ಸಿಎಂ ಇಂದು ದಿಲ್ಲಿಗೆ : ಸಚಿವ ಸಂಪುಟ ಪುನಾರಚನೆ ಚರ್ಚೆ?
Team Udayavani, Jul 16, 2021, 7:10 AM IST
ಬೆಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆಯ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಶುಕ್ರವಾರ ಹೊಸದಿಲ್ಲಿಗೆ ಪ್ರವಾಸ ಬೆಳೆಸಲಿದ್ದು, ಎಲ್ಲರ ಕಣ್ಣು ಈ ಭೇಟಿ ಮೇಲಿದೆ.
ಮುಖ್ಯಮಂತ್ರಿ ಕಚೇರಿ ಮಾಹಿತಿ ಪ್ರಕಾರ ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಪಡೆಯುವ ಸಲುವಾಗಿ ಈ ಭೇಟಿ ನಡೆಯಲಿದೆ. ಆದರೆ ರಾಜ್ಯ ಸಚಿವ ಸಂಪುಟ ಪುನಾರಚನೆಯೂ ಕಾರ್ಯಸೂಚಿಯಲ್ಲಿದೆ ಎನ್ನಲಾಗುತ್ತಿದೆ.
ಶುಕ್ರವಾರ ಸಂಜೆ 7ಕ್ಕೆ ಮುಖ್ಯಮಂತ್ರಿ ಬಿಎಸ್ವೈ ಅವರು ಪ್ರಧಾನಿಯವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಮೇಕೆದಾಟು ಯೋಜನೆಯ ಜತೆಗೆ ರಾಜ್ಯ ರಾಜಕೀಯದ ಬಗ್ಗೆಯೂ ಮಾತನಾಡಲಿದ್ದಾರೆ ಎನ್ನಲಾಗಿದೆ.
ಪುನಾರಚನೆ ನಿರೀಕ್ಷೆ;
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಜು. 26ಕ್ಕೆ 2 ವರ್ಷ ಪೂರೈಸಲಿದೆ. ಸಂಪುಟ ಪುನಾರಚನೆ ಮಾಡಿ ಹೊಸಬರಿಗೆ ಅವಕಾಶ ಕೊಡಬೇಕೆಂಬ ಬೇಡಿಕೆ ಶಾಸಕರಿಂದ ಇದೆ. ಈ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆಯ ಬಗೆಗೂ ಯಡಿಯೂರಪ್ಪ ವರಿಷ್ಠರ ಜತೆಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕೇಂದ್ರದಲ್ಲಿ ಬಾಕಿ ಉಳಿದಿರುವ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಲು ತೆರಳುತ್ತಿದ್ದೇನೆ, ರಾಜಕೀಯ ಉದ್ದೇಶವಿಲ್ಲ ಎಂದು ಮುಖ್ಯಮಂತ್ರಿ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
MUST WATCH
ಹೊಸ ಸೇರ್ಪಡೆ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ