KRS ಡ್ಯಾಂ ಬಿರುಕು ಬಿಟ್ಟಿಲ್ಲ ಎಂಬುದು ಅಸತ್ಯ, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ : ಸುಮಲತಾ
Team Udayavani, Jul 14, 2021, 7:57 PM IST
ಮಂಡ್ಯ: ಕೆಆರ್ಎಸ್ ಅಣೆಕಟ್ಟು ಬಿರುಕು ಬಿಟ್ಟಿಲ್ಲ ಎಂಬುದು ಅಸತ್ಯವಾಗಿದ್ದು, ಡ್ಯಾಂನಲ್ಲಿ ಕಣ್ಣಿಗೆ ಕಾಣುವಷ್ಟು ಬಿರುಕು ಬಿಟ್ಟಿಲ್ಲ. ಆದರೆ ಸಣ್ಣಪುಟ್ಟ ಕಾಮಗಾರಿಗಳು ನಡೆದಿದ್ದು, ನನ್ನ ಹೇಳಿಕೆಗೆ ನಾನೂ ಈಗಲೂ ಬದ್ಧವಾಗಿದ್ದೇನೆ ಎಂದು ಸಂಸದೆ ಸುಮಲತಾಅಂಬರೀಷ್ ಸ್ಪಷ್ಟಪಡಿಸಿದರು.
ಶ್ರೀರಂಗಪಟ್ಟಣದ ಕೆಆರ್ಎಸ್ ಜಲಾಶಯದ ವೀಕ್ಷಣೆ ಮಾಡಿ, ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಹೆಚ್ಚಿನ ಅಧ್ಯಯನ ಅಗತ್ಯ:
ಡ್ಯಾಂ ಸುರಕ್ಷತೆ ಕುರಿತಂತೆ ಹೆಚ್ಚಿನ ಅಧ್ಯಯನ ಅಗತ್ಯವಿದ್ದು, ಸಮಗ್ರ ವರದಿ ಬರಬೇಕಾಗಿದೆ. ಸಣ್ಣಪುಟ್ಟ ಬಿರುಕು, ನೀರು ಸೋರುವಿಕೆಗಳನ್ನು 67 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗಿದೆ. ಅದನ್ನೆಲ್ಲ ಅಧಿಕಾರಿಗಳು ಮಾಡಿದ್ದಾರೆ. ಇದು ಬಿರುಕು ಕಾಣಿಸಿಕೊಂಡಿರುವುದಕ್ಕೆ ಕಾಮಗಾರಿ ನಡೆಸಿರುವುದು. ಆದ್ದರಿಂದ ನನ್ನ ಹೇಳಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು.
ನಾಳೆ ದೊಡ್ಡದಾಗಬಹುದು:
ಈಗ ಕಾಣಿಸಿಕೊಂಡಿರುವ ಸಣ್ಣಪುಟ್ಟ ಬಿರುಕುಗಳು ನಾಳೆ ದೊಡ್ಡದಾಗಬಹುದು. ಆದ್ದರಿಂದ ಗಣಿಗಾರಿಕೆ, ಸ್ಫೋಟ, ಕಂಪನದಿಂದ ತೊಂದರೆಯಾಗಬಹುದು. ಆದರೆ ಸ್ಪಷ್ಟ ಮಾಹಿತಿಯೇ ಇಲ್ಲ. ಎಲವೂ ಗೊಂದಲಮಯವಾಗಿದೆ. ಅಧಿಕಾರಿಗಳು ಅಸ್ಪಷ್ಟ ಮಾಹಿತಿ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ :ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಗದಗ ನಗರಸಭೆ ಎಇಇ
ಅಧಿಕಾರಿಗಳಿಂದ ಅಸ್ಪಷ್ಟ ಮಾಹಿತಿ:
ಅಧಿಕಾರಿಗಳು ಸಣ್ಣಪುಟ್ಟ ಕಾಮಗಾರಿ ನಡೆಸಿದ್ದೇವೆ ಎನ್ನುತ್ತಾರೆ. ನಂತರ ಅಣೆಕಟ್ಟೆ ಬಿರುಕು ಬಿಟ್ಟಿಲ್ಲ ಎನ್ನುತ್ತಾರೆ. ಅಣೆಕಟ್ಟೆ ಸುರಕ್ಷತೆ ಬಗ್ಗೆ ಅಧಿಕೃತ ವರದಿ ನೀಡುವವರು ಯಾರು ಎಂದು ಕೇಳಿದರೆ ನಾವಲ್ಲ ಎನ್ನುತ್ತಾರೆ. ಈ ರೀತಿಯ ಮಾಹಿತಿಯನ್ನು ಏನೆಂದು ತಿಳಿದುಕೊಳ್ಳುವುದು. ಗಣಿಗಾರಿಕೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳುತ್ತಾರೆ. ಆದರೆ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಯುತ್ತಿರುವುದರಿಂದ ಜಲಾಶಯಕ್ಕೆ ಅಪಾಯವಿಲ್ಲವೇ ಎಂದು ಕೇಳಿದರೆ ಸರಿಯಾದ ಉತ್ತರವೇ ಇಲ್ಲ ಎಂದು ತಿಳಿಸಿದರು.
ರಿಸ್ಕಿ ಕೆಲಸ:
ಕೆಆರ್ಎಸ್ ಜಲಾಶಯದ ಸುತ್ತಮುತ್ತ ರಿಸ್ಕಿ ಕೆಲಸ ನಡೆಯುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಅನಾಹುತ ಸಂಭವಿಸುವುದಕ್ಕಿಂತ ಈಗಲೇ ಎಚ್ಚರಿಕೆ ವಹಿಸುವುದು ಸೂಕ್ತ. ಅಣೆಕಟ್ಟೆ ಉಳಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಅಧಿಕಾರಿಗಳು ಪರೀಕ್ಷಾರ್ಥ ಸ್ಫೋಟ ನಡೆಸಿದ ನಂತರ ವರದಿಯಿಂದ ಸುರಕ್ಷತೆ ಬಗ್ಗೆ ತಿಳಿಯಲಿದೆ ಎನ್ನುತ್ತಾರೆ. ಆದರೆ ಗಣಿಗಾರಿಕೆಯಿಂದ ಅಪಾಯವಿಲ್ಲ ಎಂಬುದು ದೊಡ್ಡ ಸುಳ್ಳು. ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ಮುಂದುವರೆಯಲಿದೆ ಎಂದರು.
ಟಾಸ್ಕ್ ಫೋರ್ಸ್ ಸಮಿತಿ ಅಗತ್ಯ:
ಜಲಾಶಯದ ಭದ್ರತೆ ವಿಚಾರದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಅಗತ್ಯವಾಗಿದೆ. ಅದರ ಮೂಲಕ ಜಲಾಶಯದ ಭದ್ರತೆಗೆ ಹೆಚ್ಚು ಒತ್ತು ನೀಡಬೇಕು. ಜಲಾಶಯದ ಹಿನ್ನೀರಿನಲ್ಲಿ ಮೋಜು, ಮಸ್ತಿಯಂಥ ಘಟನೆಗಳು ನಡೆಯುತ್ತಿವೆ. ಇದಕ್ಕೆಲ್ಲ ಭದ್ರತೆ ವೈಫಲ್ಯ ಕಂಡು ಬರುತ್ತಿದೆ. ಅದಕ್ಕೆ ಕಡಿವಾಣ ಹಾಕಲು ನಿಷೇಧಿತ ವಲಯ ಎಂದು ಘೋಷಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ :ಶೀಘ್ರದಲ್ಲಿಯೇ ಗೋವಾ ಪ್ರವಾಸೋದ್ಯಮಕ್ಕೆ ಚಾಲನೆ : ಶ್ರೀಪಾದ ನಾಯ್ಕ
ದಾಖಲೆಯಿಂದಲೇ ಹೇಳಿಕೆ:
ಕೆಆರ್ಎಸ್ ಜಲಾಶಯ ಬಿರುಕು ಬಿಟ್ಟಿದೆ ಎಂಬುದನ್ನು ನನ್ನ ಬಳಿ ಇರುವ ತಾಂತ್ರಿಕ ದಾಖಲೆಗಳ ಆಧಾರದ ಮೇಲೆಯೇ ಹೇಳಿದ್ದೇನೆ. ಅಲ್ಲದೆ, ಸ್ಥಳೀಯರು, ರೈತರು ಇದರ ಬಗ್ಗೆ ಹಲವು ದೂರುಗಳನ್ನು ನೀಡಿದ್ದಾರೆ. ಇದಕ್ಕಿಂತ ದಾಖಲೆಗಳು ಬೇಕಾ?, ಇದರ ಬಗ್ಗೆ 2019ರ ಸಂಸತ್ ಅಧಿವೇಶನದಲ್ಲಿಯೇ ಪ್ರಸ್ತಾಪ ಮಾಡಿದ್ದೇನೆ. ಇದು ಇಂದು-ನಿನ್ನೆಯ ಮಾತಲ್ಲ ಎಂದರು.
ತಿರುಚಲಾಗುತ್ತಿದೆ:
ನನ್ನ ಹೇಳಿಕೆಗಳನ್ನು ತಿರುಚಿ ರಾಜಕೀಯ ಮಾಡುತ್ತಿದ್ದಾರೆ. ಕೆಆರ್ಎಸ್ ಜಲಾಶಯದ ಸುರಕ್ಷತೆ ವಿಚಾರದಲ್ಲಿ ಇನ್ನೂ ಆತಂಕವಿದ್ದು, ಕಾಳಜಿಯಿಂದ ಹೇಳಿಕೆ ನೀಡಿದ್ದೇನೆ. ಅದನ್ನು ಬೇರೆಯವರು ರಾಜಕೀಯವಾಗಿ ತಿರುಚಿ ಮಾತನಾಡುತ್ತಿದ್ದಾರೆ. ಆದರೆ ಕೆಆರ್ಎಸ್ ಜಲಾಶಯ ಬಿರುಕು ವಿಚಾರದಲ್ಲಿ ನನ್ನ ಆತಂಕ ಮುಂದುವರೆದಿದ್ದು, ಅದರಂತೆ ಕಾಳಜಿಯೂ ಮುಂದುವರೆಯಲಿದೆ. ಅಧಿಕಾರಿಗಳು ಅದರ ಬಗ್ಗೆ ಸ್ಪಷ್ಟ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ
Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
ಬಿಗ್ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ