ಮನೆಮದ್ದಾಗಿ ತುಳಸಿಯ ಬಳಕೆ

ಸ್ಪಲ್ಪ ಬೆಲ್ಲವನ್ನು ಸೇರಿಸಿ ದಿನಕ್ಕೆ ಎರಡು ಬಾರಿ ಸೇವನೆ ಮಾಡುವುದರಿಂದ ಮೂಲವ್ಯಾಧಿ ಗುಣಮುಖವಾಗುತ್ತದೆ.

Team Udayavani, Jul 17, 2021, 2:32 PM IST

ಮನೆಮದ್ದಾಗಿ ತುಳಸಿಯ ಬಳಕೆ

ಆರೋಗ್ಯವೇ ಭಾಗ್ಯ ಎಂಬ ಸಾಲುಗಳು ಹೇಳುವಂತೆ ನಮ್ಮ ದೇಹದ ಚೆನ್ನಾಗಿದ್ದರೆ ಅದು ನಮ್ಮ ಬದುಕಿನ ಭಾಗ್ಯವೇ ಸರಿ. ಉತ್ತಮ ಆರೋಗ್ಯವನ್ನು ಹೊಂದಿರುವವರು ತಮ್ಮ ಬದುಕಿನಲ್ಲಿ ಯಾವದೇ ರೀತಿಯ ಸಮಸ್ಯೆಗಳು ಎದುರಾದರೂ ಅದನ್ನು ಅತ್ಯಂತ ಸುಲಭವಾಗಿ ನಿವಾರಿಸುತ್ತಾರೆ. ಪುರಾತನ ಕಾಲದಿಂದಲೂ ಮನುಷ್ಯ ತನ್ನ ಆರೋಗ್ಯಕ್ಕೆ ಹೆಚ್ಚಿನ ಪ್ರಮುಖ್ಯತೆಯನ್ನು ನೀಡುತ್ತಾ ಬಂದಿದ್ದು, ನಮ್ಮ ಸುತ್ತಮುತ್ತಲಿನ ಸಸ್ಯ ಸಂಕುಲ ಇದಕ್ಕೆ ತನ್ನದೆ ಆದ ಮಹತ್ವದ ಕೊಡುಗೆಯನ್ನು ನೀಡುತ್ತಾ ಬಂದಿದೆ.

ಸಾಮಾನ್ಯವಾಗಿ ಪೂಜಾ ಕೈಂಕರ್ಯಗಳಲ್ಲಿ ಅತೀ ಹೆಚ್ಚಾಗಿ ಬಳಸುವ, ದೇವತೆಗಳಿಗೆ ಅತ್ಯಂತ ಪ್ರಿಯವಾದ ತುಳಸಿ ಮನುಷ್ಯನ ಹಲವಾರು ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ. ತುಳಸಿಯನ್ನು ನಾನಾ ವಿಧವಾದ ಔಷಧಿಗಳಲ್ಲಿ ಬಳಸಲಾಗುತ್ತಿದ್ದು, ಇದು ಮನುಕುಲದ ಆರೋಗ್ಯಕ್ಕೆ ಆದಾರವಾಗಿ ತನ್ನನ್ನು ತಾನು ಗುರುತಿಸಿಕೊಂಡಿದೆ.

ತುಳಸಿಯ ಉಪಯೋಗಗಳು
ಜ್ವರ ನಿವಾರಕ
ಒಂದು ಹಿಡಿಯಷ್ಟು ತುಳಸಿಯನ್ನು ಜಜ್ಜಿ ಒಂದು ಲೋಟ ನೀರಿನಲ್ಲಿ ಹಾಕಿ ಕುದಿಸಬೇಕು. ಹೀಗೆ ಕುದಿಸಿ ಅದು ಅರ್ದ ಲೋಟದಷ್ಟು ಆದ ಮೇಲೆ ಅದಕ್ಕೆ ಬೆಲ್ಲ ಬೆರೆಸಿ ಪ್ರತಿ ಬಾರಿ ನಾಲ್ಕು ಚಮಚದಂತೆ ದಿನಕ್ಕೆ ಮೂರು ಬಾರಿ ಕುಡಿದರೆ ಜ್ವರ ಗುಣಮುಖವಾಗುತ್ತದೆ. ಮಕ್ಕಳಿಗೆ ಜ್ವರ ಬಂದಿದ್ದರೆ ಒಂದು ಸಲಕ್ಕೆ ಎರಡು ಚಮಚ ಕುಡಿಸಿದರೆ ಸಾಕಾಗುತ್ತದೆ.

ಗಂಟಲು ನೋವು ನಿವಾರಕ
ತುಳಸಿ ಎಲೆ ಮತ್ತು ದೊಡ್ಡ ಪತ್ರೆ ಎಲೆಗಳನ್ನು ಜಜ್ಜಿ ಅರ್ಧ ಲೀಟರ್ ನೀರಿನಲ್ಲಿ ಬೆರೆಸಿ ಕುದಿಸಬೇಕು.ಈ ನೀರು ಅರ್ಧಕ್ಕಿಳಿದ ನಂತರ ಸ್ವಲ್ಪ ಉಪ್ಪು ಬೆರೆಸಿ ದಿನಕ್ಕೆ ಮೂರು ಬಾರಿ ಊಟಕ್ಕೆ ಮುನ್ನ ಕುಡಿದರೆ ಗಂಟಲು ನೋವು ಅತ್ಯಂತ ಬೇಗ ನಿವಾರಣೆಯಾಗುತ್ತದೆ.

ಹೊಟ್ಟೆ ನೋವು ಉಪಶಮನ
ತುಳಸಿ ರಸಕ್ಕೆ ಹಸಿ ಶುಂಠಿ ಸೇರಿಸಿ ಬಿಸಿ ಮಾಡಿ ನಾಲ್ಕು ಚಮಚದಂತೆ ದಿನಕ್ಕೆ ಎರಡು ಬಾರಿ ಸೇವನೆ ಮಾಡುವುದರಿಂದಾಗಿ ಹೊಟ್ಟೆ ನೋವು ಗುಣಮುಖವಾಗುತ್ತದೆ.

ಅಜೀರ್ಣ ಸಮಸ್ಯೆ
ತುಳಸಿ ಎಲೆಯನ್ನು ಜಜ್ಜಿ ಒಂದು ಲೋಟ ನೀರಿನಲ್ಲಿ ಬೆರೆಸಿಟ್ಟು ಮೂರರಿಂದ ನಾಲ್ಕು ಗಂಟೆಯ ಬಳಿಕ ಸೇವಿಸಿದರೆ ಅಜೀರ್ಣದ ಸಮಸ್ಯೆ ಬಹುಬೇಗ ನಿವಾರಣೆಯಾಗುತ್ತದೆ.

ಬಾಯಿ ದುರ್ನಾತ ನಿವಾರಕ
ತುಳಸಿ ಎಲೆಯನ್ನು ಬೆಳಿಗ್ಗೆ ಹಾಗೂ ರಾತ್ರಿ ಆಹಾರದ ನಂತರ ಸೇವನೆ ಮಾಡುವುದರಿಂದ ಬಾಯಿಯಿಂದ ಬರುವ ದುರ್ನಾತ ನಿವಾರಣೆಯಾಗುತ್ತದೆ.

ಕೀಲುನೋವಿಗೆ ರಾಮಬಾಣ
ಸುಮಾರು 20 ರಿಂದ 30 ತುಳಸಿ ಎಲೆಗಳನ್ನು ಮತ್ತು 5 ಕಾಳಮೆಣಸನ್ನು ಸೇರಿಸಿ ಅರೆದು ಈ ಮಿಶ್ರಣಕ್ಕೆ ಒಂದು ಚಮಚ ತುಪ್ಪ ಸೇರಿಸಿ ಬೆಳಿಗ್ಗೆ ಮತ್ತು ರಾತ್ರಿ ವೇಳೆ ಸೇವನೆ ಮಾಡುವುದರಿಂದಾಗಿ ಕೀಲುನೋವು ನಿವಾರಣೆಯಾಗುತ್ತದೆ.

ಉಬ್ಬಸ ಉಪಶಮನ
ತುಳಸಿ ಎಲೆಯನ್ನು ಜಜ್ಜಿ ಒಂದು ಲೀಟರ್ ನೀರಿನಲ್ಲಿ ಬೆರೆಸಿ ಕುದಿಸಿ, ಅದನ್ನು ಆಗಾಗ ಕುಡಿಯುತ್ತಿದ್ದರೆ ಉಬ್ಬಸದ ಸಮಸ್ಯೆ ಪರಿಹಾರವಾಗುತ್ತದೆ.

ಮೂಲವ್ಯಾಧಿ ನಿವಾರಕ
ಸುಮಾರು 10 ಗ್ರಾಂ ತುಳಸಿ ಬೀಜದ ಪುಡಿಗೆ ಒಂದು ಚಮಚ ಬೆಣ್ಣೆ, ಸ್ಪಲ್ಪ ಬೆಲ್ಲವನ್ನು ಸೇರಿಸಿ ದಿನಕ್ಕೆ ಎರಡು ಬಾರಿ ಸೇವನೆ ಮಾಡುವುದರಿಂದ ಮೂಲವ್ಯಾಧಿ ಗುಣಮುಖವಾಗುತ್ತದೆ.

ಹುಳುಕಡ್ಡಿ ನಿವಾರಕ
ತುಳಸಿ ಮತ್ತು ಬ್ರಾಹ್ಮಿ ಎಲೆಗಳನ್ನು ಸೇರಿಸಿ ಅರೆದು ಅದನ್ನು ಹುಳುಕಡ್ಡಿ ಇರುವ ಜಾಗಕ್ಕೆ ಲೇಪನ ಮಾಡುವುದರಿಂದ ಸಮಸ್ಯೆ ಬಹುಬೇಗ ನಿವಾರಣೆಯಾಗುತ್ತದೆ. ಅಲ್ಲದೆ ತುಳಸಿ ಎಲೆಯನ್ನು ಅರೆದು ಅದಕ್ಕೆ ಸ್ಪಲ್ಪ ಉಪ್ಪನ್ನು ಸೇರಿಸಿ ಹುಳುಕಡ್ಡಿ ಇರುವ ಜಾಗಕ್ಕೆ ಲೇಪನ ಮಾಡುವುದರಿಂದಲೂ ಸಮಸ್ಯೆ ನಿವಾರಣೆಯಾಗುತ್ತದೆ.

*ಆದರ್ಶ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.