Darshan vs indrajit.. ನಾನು ದಲಿತನಲ್ಲ ಎಂದ ಗಂಗಾಧರ್ : ಇಂದ್ರಜಿತ್ ಗೆ ಹಿನ್ನಡೆ!
Team Udayavani, Jul 16, 2021, 2:47 PM IST
ಬೆಂಗಳೂರು: ನಟ ದರ್ಶನ್ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪ ಮಾಡಿದ್ದು, ಇದೇ ಹಿನ್ನೆಲೆಯಲ್ಲಿ ದರ್ಶನ್ ಅವರಿಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ.
ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪ ಮಾಡಿದ್ದು, ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ದಲಿತ ವ್ಯಕ್ತಿಗೆ ದರ್ಶನ್ ಹೊಡೆದಿದ್ದಾರೆ ಎಂದಿದ್ದರು. ಈ ಸಂಬಂಧ ರಾಜ್ಯ ಸರ್ಕಾರ ದರ್ಶನ್ ಅಂಡ್ ಟೀಂ ವಿರುದ್ಧ ತನಿಖೆಗೆ ಆದೇಶ ಮಾಡಿತ್ತು. ಅದರಂತೆ ಮೈಸೂರು ಪೊಲೀಸ್ ಅಧಿಕಾರಿಗಳ ತಂಡ ಗಲಾಟೆ ನಡೆದಿರುವ ಹೋಟೆಲ್ ಸಂದೇಶ್ ಪ್ರಿನ್ಸ್ಗೆ ಭೇಟಿ ನೀಡಿತ್ತು.
ದರ್ಶನ್ ಅವರಿಂದ ಹಲ್ಲೆಗೊಳಗಾಗಿದ್ದ ವ್ಯಕ್ತಿ ಎನ್ನಲಾದ ಗಂಗಾಧರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಾನು ದಲಿತ ಅಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ. ಇದರಿಂದ ಇಂದ್ರಜಿತ್ ಲಂಕೇಶ್ ಅವರಿ ಸುಳ್ಳು ಹೇಳಿದ್ರ ಎನ್ನಾಲಾಗುತ್ತಿದೆ.
ಪೊಲೀಸರಿಗೆ ಹೇಳಿಕೆ ನೀಡಿರುವ ಗಂಗಾಧರ್, ನಾನು ಕಳೆದ 20 ವರ್ಷಗಳಿಂದ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ. 10 ವರ್ಷದಿಂದ ರೂಂ ಸರ್ವೀಸ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದೇನೆ. ಪ್ರತಿದಿನ ಬೆಳಗ್ಗೆ 10 ರಿಂದ ರಾತ್ರಿ 10ರವರೆಗೆ ನನ್ನ ಕೆಲಸ. ಹೋಟೆಲ್ಗೆ ಬರುವ ಗ್ರಾಹಕರನ್ನ ಪಿಆರ್ಓ ಪವಿತ್ರ ಅಥವಾ ಶಿವಶಂಕರ್ ಬರಮಾಡಿಕೊಳ್ತಾರೆ. ಕೊಠಡಿ ಪ್ರವೇಶದ ಬಳಿಕ ಅವರಿಗೆ ಅಗತ್ಯವಾದ ಆಹಾರ ಪದಾರ್ಥ ಕಿಚನ್ನಲ್ಲಿ ಸಿದ್ಧಪಡಿಸಲಾಗುತ್ತೆ. ಇದನ್ನ ಗ್ರಾಹಕರಿಗೆ ತಲುಪಿಸುವ ಕರ್ತವ್ಯ ನನ್ನದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ