ಚಿತ್ರಕಲೆಯಲ್ಲಿ ಮಿಂಚುತ್ತಿರುವ ಬಹುಮುಖ ಪ್ರತಿಭೆ ಶೈಲೇಶ್‌


Team Udayavani, Jul 20, 2021, 8:40 AM IST

ಚಿತ್ರಕಲೆಯಲ್ಲಿ ಮಿಂಚುತ್ತಿರುವ ಬಹುಮುಖ ಪ್ರತಿಭೆ ಶೈಲೇಶ್‌

ಕಲಿಯುವ ಆಸಕ್ತಿಯೊಂದಿಗೆ ಮಾಡುವ ಪ್ರತಿಯೊಂದು ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಖಂಡಿತ. ಇದೇ ರೀತಿಯ ಮಾರ್ಗವನ್ನು ಅನುಸರಿಸಿಕೊಂಡು ಗುರುವಿಲ್ಲದೆಯೇ ಕಲೆ ಕಲಿತು ಸಮಾಜದಲ್ಲಿ ತಮ್ಮನ್ನು ಎಲ್ಲರೂ ಗುರುತಿಸಿಕೊಳ್ಳುವಂತೆ ಮಾಡಿ, ಜೀವನದಲ್ಲಿ ತಮ್ಮ ಸ್ವಂತ ಪ್ರಯತ್ನದಿಂದ ಮೇಲೆ ಬಂದ ಹಲವು ಯುವ ಪ್ರತಿಭೆಗಳು ನಮ್ಮಲ್ಲಿ ಇದ್ದಾರೆ. ಅಂಥವರ ಸಾಲಿಗೆ ಸೇರುವ ಯುವಪ್ರತಿಭೆ ಶೈಲೇಶ್‌ ಬೈಕಂಪಾಡಿ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೈಕಂಪಾಡಿಯ ಉಮೇಶ್‌ ಅಂಚನ್‌ ಮತ್ತು ಶಶಿಕಲಾ ದಂಪತಿಯ ಪ್ರಥಮ ಪುತ್ರನಾದ ಇವರು ತನ್ನ ಪ್ರಾಥಮಿಕ ಮತ್ತು ಹೈಸ್ಕೂಲ್‌ ಶಿಕ್ಷಣವನ್ನು ಮೀನಕಳಿಯಾ ಶಾಲೆ ಬೈಕಂಪಾಡಿಯಲ್ಲಿ ಪೂರ್ತಿಗೊಳಿಸಿ, ಪದವಿಪೂರ್ವ, ಪದವಿ, ಹಾಗೆ ವಾಣಿಜ್ಯ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರಿನಲ್ಲಿ ಪಡೆದರು.

ಚಿಕ್ಕ ವಯಸ್ಸಿನಿಂದಲೇ ಚಿತ್ರಕಲೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದ ಇವರು ಸ್ವತಃ ತಾವೇ ಚಿತ್ರವನ್ನು ಮಾಡಲು ಪ್ರಾರಂಭಿಸಿದರು. “ಆರಂಭದ ದಿನಗಳಲ್ಲಿ ಚಿತ್ರಗಳನ್ನು ಯಾರು ಇಷ್ಟಪಡುತ್ತಿರಲಿಲ್ಲ ಅದನ್ನೇ ಸವಾಲನ್ನಾಗಿ ಸ್ವೀಕರಿಸಿ, ಹೆಚ್ಚಿನ ಆಸಕ್ತಿಯನ್ನು ತೋರಿದೆ. ಯೂಟ್ಯೂಬ್‌ನ ಮೂಲಕ ಕೆಲವೊಂದು ಮಾಹಿತಿಯನ್ನು ಪಡೆದೆ, ಅದರ ಜತೆಗೆ ತಂದೆ ತಾಯಿಯ ಉತ್ತಮ ಪ್ರೋತ್ಸಾಹ ಸಿಕ್ಕ ಕಾರಣ ಅದೇ ನನ್ನನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ’ ಎನ್ನುತ್ತಾರೆ ಶೈಲೇಶ್‌.

ಉತ್ತಮ ಚಿತ್ರಗಾರರಾದ ಇವರು ಪೆನ್ಸಿಲ್‌ ಸ್ಕೆಚ್‌, ವಾಟರ್‌ ಕಲರ್‌, ಫೇಸ್‌ ಪೈಟಿಂಗ್‌, ವಾಲ್‌ ಪೈಟಿಂಗ್‌, 3ಡಿ ಆರ್ಟ್‌, ಹೀಗೆ ಇನ್ನಿತರ ಹಲವು ಪೈಟಿಂಗ್‌ನಲ್ಲಿ ಪರಿಣತಿಯನ್ನು ಹೊಂದಿರುವ ಇವರು ಹಲವಾರು ಕಡೆಗಳಲ್ಲಿ ತನ್ನ ಕೈಚಳಕವನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇವರ ಕೈಚಳಕದಿಂದ ಮೂಡಿ ಬಂದ ತುಳುನಾಡ ದೈವಗಳ ಚಿತ್ರಗಳು ಎಲ್ಲೆಡೆಯೂ ಮನೆ ಮಾತಾಗಿದೆ. ಅಷ್ಟೇ ಅಲ್ಲದೆ ಕಾರ್ಯಕ್ರಮ ನಿರೂಪಣೆ, ತಬಲ, ಯಕ್ಷಗಾನ, ನಾಟಕಗಳನ್ನು ಮಾಡುತ್ತಿದ್ದು ಹಲವು ತಂಡಗಳ ಜತೆ ಸೇರಿ ನಾಟಕ, ಯಕ್ಷಗಾನ, ಪ್ರದರ್ಶನ ನೀಡಿ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ಶೈಲೇಶ್‌ ಭಜನ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತಾರೆ.

ಕಲೆಯ ಬೆಲೆ ಅರಿತವನೇ ನಿಜವಾದ ಕಲಾವಿದನಾಗಲೂ ಸಾಧ್ಯ ಎನ್ನುವ ಇವರಿಗೆ ಉತ್ತಮ ಚಿತ್ರಗಾರನಾಗಿ ಮಕ್ಕಳಿಗೆ ತರಬೇತಿ ನೀಡುವಾಸೆ ಹಾಗೇ ವಿದೇಶಕ್ಕೆ ಹೋಗುವ ಕನಸು. ಇವರ ಕಲೆಯನ್ನು ಮೆಚ್ಚಿ ಹಲವಾರು ಪ್ರಶಸ್ತಿಗಳು ಇವರನ್ನು ಅರಸಿ ಬಂದಿವೆ ಹಾಗೆಯೇ ಸಂಘ- ಸಂಸ್ಥೆಗಳೂ ಇವರನ್ನು ಸಮ್ಮಾನಿಸಿವೆ.

ಶೈಲಶ್ರೀ ಬಾಯಾರ್‌

ವಿವೇಕಾನಂದ ಕಾಲೇಜು ಪುತ್ತೂರು

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.