ಬಂಧನದಿಂದ ಬಚಾವ್ ಆಗಲು ಪೊಲೀಸರಿಗೆ 25 ಲಕ್ಷ ರೂ.ಲಂಚ ನೀಡಿದ್ದರಾ ರಾಜ್ ಕುಂದ್ರಾ ?
Team Udayavani, Jul 22, 2021, 3:17 PM IST
ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಉಧ್ಯಮಿ ರಾಜ್ ಕುಂದ್ರಾ ಕುರಿತು ಮತ್ತೊಂದು ಸ್ಫೋಟಕ ಮಾಹಿತಿ ಹೊರ ಬಿದ್ದಿದೆ.
ಬಂಧನದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮುಂಬೈನ ಕ್ರೈಂ ಬ್ರ್ಯಾಂಚ್ ಪೊಲೀಸರಿಗೆ 25 ಲಕ್ಷ ರೂ. ಲಂಚ ನೀಡಿದ್ದರು ಎನ್ನುವ ಮಾಹಿತಿ ಇದೀಗ ಬಹಿರಂಗವಾಗಿದೆ. ಈ ಪ್ರಕರಣದ ಆರೋಪಿಗಳಲ್ಲಿa ಒಬ್ಬರಾದ ಅರವಿಂದ ಶ್ರೀವಾಸ್ತವ ಅಲಿಯಾಸ್ ರಾಶ್ ಠಾಕೂರ್ ಅಮೆರಿಕ ಮೂಲದ ಕಂಪನಿ ಹಾಗೂ ಪೊಲೀಸ್ ನಡುವೆ ಹಣ ವರ್ಗಾವಣೆ ಆಗಿರುವ ಕುರಿತು ಮಾರ್ಚ್ ನಲ್ಲಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಇಮೇಲ್ ಮೂಲಕ ದೂರು ನೀಡಿದ್ದರು. ಈ ಮೇಲ್ ನಲ್ಲಿ ಲಂಚದ ಕುರಿತಾದ ವಾಟ್ಸಾಪ್ ನ ಸ್ಕ್ರೀನ್ ಶಾಟ್ ಗಳಿದ್ದವು ಎಂದು ವರದಿಗಳು ತಿಳಿಸಿವೆ.
ಶ್ರೀವಾಸ್ತವ್ ಅಮೆರಿಕ ಮೂಲದ ಕಂಪನಿಯ ಹೊಂದಿದ್ದು, ಕಳೆದ ಮಾರ್ಚ್ ನಲ್ಲಿ ಸ್ಕ್ಯಾಂಡಲ್ ಹೊರ ಬಿದ್ದ ಮೇಲೆ ಪೊಲೀಸ್ ಇಲಾಖೆ ಈತನ ಹೆಸರಿನಲ್ಲಿ ಎರಡು ಬ್ಯಾಂಕ್ ಅಕೌಂಟ್ ಗಳಲ್ಲಿ ಸರಿಸುಮಾರು 4.50 ಕೋಟಿ ರೂ. ಹಣವನ್ನು ಜಪ್ತು ಮಾಡಿತ್ತು.
ಲಂಚದ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಮುಂಬೈ ಪೊಲೀಸ್ ಅಧಿಕೃತ ವಕ್ತಾರ ಡಿಸಿಪಿ ಚೈತನ್ಯ ಎಸ್ ಅವರು ಈ ಬಗ್ಗೆ ನನಗೆ ತಿಳಿದಿಲ್ಲ ಎಂದಿದ್ದಾರೆ.
ಇನ್ನು ಅಶ್ಲೀಲ ಚಿತ್ರಗಳನ್ನು ರಚಿಸಿ ಕೆಲವು ಆ್ಯಪ್ಗಳ ಮೂಲಕ ಪ್ರಕಟಿಸಿದ ಆರೋಪದ ಮೇಲೆ ಕುಂದ್ರಾ ಅವರನ್ನು ಜುಲೈ 19 ರಂದು ಮುಂಬೈ ಅಪರಾಧ ಶಾಖೆ ಬಂಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್