ಬೆನ್ನಿಗೆ ಚೂರಿ ಹಾಕಿಸಿಕೊಳ್ಳಲು ಸಿದ್ದನಿಲ್ಲ

ಡಿಕೆಶಿ ಭೇಟಿ ಸೌಹಾರ್ದಯುತವಷ್ಟೇ! ­ನಾನು ಕಾಂಗ್ರೆಸ್‌ ಸೇರ್ಪಡೆ ಸತ್ಯಕ್ಕೆ ದೂರ: ಸುಧಾಕರ್‌

Team Udayavani, Jul 14, 2021, 5:36 PM IST

1307cmyp1_1307bg_2

ಚಿಂತಾಮಣಿ: “ಹಲವು ವರ್ಷಗಳಿಂದ ನಿರಂತರವಾಗಿ ಮಾಜಿ ಸಂಸದರಾದ ಕೆ.ಎಚ್‌.ಮುನಿಯಪ್ಪಅವರು ನಮಗೆ ಕೊಟ್ಟಿರುವ ಕಿರುಕುಳದಿಂದ ಬೇಸತ್ತಿದ್ದೇವೆ. ಅವರೊಂದಿಗೆ ರಾಜಿಯಾಗಿ ಕಾಂಗ್ರೆಸ್‌ ಸೇರ್ಪಡೆಗೊಂಡ ತದ ನಂತರ ಆದ ಪರಿಣಾಮಗಳ ಬಗ್ಗೆ ನನಗೆ ಗೊತ್ತಿದೆ. ಮತ್ತೆ ಬೆನ್ನಿಗೆ ಚೂರಿ ಇರಿಸಿಕೊಳ್ಳಲು ನಾನು ಸಿದ್ಧನಿಲ್ಲ. ಸ್ಥಳೀಯವಾಗಿ ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ ಅವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವಪ್ರಮೇಯವೇ ಬರುವುದಿಲ್ಲ. ಇಂತಹ ಸಂದರ್ಭದಲ್ಲಿ ನಾನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರೊಂದಿಗಿನ ಭೇಟಿಗೆ ಯಾವುದೇ ವಿಶೇಷವಾದ ಅರ್ಥ ಕಲ್ಪಿಸುವುದು ಸರಿಯಲ್ಲ. ಅದೊಂದು ಸೌಹಾರ್ದ ಯುತ ಭೇಟಿ’ ಎಂದು ಮಾಜಿ ಶಾಸಕ ಡಾ.ಎಂ.ಸಿ. ಸುಧಾಕರ್‌ ಸ್ಪಷ್ಟಪಡಿಸಿದರು.

ಅಂಜನಿ ಬಡಾವಣೆಯಲ್ಲಿ ಭೇಟಿಯಾದ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಕರೆಯಂತೆ ಅವರನ್ನು ಭೇಟಿ ಮಾಡಿದ್ದಕ್ಕೆ ಕಾಂಗ್ರೆಸ್‌ ಸೇರ್ಪಡೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು ಸತ್ಯಕ್ಕೆ ದೂರವಾದ ಮಾತು ಎಂದರು. ಮಾಜಿ ಸಚಿವ ಕೆ.ಎಂ.ಕೃಷ್ಣಾರೆಡ್ಡಿ ಅವರ ಕುಟುಂಬವನ್ನು ಬಳಸಿಕೊಂಡ ಕೆಎಚ್‌ಎಂ, ಇಂದು ಅವರನ್ನು ಯಾವ ಮಟ್ಟಕ್ಕೆ ತಂದು ನಿಲ್ಲಿಸಿದ್ದಾರೆ ಎಂಬುದು ಜನತೆಗೆ ಗೊತ್ತಿದೆ. ವಾಣಿ ಕೃಷ್ಣಾರೆಡ್ಡಿ ಅವರನ್ನು ಚುನಾವಣೆಗೆ ನಿಲ್ಲಿಸಿ ಯಾರಿಗೆ ಬೆಂಬಲ ಸೂಚಿಸಿದರು ಎಂಬುದೂ ಗೊತ್ತಿದೆ ಎಂದು ದೂರಿದರು.

ದ್ರೋಹ: ಪ್ರತಿ ಬಾರಿಯೂ ಮಾತೃಪಕ್ಷ ಎಂದು ಹೇಳಿ ಕೊಳ್ಳುವ ಕಾಂಗ್ರೆಸ್‌ಗೆ ದ್ರೋಹ ಬಗೆದು ಕೊಂಡೇ ಬರುತ್ತಿದ್ದಾರೆ. ಇಂತಹ ವ್ಯಕ್ತಿ ಜತೆ ಈಗ ಹೊಂದಾಣಿಕೆ ಮಾಡಿಕೊಂಡರೆ ಮುಂದೆ ಜನ ನನ್ನನ್ನು, ಮೂರ್ನಾಲ್ಕು ಬಾರಿ ಮೋಸ ಹೋಗಿಯೂ ಮತ್ತೆ ಅವರ ಜತೆ ಹೇಗೆ ಹೊಂದಾಣಿಕೆ ಮಾಡಿಕೊಂಡಿರಿ ಎಂಬುದಾಗಿ ಪ್ರಶ್ನಿಸುತ್ತಾರೆಂದರು.

ಚಿಂತಾಮಣಿಯಲ್ಲಿ ಕ್ಷೀಣ: ಭಾಷಣ ಮಾಡುವಾಗ ನಮಗೆ ವ್ಯಕ್ತಿಗಿಂತಲೂ ಪಕ್ಷ ಮುಖ್ಯ ಎಂದು ಹೇಳುತ್ತಿರುವ ಕೆಎಚ್‌ಎಂ, ಇಂದು ಚಿಂತಾಣಿಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಎಷ್ಟು ಬೆಳೆಸಿದ್ದಾರೆ ಎಂಬುದನ್ನು ಅವರೇ ಹೇಳಬೇಕು ಎಂದರು.

ರಾಷ್ಟ್ರ ಹೈಕಮಾಂಡ್‌ ಭರವಸೆ ಕೊಟ್ಟರೆ ಯೋಚಿಸುವೆ: ಇನ್ನು ರಾಜ್ಯ ಹೈಕಮಾಂಡ್‌ಗಳ ಜತೆಯಲ್ಲಿ ಸ್ಥಳೀಯ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದೇನೆ. ಆದರೆ, ಯಾವುದೇ ಭರವಸೆ ಸಿಕ್ಕಿಲ್ಲ, ಮತ್ತು ಕೆಎಚ್‌ಎಂ ವಿಚಾರದಲ್ಲಿ ಅವರೂ ಅಸಹಾಯಕರಾಗಿದ್ದಾರೆ. ಹೀಗಾಗಿ ರಾಷ್ಟ್ರ ಮಟ್ಟದ ಹೈಕಮಾಂಡ್‌ ಭರವಸೆ ಕೊಟ್ಟಿದ್ದೇ ಆದಲ್ಲಿ, ಕಾಂಗ್ರೆಸ್‌ ಸೇರ್ಪಡೆ ಕುರಿತು ಕಾರ್ಯಕರ್ತರೊಂದಿಗೆ ಚರ್ಚಿಸಿ ನಿರ್ಧರಿಸುತ್ತೇನೆಂದರು.

ಬಿಜೆಪಿ ಸೇರ್ಪಡೆಗೂ ಮುಂದಾಗಿದ್ದೆ: 2019ರಲ್ಲಿ ಲೋಕಸಭಾ ಚುನಾವಣೆ ನಂತರ ನಾನು ಬಿಜೆಪಿ ಸೇರ್ಪಡೆಗೆ ಯೋಚಿಸಿದ್ದೆ. ಆದರೆ ತದ ನಂತರ ಆದ ವಿದ್ಯಮಾನದಿಂದ ಆ ಯೋಚನೆ ಕೈಬಿಟ್ಟೆ. ಚಿಕ್ಕಬಳ್ಳಾಪುರ ಶಾಸಕ ಕೆ.ಸುಧಾಕರ್‌ ಅವರು ಬಿಜೆಪಿ ಸೇರಿದ್ದಕ್ಕೆ ಆ ಯೋಚನೆಯಿಂದ ದೂರ ಸರಿದೆ. ಬಿಜೆಪಿ ಸೇರ್ಪಡೆಗೆ ಇಂದಿಗೂ ತನಗೆ ಆಹ್ವಾನವಿದೆ. ಆದರೆ,ಪ್ರಸ್ತುತದ ಸಂದರ್ಭದಲ್ಲಿಯಾವುದೇಪಕ್ಷಕ್ಕೆ ಸೇರುವ ಇಂಗಿತದಿಂದ ದೂರ ಉಳಿದಿದ್ದೇನೆಂದರು. ನಾನು ಸ್ವತಂತ್ರ: ನಾನು ರಾಜಕೀಯವಾಗಿ ಸ್ವತಂತ್ರನಾಗಿ ದ್ದೇನೆ. ಮುಂದಿನ ಯಾವುದೇ ನಿರ್ಧಾರವನ್ನು ಮುಳಬಾಗಿಲಿನ ನನ್ನ ಸ್ನೇಹಿತ ಕೊತ್ತೂರು ಮಂಜುನಾಥ್‌ ಅವರೊಟ್ಟಿಗೆ ತೆಗೆದುಕೊಳ್ಳುತ್ತೇನೆಂದರು.

ಟಾಪ್ ನ್ಯೂಸ್

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.