ಥಾಣೆ ನಗರದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣ: ಮನಪಾ


Team Udayavani, Jul 20, 2021, 10:02 AM IST

ಥಾಣೆ ನಗರದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣ: ಮನಪಾ

ಥಾಣೆ: ಮನಪಾ ಪ್ರದೇಶದಲ್ಲಿ ಸಕ್ರಿಯ ಕೋವಿಡ್ ರೋಗಿಗಳ ಸಂಖ್ಯೆ ಎರಡು ದಿನಗಳಲ್ಲಿ ಮತ್ತೆ ಒಂದು ಸಾವಿರಕ್ಕೆ ಇಳಿದಿದ್ದು, ಈ ಮಧ್ಯೆ ನಗರದಲ್ಲಿ ದಿನಂಪ್ರತಿ ನೂರು ಕೊರೊನಾ ರೋಗಿಗಳು ಕಂಡುಬರುತ್ತಿದ್ದಾರೆ. ರೋಗಿಗಳ ಚೇತರಿಕೆ ಪ್ರಮಾಣವು ಶೇ. 97.82ಕ್ಕೆ ತಲುಪಿದೆ ಎಂದು ಥಾಣೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಹೇಳಿದ್ದಾರೆ.

ಜೂನ್‌ ಕೊನೆಯಲ್ಲಿ ಥಾಣೆ ಮನಪಾ ಪ್ರದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಕಲ್ವಾ ಪ್ರದೇಶದಲ್ಲಿ ಸುಮಾರು 15 ರೋಗಿಗಳು ಪತ್ತೆಯಾಗಿದ್ದಾರೆ. ಜೂ. 21ರಂದು ಈ ಪ್ರದೇಶದಲ್ಲಿ 37 ರೋಗಿಗಳು ಕಂಡುಬಂದಿದ್ದರೆ, ನಗರದ ಉಳಿದ ಭಾಗಗಳಲ್ಲಿ 20ಕ್ಕಿಂತ ಕಡಿಮೆ ರೋಗಿ ಗಳಿದ್ದಾರೆ. ಕಲ್ವಾದ ಕೆಲವು ಭಾಗಗಳಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾ ಗುತ್ತಿರುವುದರಿಂದ ಮನಪಾಹೆಚ್ಚಿನ ಎಚ್ಚರಿಕೆಯನ್ನು ಹೊಂದಿತ್ತು. ಇದರ ಬಳಿಕ ಕಲ್ವಾ ಪ್ರದೇಶದಲ್ಲಿ ಕೋವಿಡ್ ಹರಡುವುದನ್ನು ತಡೆಗಟ್ಟಲು ಮನಪಾ ಆಡಳಿತ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿತು. ಎರಡು ಮೂರು ದಿನಗಳಲ್ಲಿ ಇಲ್ಲಿನ ಪರಿಸ್ಥಿತಿಯನ್ನು ಮತ್ತೆ ನಿಯಂತ್ರಣಕ್ಕೆ ತರಲಾಯಿತು.

ಜುಲೈ ಮೊದಲ ವಾರದಲ್ಲಿ ನಗರದಲ್ಲಿ ಸಕ್ರಿಯ ಕೋವಿಡ್ ರೋಗಿಗಳ ಸಂಖ್ಯೆ ಒಂದು ಸಾವಿರದೊಳಗೆ ಇತ್ತು. ಜು. 7ರ ಬಳಿಕ ನಗರದಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಲು ಪ್ರಾರಂಭಿಸಿ ಒಂದು ಸಾವಿರವನ್ನು ಮೀರಿತು. ಈ ಅಂಕಿಅಂಶ ವನ್ನು ಸತತವಾಗಿ ಮೂರು ದಿನಗಳವರೆಗೆ ನಿರ್ವಹಿಸಲಾಗಿದೆ. ರೋಗಿಗಳ ಸಂಖ್ಯೆ ಯಲ್ಲಿ  ಹಠಾತ್‌ ಹೆಚ್ಚಳದಿಂದಾಗಿ ಆಡಳಿತ ವನ್ನು ಎಚ್ಚರಿಸಲಾಯಿತು. ಹೆಚ್ಚುತ್ತಿರುವ ಕೊರೊನಾ ಪ್ರಮಾಣ ತಡೆಯಲು ಆಡಳಿತವು ಕ್ರಮಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿತ್ತು. ಆದರೆ ಮೂರು ದಿನಗಳ  ಬಳಿಕ ರೋಗಿಗಳ ಸಂಖ್ಯೆ ಮತ್ತೆ ಕಡಿಮೆಯಾಗಲು ಪ್ರಾರಂಭಿಸಿದೆ. ಈಗ ನಗರದಲ್ಲಿ ಸುಮಾರು 900 ಸಕ್ರಿಯ ರೋಗಿಗಳಿದ್ದರೆ, ನಗರದಲ್ಲಿ ಪ್ರತೀದಿನ ಸುಮಾರು 90ರಿಂದ 96 ರೋಗಿಗಳು ಕಂಡುಬರುತ್ತಿದ್ದಾರೆ. ದಿನಕ್ಕೆ ಒಂದರಿಂದ ಎರಡು ಸಾವುಗಳು ವರದಿಯಾಗುತ್ತಿವೆ. ಇದರ ಪರಿಣಾಮವಾಗಿ ನಗರದ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮನಪಾ  ಮೂಲಗಳು ತಿಳಿಸಿವೆ.

357 ಹೊಸ ಪ್ರಕರಣ :

ಥಾಣೆ ಜಿಲ್ಲೆಯಲ್ಲಿ ಕೋವಿಡ್ ಹೊಸದಾಗಿ 357 ಪ್ರಕರಣ ಸೇರ್ಪಡೆ ಯೊಂದಿಗೆ ಒಟ್ಟು ಸೋಂಕಿನ ಸಂಖ್ಯೆ 5,40,677ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಕೊರೊನಾದಿಂದ 8 ಮಂದಿ ಅಸುನೀಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 10,912ಕ್ಕೆ ಏರಿದೆ ಎಂದು ಅವರು ಹೇಳಿದ್ದಾರೆ. ಥಾಣೆಯಲ್ಲಿ ಕೋವಿಡ್‌-19 ಮರಣ ಪ್ರಮಾಣವು ಶೇ. 2.01ರಷ್ಟಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.