ರಾಜನಾಥ ಸಿಂಗ್-ಮಂಗಲಾ ಭೇಟಿ
Team Udayavani, Jul 18, 2021, 10:22 PM IST
ಬೆಳಗಾವಿ: ಸಂಸದೆ ಮಂಗಲಾ ಸುರೇಶ ಅಂಗಡಿ ಅವರು ಶನಿವಾರ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಳಗಾವಿ ನಗರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಕೆಲವು ರಸ್ತೆಗಳು, ರಕ್ಷಣಾ ಹಾಗೂ ಕಂಟೋನ್ಮೆಂಟ್ ವ್ಯಾಪ್ತಿಯಲ್ಲಿ ಬರುತ್ತಿದ್ದು, ಈ ರಸ್ತೆಗಳ ಅಗಲೀಕರಣ ಹಾಗೂ ಸುಧಾರಣೆಗೆ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡುವಂತೆ ಮನವಿ ಮಾಡಿದರು.
ರಸ್ತೆ ಅಗಲೀಕರಣಕ್ಕೆ ಬೇಕಾಗುವ ಜಾಗೆಯ ಬದಲಾಗಿ ಸಮಾನಾಂತರ ಮೌಲ್ಯದ ಜಾಗ ಸಹ ನೀಡುವ ಕುರಿತು ಪ್ರಸ್ತಾವನೆಯನ್ನು ಈಗಾಗಲೇ ಕರ್ನಾಟಕ ಸರಕಾರದಿಂದ ರಕ್ಷಣಾ ಇಲಾಖೆಗೆ ಕಳುಹಿಸಲಾಗಿದ್ದು, ಈ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡಿದಲ್ಲಿ ಹಲವು ತಿಂಗಳಿಂದ ನನೆಗುದಿಗೆ ಬಿದ್ದ ಪ್ರಸ್ತಾಪಿತ ಯೋಜನೆಯಡಿಯ ರಸ್ತೆ ಕಾಮಗಾರಿಗಳನ್ನು ಕೈಗೊಂಡು ಸುಗಮ ವಾಹನ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಕೂಡಲೇ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
MUST WATCH
ಹೊಸ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?