ನಿಮ್ಮ ಸರ್ಟಿಫೀಕೇಟ್ ನಿಂದ ಸತ್ಯ ಮರೆಮಾಚಲಾಗುವುದಿಲ್ಲ : ಪ್ರಧಾನಿಗೆ ಪ್ರಿಯಾಂಕ ಟ್ವೀಟ್ಬಾಣ
Team Udayavani, Jul 16, 2021, 4:47 PM IST
ನವ ದೆಹಲಿ : ಉತ್ತರ ಪ್ರದೇಶದ ಪೂರ್ವ ಭಾಗದ ಉಸ್ತುವಾರಿ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಮತ್ತೆ ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೋರಿಸಿರುವ ನಿರ್ಲಕ್ಷ್ಯ ಹಾಗೂ ಅಸಮರ್ಪಕ ನಿರ್ವಹಣೆಯ ನಿಜ ಮುಖವನ್ನು ಪ್ರಧಾನಿ ಅವರ ‘ಸರ್ಟಿಫಿಕೇಟ್’ ನಿಂದ ಮರೆಮಾಚಲು ಸಾಧ್ಯವಿಲ್ಲಿ ಎಂದು ಪ್ರಿಯಾಂಕ ಕಿಡಿ ಕಾರಿದ್ದಾರೆ.
ಇದನ್ನೂ ಓದಿ : ಟಿ20 ವಿಶ್ವಕಪ್ 2021: ಒಂದೇ ಗುಂಪಿನಲ್ಲಿ ಸ್ಥಾನ ಪಡೆದ ಭಾರತ ಮತ್ತು ಪಾಕಿಸ್ಥಾನ ತಂಡಗಳು
ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ತರಾಟೆಗೆ ತೆಗೆದುಕೊಂಡ ಅವರು, ವಾರಾಣಸಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆದಿತ್ಯನಾಥ್ ಅವರ ಕೋವಿಟ್ ಬಿಕ್ಕಟ್ಟಿನ ನಿರ್ವಹಣೆಯ ಬಗ್ಗೆ ಶ್ಲಾಘಿಸಿದ್ದರು. ಆದರೇ, ಮುಖ್ಯಮಂತ್ರಿ ಯೋಗಿ ಅವರ ಅಸಮರ್ಪಕೆ ನಿರ್ವಹಣೆಯನ್ನು ಅವರ ಸರ್ಟಿಫಿಕೇಟ್ ನ ಹಿಂದೆ ಮರೆ ಮಾಚಲು ಖಂಡಿತ ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.
मोदी जी के सर्टिफिकेट से यूपी में कोरोना की दूसरी लहर के दौरान योगी सरकार की आक्रामक क्रूरता, लापरवाही और अव्यवस्था की सच्चाई छिप नहीं सकती।
लोगों ने अपार पीड़ा, बेबसी का सामना अकेले किया। इस सच्चाई को मोदीजी, योगीजी भूल सकते हैं, जिन्होंने कोरोना का दर्द सहा, वे नहीं भूलेंगे
— Priyanka Gandhi Vadra (@priyankagandhi) July 16, 2021
ಹೆಜ್ಜೆ ಹೆಜ್ಜೆಗೂ ದೊಡ್ಡ ಪ್ರಮಾಣದಲ್ಲಿ ಜನರು ಕೋವಿಡ್ ಸಂದರ್ಭದಲ್ಲಿ ಸಂಕಷ್ಟ ಅನುಭವಿಸಿದ್ದನ್ನು ಪ್ರಧಾನಿ ಹಾಗೂ ಯೋಗಿ ಮರೆತಿರಬಹುದು. ಆದರೇ, ಕೋವಿಡ್ ನಿಂದ ತಮ್ಮ ಬದುಕನ್ನೇ ಕಳೆದುಕೊಂಡಿರುವ ಜನ ಈ ಸಮಸ್ಯೆಯನ್ನು ಮರೆಯಲು ಸಾಧ್ಯವಿಲ್ಲ.
ಇತ್ತೀಚೆಗೆ ವಾರಾಣಿಸಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾಗ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಮೆಚ್ಚುಗೆ ಪಟ್ಟಿದ್ದರು. ಗರಿಷ್ಠ ಮಟ್ಟದಲ್ಲಿ ಲಸಿಕೆ ಅಭಿಯಾನ ಹಾಗೂ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ. ರಾಜ್ಯ ಸರ್ಕಾರದ ಉತ್ತಮ ನಿರ್ವಹಣೆಯಿಂದಾಗಿ ಸಹಜತೆಗೆ ಮರಳುತ್ತಿದೆ ಎಂದು ಹೇಳಿದ್ದರು.
ಇದನ್ನೂ ಓದಿ : ಮಂಗಳೂರು: ಕುಲಶೇಖರ ಬಳಿ ರೈಲ್ವೆ ಹಳಿ ಮೇಲೆ ತಡೆಗೋಡೆ ಕುಸಿದು ರೈಲು ಸಂಚಾರ ರದ್ದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ