ಕುದುರಿಸಾಲವಾಡಗಿ ಸೈನಿಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
Team Udayavani, Jul 22, 2021, 8:32 AM IST
ವಿಜಯಪುರ: ಜಿಲ್ಲೆಯಲ್ಲಿ ಸೈನಿಕನ ಮೇಲೆ ಹಲ್ಲೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಸೈನಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಬಸವನ ಬಾಗೇವಾಡಿ ತಾಲೂಕಿನ ಕುದರೆಸಾಲವಾಡಗಿ ಗ್ರಾಮದ ಸಂತೋಷ ಶಿವಪ್ಪ ಕಟ್ಟಿ (30 ವ) ಸೇನೆಯಲ್ಲಿ ಹವಾಲ್ದಾರ ಆಗಿದ್ದು, 10 ವರ್ಷದಿಂದ ಸೇನೆಯಲ್ಲಿದ್ದಾರೆ.
ತನ್ನ ಮದುವೆಗಾಗಿ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದು, ಗ್ರಾಮದ ಅರವಿಂದ ಕಡೇಮನಿ, ರಾಮಪ್ಪ ಕಡೇಮನಿ, ಬಸಗುಂಡಪ್ಪ ನಡುವಿನ ಮನಿ, ಮಲ್ಲವ್ವ ಕಡೇಮನಿ, ಭಾರತಿ ಕಡೇಮನಿ, ಸಾರ್ ಕಡೇಮನಿ, ರಮೇಶ ನಡುವಿನಮನಿ ಅವರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವುದಾಗಿ ಬಸವನ ಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:5 ಪೈಸೆ ಬಿರಿಯಾನಿಗಾಗಿ ಹೊಟೇಲ್ ಮುಂದೆ ಜಮಾಯಿಸಿದ ಜನರು:ಸಂಚಲನ ಸೃಷ್ಟಿಸಿದ ಮಾಲೀಕನ ಘೋಷಣೆ
ಸೈನಿಕ ಸಂತೋಷ ಕಟ್ಟಿ ಅವರ ತಂದೆ, ತಾಯಿ ಮತ್ತು ಕುಟುಂಬದವರಿಗೆ ಆರೋಪಿಗಳು ಈ ಹಿಂದೆ ಹಲ್ಲೆ ನಡೆಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ನಮ್ಮ ಕುಟುಂಬದ ಏಳಿಗೆ ಸಹಿಸದೇ ಈ ದುಷ್ಕೃತ್ಯ ನಡೆಸಿದ್ದಾರೆ ಎಂದು ಸಂತೋಷ ಪೊಲೀಸ್ ದೂರಿನಲ್ಲಿ ಆರೋಪಿಸಿದ್ದಾನೆ.
ತೀವ್ರವಾಗಿ ಗಾಯಗೊಂಡಿರುವ ಸೈನಿಕ ಸಂತೋಷ ಬಸವನಬಾಗೇವಾಡಿ ತಾಲೂಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ, ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಕುರಿತು ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ
Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ