ಬಾಲಕಿಯನ್ನು ರಕ್ಷಿಸಲು ಹೋಗಿ ಬಾವಿಗೆ ಬಿದ್ದ 30 ಮಂದಿ: ನಾಲ್ವರು ಸಾವು
Team Udayavani, Jul 16, 2021, 9:31 AM IST
ವಿದಿಶಾ: ಬಾವಿಗೆ ಬಿದ್ದ ಬಾಲಕಿಯನ್ನು ರಕ್ಷಿಸಲು ಹೋಗಿ 30 ಮಂದಿ ಬಾವಿಗೆ ಬಿದ್ದ ಘಟನೆ ಮಧ್ಯ ಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.
ವಿದಿಶಾ ಪಟ್ಟಣದಿಂದ 50 ಕಿ.ಮೀ ದೂರದಲ್ಲಿರುವ ಗಂಜ್ ಬಸೋಡಾದಲ್ಲಿ ಈ ಘಟನೆ ನಡೆದಿದೆ. ಸುಮಾರು 50 ಅಡಿಗಳಷ್ಟು ಆಳವಿರುವ ಬಾವಿಯಲ್ಲಿ ಸುಮಾರು 20 ಅಡಿಗಳಷ್ಟು ನೀರಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ನಾಲ್ಕು ಶವಗಳು ಪತ್ತೆಯಾಗಿದ್ದು, 15 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಇನ್ನೂ 13 ಜನರು ಕಾಣೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಶ್ರೀನಗರ: ಇಬ್ಬರು ಲಷ್ಕರ್ ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ಸಂಜೆ ಆರು ಗಂಟೆ ಸುಮಾರಿಗೆ ಓರ್ವ ಬಾಲಕಿ ಬಾವಿಗೆ ಬಿದ್ದಿದ್ದಳು. ಇವಳನ್ನು ರಕ್ಷಿಸಲು ಕೆಲವರು ಬಾವಿಗೆ ಇಳಿದಿದ್ದಾರೆ. ಇನ್ನು ಕೆಲವರು ಅವರಿಗೆ ಸಹಾಯ ಮಾಡಲು ಬಾವಿ ದಂಡೆಯಲ್ಲಿ ನಿಂತಿದ್ದರು. ಆದರೆ ಬಾವಿ ದಂಡೆ ಕುಸಿದು, ಅದರ ಮೇಲಿದ್ದವರು ಬಾವಿಗೆ ಬಿದ್ದಿದ್ದಾರೆ. ಕೆಲವರು ನೀರಿಗೆ ಬಿದ್ದಿರುವ ದಂಡೆಯ ಅವಶೇಷಗಳಡಿ ಸಿಲುಕಿದ್ದಾರೆ.
ರಾತ್ರಿ ಸುಮಾರು 11 ಗಂಟೆ ಸಮಯಕ್ಕೆ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ಟ್ರಾಕ್ಟರ್, ನಾಲ್ವರು ಪೊಲೀಸರು ಕೂಡಾ ಜಾರಿ ಬಾವಿಗೆ ಬಿದ್ದಿದ್ಧಾರೆ ಎಂದು ವರದಿಯಾಗಿದೆ.
MP: 4 bodies recovered from the spot so far in Ganjbasoda area of Vidisha.
CM SS Chouhan announces an ex-gratia of Rs 5 Lakhs each for the next of the kin of the deceased & compensation of Rs 50,000 each to the injured. The injured will also be provided free medical treatment. pic.twitter.com/PgBs2hzFJB
— ANI (@ANI) July 16, 2021
ವಿದಿಶಾದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಮಧ್ಯಪ್ರದೇಶ ಸಿಎಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ