ಅವರೇ ನಾನಲ್ಲ ಅಂದ ಮೇಲೆ, ಅದರಲ್ಲಿರುವುದು ನಳಿನ್ ಧ್ವನಿಯೇ ಅಲ್ಲ : ರಘುಪತಿ ಭಟ್

ಹಾಲಾಡಿ ಶ್ರೀನಿವಾಸ್‌ ಶೆಟ್ಟಿ, ಸುನೀಲ್ ಕುಮಾರ್ ಗೆ ಸಚಿವ ಸ್ಥಾನ ನೀಡಿದರೇ ಪಕ್ಷಕ್ಕೆ ಒಳ್ಳೆಯದು :  ಭಟ್ ಅಭಿಪ್ರಾಯ  

Team Udayavani, Jul 19, 2021, 3:02 PM IST

Udupi MLA Raghupathi Bhat Statement ON Naleen Kumar Kateel’s Audio on CM changing Development in Karnataka

ಉಡುಪಿ : ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ಮುಖ್ಯಮಂತ್ರಿ ಬದಲಾವಣೆಯ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತಾಡಿರುವುದು ಎಂದು ಹೇಳಲಾಗುತ್ತಿರುವ ಆಡಿಯೋ ವಿಚಾರ ಭಾರಿ ಚರ್ಚೆಗೆ ಕಾರಣವಾಗುತ್ತಿದೆ.

ಆಡೀಯೋ ಕುರಿತಾಗಿ ಮಾಧ್ಯಮದವರಿಗೆ ಉಡುಪಿ ಶಾಸಕ ರಘಪತಿ ಭಟ್ ಪ್ರತಿಕ್ರಿಯಿಸಿ, ಆಡಿಯೋ ನನ್ನದಲ್ಲ ಎಂದು ನಳಿನ್ ಸ್ಪಷ್ಟವಾಗಿ ಹೇಳಿದ್ದಾರೆ. ರಾಜ್ಯದ್ಯಕ್ಷರೇ ಈ ಬಗ್ಗೆ ಸಿಎಂಗೆ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ತನಿಖೆಗೆ ಕೊಟ್ಟಿದ್ದಾರೆ, ತನಿಖೆ ಆದ‌ ಮೇಲೆ ಗೊತ್ತಾಗುತ್ತದೆ ಎಂದಿದ್ದಾರೆ.

ಅವರೇ ನಾನಲ್ಲ ಅಂದ ಮೇಲೆ, ಅದರಲ್ಲಿರುವುದು ನಳಿನ್ ಧ್ವನಿಯೇ ಅಲ್ಲ ಎಂದು ಭಾವಿಸಿದ್ದೇವೆ. ನಳಿನ್ ಅದು ತಮ್ಮದೇ ಧ್ವನಿ ಎಂದಿದ್ದರೆ ಸಂಚಲನ ವಾಗುತ್ತಿತ್ತು. ನಾಯಕತ್ವ ಬದಲಾವಣೆ ಇಲ್ಲ ಎಂದು  ನಳಿನ್ ಅವರೇ ಖುದ್ದಾಗಿ ಹೇಳಿದ್ದಾರೆ. ಹಾಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ :   ಕಟೀಲ್ ಸ್ವತಃ ಆಡಿಯೋ ತಮ್ಮದಲ್ಲ ಎಂದಿರುವಾಗ ಈ ಬಗ್ಗೆ ಮಾತನಾಡುವ ಅವಶ್ಯಕತೆ:ಅಶ್ವತ್ಥ್ ನಾರಾಯಣ್

ಇನ್ನು, ಶೆಟ್ಟರ್ ಮತ್ತು ಈಶ್ವರಪ್ಪ ಇಬ್ಬರೂ ನಮ್ಮ ಪಕ್ಷದ ಪ್ರಮುಖ ನಾಯಕರು. ಇಬ್ಬರು ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡಿದವರು. ಅವರ ಹೆಸರು ಪ್ರಸ್ತಾಪವಾಗಿರುವುದರಿಂದ ಈ ಆಡಿಯೋ ಸುಳ್ಳು ಎನ್ನ್ನುವುದು ಸಾಬೀತಾಗುತ್ತದೆ. ಇಬ್ಬರೂ ಕೂಡ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಶಾಸಕಾಂಗ ಸಭೆಯ ಕುರಿತಾಗಿ ಆಗುತ್ತಿರುವ ಚರ್ಚೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಸಕಾಂಗ ಸಭೆಯ ಬಗ್ಗೆ ಇನ್ನೂ ಅಧಿಕೃತವಾಗಿ ಆಹ್ವಾನ ಬಂದಿಲ್ಲ. ಶಾಸಕಾಂಗ ಸಭೆ ಕರೆಯಬೇಕೆಂದು ಶಾಸಕನಾಗಿ ನಾನು ಒತ್ತಾಯಿಸುತ್ತೇನೆ. ನಾಯಕತ್ವದ  ಬದಲಾವಣೆ ಸಲುವಾಗಿ ನನ್ನ ಬೇಡಿಕೆ ಅಲ್ಲ. ಪಕ್ಷದ ಇಮೇಜ್ ಹೆಚ್ಚಿಸುವ ದೃಷ್ಟಿಯಿಂದ ಸಭೆ ಮಾಡಬೇಕು. ಅಧಿವೇಶನಕ್ಕೂ ಮುನ್ನ ಶಾಸಕರ ಸಭೆ ಕರೆಯುವುದು ಸಂಪ್ರದಾಯ. ಶಾಸಕರ ಅಭಿಪ್ರಾಯ ತೆಗೆದುಕೊಂಡು ಅಧಿವೇಶನ ಆರಂಭಿಸುವುದು ಒಳ್ಳೆಯದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಹಾಲಾಡಿ, ಸುನಿಲ್ ಗೆ ಸಚಿವ ಸ್ಥಾನ ನೀಡಿ : ರಘುಪತಿ ಭಟ್

ಇನ್ನು, ಸಚಿವ ಸಂಪುಟದ ವಿಸ್ತರಣೆ ಹೈಕಮಾಂಡ್‌ ಹಾಗೂ ಮುಖ್ಯ ಮಂತ್ರಿಗೆ ಬಿಟ್ಟಿರುವ ವಿಷ್ಯ. ಆದ್ಯತೆ ಮೇರೆಗೆ ಹಾಲಾಡಿ ಹಾಗೂ ಸುನಿಲ್‌ ಕುಮಾರ್‌ ಅವರಿಗೆ ಸಚಿವ ಸ್ಥಾನ ಸಿಗಬೇಕು. ನಾನು ಸದ್ಯದ ಅವಧಿಗೆ ಸಚಿವ ಸ್ಥಾನದ ಆಕ್ಷಾಂಕಿ ನಾನಲ್ಲ. ನನಗೆ ನನ್ನ ಇತಿಮಿತಿ ಗೊತ್ತಿದೆ ಎಂದು ಹೇಳಿದ್ದಾರೆ.

ಹಾಲಾಡಿ ಶ್ರೀ ನಿವಾಸ್‌ ಶೆಟ್ಟಿ  ಸಚ್ಚಾರಿತ್ರ್ಯ, ಉತ್ತಮ ವ್ಯಕ್ತಿತ್ವದ ಹಿರಿಯ ಶಾಸಕ. ಸುನಿಲ್‌ ಕುಮಾರ್‌ ಹಿಂದುಳಿದ ವರ್ಗದ ನಾಯಕ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರಿಬ್ಬರಿಗೆ ಸಚಿವ ಸ್ಥಾನ ಕೊಟ್ಟರೆ ಪಕ್ಷಕ್ಕೆ ಒಳ್ಳೆಯದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :   ಉಳ್ಳಾಲ: ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯುತ್ತಿದ್ದ ಶಾಲೆಯಲ್ಲಿ ಆಕಸ್ಮಿಕ ಬೆಂಕಿ

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.