ಶಾಂತಿಯುತ ಬಕ್ರೀದ್ಗೆ ಡಿಸಿ ಕರೆ
Team Udayavani, Jul 20, 2021, 6:12 PM IST
ಚಿಕ್ಕಮಗಳೂರು: ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಜಿಲ್ಲಾ ಧಿಕಾರಿ ಕೆ.ಎನ್. ರಮೇಶ್ ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲೆಡೆ ಕೋವಿಡ್ ಆನ್ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದರೂ ಸಹ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆ ಅವಶ್ಯವಾಗಿದೆ. ಮುಂದಿನ ದಿನಗಳಲ್ಲಿ ಮೂರನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಸಾಮಾ ಜಿಕ ಅಂತರ ಸೇರಿದಂತೆ ಇತರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿಕೊಂಡು ಬಕ್ರೀದ್ ಹಬ್ಬವನ್ನು ಆಚರಿಸುವಂತೆ ತಿಳಿಸಿದರು. ಪ್ರಾರ್ಥನಾ ಮಂದಿರ ಹಾಗೂ ಮಸೀದಿಗಳಲ್ಲಿ ಶೇ.50ರಷ್ಟು ಜನರು ಭಾಗವಹಿಸಲು ಅವಕಾಶ ಕಲ್ಪಿಸಿದ್ದು, 65 ವರ್ಷ ಮೇಲ್ಪಟ್ಟ ಹಾಗೂ 10 ವರ್ಷ ವಯಸ್ಸಿನ ಒಳಗಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡುವಂತೆ ತಿಳಿಸಿದ ಅವರು, ಕಾನೂನು ಉಲ್ಲಂ ಘನೆಯಾಗದಂತೆ ಹಬ್ಬವನ್ನು ಆಚರಿಸಿ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಎಂ.ಎಚ್. ಅಕ್ಷಯ್ ಮಾತನಾಡಿ, ಹಬ್ಬದ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ. ಉಲ್ಲಂಘನೆಯಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾ ಧಿಕಾರಿ ಬಿ.ಆರ್. ರೂಪ, ಉಪ ವಿಭಾಗಾಧಿಕಾರಿ ಎಚ್. ಎಲ್. ನಾಗರಾಜ್ ಮತ್ತು ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್ ಇತರೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್