ಟದ ಹೊಡೆತ.
**
ಸಾನಿಯಾ ಮಿರ್ಜಾ, ದೇಶದ ಶ್ರೇಷ್ಠ ಟೆನಿಸ್‌ ಆಟಗಾರ್ತಿ
ನಾನು 25 ವರ್ಷಗಳ ಹಿಂದೆ ಟೆನಿಸ್‌ ಆಟ ಆರಂಭಿಸಿದಾಗ ದೇಶದಲ್ಲಿ ಅನೇಕರು ಟೆನಿಸನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಈಗ ಪರಿಸ್ಥಿತಿ ಬದಲಾಗಿದೆ. ಒಲಿಂಪಿಕ್ಸ್‌ ನಲ್ಲಿ ಅಂಕಿತಾ ರೈನಾ ನನ್ನ ಜತೆಗಾರ್ತಿ. ಉತ್ತಮ ಫ‌ಲಿತಾಂಶ ತರುವ ಭರವಸೆಯಿದೆ.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.