ರಾಜೀನಾಮೆ ಬಗ್ಗೆ ಯಡಿಯೂರಪ್ಪ ಏನು ಹೇಳಿಲ್ಲ: ಸಿಎಂ ಭೇಟಿಯ ಬಳಿಕ ಸಿದ್ದಗಂಗಾ ಶ್ರೀ
Team Udayavani, Jul 21, 2021, 3:42 PM IST
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಜೋರಾಗುತ್ತಿರುವ ಕಾರಣ ಮಂಗಳವಾರದಂತೆ ಇಂದೂ ಹಲವು ಸ್ವಾಮೀಜಿಗಳು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದರು. ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳು ಸೇರಿದಂತೆ ಇತರೆ ರಾಜ್ಯದ ಪ್ರಮುಖ ಮಠಾಧೀಶರು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದರು.
ಬಳಿಕ ಮಾತನಾಡಿದ ಸಿದ್ದಗಂಗಾ ಶ್ರೀಗಳು, ಕಳೆದೊಂದು ವಾರದಿಂದ ಸಿಎಂ ಬದಲಾವಣೆ ಬಗ್ಗೆ ಸುದ್ದಿಯಾಗುತ್ತಿದೆ. ಯಡಿಯೂರಪ್ಪ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಶಕ್ತಿ ಮೀರಿ ಕೆಲಸ ಮಾಡುವ ಅವರನ್ನು ಯಾಕೆ ಬದಲಾವಣೆ ಮಾಡುತ್ತಾರೆ? ಅದಕ್ಕಾಗಿ ಅವರು ಅವಧಿ ಪೂರ್ಣಗೊಳಿಸಬೇಕು ಎಂದು ನಾವೆಲ್ಲರೂ ಬಂದಿದ್ದೇವೆ ಎಂದರು.
ಇದನ್ನೂ ಓದಿ:ಯಡಿಯೂರಪ್ಪ ಸ್ವಾರ್ಥಕ್ಕಾಗಿ ಎಂದೂ ಯೋಚಿಸಿದವರಲ್ಲ: ರಾಘವೇಂದ್ರ
ರಾಜೀನಾಮೆ ಬಗ್ಗೆ ಯಡಿಯೂರಪ್ಪ ಏನೂ ಹೇಳಿಲ್ಲ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯಬೇಕು. ಇವಾಗ ಸಂದಿಗ್ಧ ಪರಿಸ್ಥಿತಿಯಿದೆ ಇಂತಹ ಸಂದರ್ಭದಲ್ಲಿ ಸಿಎಂ ಬದಲಾವಣೆ ಮಾಡುವುದು ಸರಿಯಲ್ಲ ನಾವೆಲ್ಲರೂ ಇಷ್ಟೇ ಹೇಳುವುದು ಎಂದರು.
ನಾವು ಯಾರು ರಾಜಕಾರಣಿಗಳ ಜೊತೆ ಓಡಾಡುತ್ತಿಲ್ಲ. ಆದರೆ ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯಬೇಕು ಎಂಬ ಅಪೇಕ್ಷೆ ನಮ್ಮದು ಎಂದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಜಾತಿಯಿಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ನಿರ್ಧಾರವಾಗುವುದು ಎಂದು ಶ್ರೀಗಳು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Pen drive case; ಇಂದೇ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ಶರಣು?
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್