ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧ: ಸಚಿವ ಗೋಪಾಲಯ್ಯ
Team Udayavani, Jul 22, 2021, 1:03 PM IST
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ನಮ್ಮ ಧನಿ. ನಾವೆಲ್ಲ ವಲಸಿಗರಲ್ಲ ನಾವೆಲ್ಲ ಬಿಜೆಪಿಯವರು. ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧ ಎಂದು ಸಚಿವ ಕೆ. ಗೋಪಾಲಯ್ಯ ಹೇಳಿದರು.
ವಿಧಾನಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಕ್ಯಾಬಿನೆಟ್ ಸಭೆಯಿದೆ. ನಾವೆಲ್ಲ ಸಿಎಂ ಜೊತೆ ಮಾತನಾಡುತ್ತೇವೆ. ನಾವೆಲ್ಲ ಅವರ ಜೊತೆ ಇದ್ದೇವೆ. ಮುಖ್ಯಮಂತ್ರಿಯವರ ಜೊತೆ ಮಾತನಾಡಿ ಅವರಿಗೆ ಧೈರ್ಯ ತುಂಬುತ್ತೇವೆ. ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.
ಇದನ್ನೂ ಓದಿ:ಕರ್ನಾಟಕದಲ್ಲಿ ಸಿಎಂ ಬದಲಾವಣೆ… 2001ರ ಗುಜರಾತ್ ಇತಿಹಾಸ ಇಲ್ಲಿ ಮರುಕಳಿಸುತ್ತಾ?
ಹೈಕಮಾಂಡ್ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಹೈಕಮಾಂಡ್ ನಿರ್ದಾರಕ್ಕೆ ನಾವು ಬದ್ಧ. ಹೈಕಮಾಂಡ್ ಭೇಟಿ ಮಾಡಲು ನಾವೆಲ್ಲ ಒಟ್ಟಿಗೆ ಕೂತು ಚರ್ಚೆ ಮಾಡಿ ತಿರ್ಮಾನ ಮಾಡುತ್ತೇವೆ ಎಂದು ಹೇಳಿದರು.
ಯಾವುದೇ ತೊಂದರೆಯಿಲ್ಲ: ನಾರಾಯಣ ಗೌಡ
ಸಚಿವ ನಾರಾಯಣ ಗೌಡ ಮಾತನಾಡಿ, ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಯಾವ ತರಹದ ಅಡಚಣೆಯೂ ಇಲ್ಲ. ಯಾವುದೇ ತೊಂದರೆಯಿಲ್ಲ. ಸಿಎಂ ಆಗಿದ್ದುಕೊಂಡೇ ಪಕ್ಷದ ಕೆಲಸ ಮಾಡಬಹುದು. ನಮ್ಮ ಹೈಕಮಾಂಡ್ ಯಡಿಯೂರಪ್ಪರವರೇ. ಅವರೇ ಸಿಎಂ ಆಗಿ ಮುಂದುವರಿಯಬೇಕೆಂದು ನಮ್ಮಆಸೆ. ಎಲ್ಲವೂ ಒಳ್ಳೆಯದಾಗಲಿದೆ ಎನ್ನುವ ವಿಶ್ವಾಸವಿದೆ ಎಂದರು.
ದೆಹಲಿಗೆ ಹೋಗುವ ಅಗತ್ಯ ಬಿದ್ದರೆ ಖಂಡಿತ ಹೋಗುತ್ತೇವೆ. ಆದರೆ ಸಿಎಂಗೆ ಹೇಳಿಯೇ ಹೋಗುತ್ತೇವೆ. ಸಿಎಂ ಬದಲಾವಣೆಯಾದರೆ ನಮ್ಮ ಸಚಿವ ಸ್ಥಾನಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು