ಶಾಸಕ ಎಂ.ಪಿ ಕುಮಾರಸ್ವಾಮಿಯಿಂದ ಗ್ರಾಮ ಪಂಚಾಯಿತಿ ಸದಸ್ಯನಿಗೆ ಕೊಲೆ ಬೆದರಿಕೆ?
Team Udayavani, Jul 17, 2021, 12:04 PM IST
ಚಿಕ್ಕಮಗಳೂರು : ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿಯಿಂದ ನನಗೆ ಕೊಲೆ ಬೆದರಿಕೆ ಬಂದಿದೆ ಎಂದು ನಿಡುವಾಳೆ ಗ್ರಾಮ ಪಂಚಾಯಿತಿ ಸದಸ್ಯ ಸಚಿನ್ ಮರ್ಕಲ್ ಆರೋಪ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮ ಪಂಚಾಯಿತಿ ಸದಸ್ಯ ಸಚಿನ್ ಮರ್ಕಲ್ ಪ್ರವಾಹ ಪರಿಹಾರದ ಹಣವನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲೇ ಕೊಲೆ ಬೆದರಿಕೆ ಬಂದಿದೆ ಎಂದು ಆರೋಪ ಕೇಳಿ ಬಂದಿದೆ.
ಫೇಸ್ಬುಕ್ ನಲ್ಲಿ ನಾನು ಹಾಕಿದ್ದ ಪೋಸ್ಟ್ ಡಿಲೀಟ್ ಮಾಡಿಸಿದ್ದಾರೆ. ಕೊಲೆ ಮಾಡುವುದಾಗಿ ಧಮ್ಕಿ ಹಾಕಿದ್ದಾರೆ ಎಂದು ಸಚಿನ್ ಶಾಸಕರ ವಿರುದ್ಧ ಆರೋಪ ಮಾಡಿದ್ದಾರೆ.