ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದತ್ತ ಪಾಲಿಕೆ
Team Udayavani, Jul 22, 2021, 3:56 PM IST
ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾಸೋಂಕು ಪ್ರಕರಣಗಳು ಕಡಿಮೆಯಾಗಿದ್ದರೂ,ಕೊರೊನಾ ಪರೀಕ್ಷೆ ಹಾಗೂ ಜ್ವರ ಸೇರಿದಂತೆ ಇನ್ನಿತರ ತಪಾಸಣಾಕೇಂದ್ರಕ್ಕೆ ನಿತ್ಯ ಸಾವಿರಕ್ಕೂ ಅಧಿಕ ಜನ ಭೇಟಿನೀಡುತ್ತಿದ್ದಾರೆ.
ಈಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳನ್ನುತೆರೆಯಲು ಪಾಲಿಕೆ ಮುಂದಾಗಿದೆ.ಕೊರೊನಾ ಅಲೆಯಲ್ಲಿ ಉಂಟಾದವೈದ್ಯಕೀಯ ಸೌಕರ್ಯಗಳ ಕೊರತೆಯಿಂದಬಿಬಿಎಂಪಿಸಾಕಷ್ಟುಸಮಸ್ಯೆಗಳನ್ನುಎದುರಿಸಿತ್ತು.ಇದುಮತ್ತೆಪುನಾರಾವರ್ತನೆಆಗಬಾರದು ಎಂಬ ಉದ್ದೇಶದಿಂದ ಪಾಲಿಕೆಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.
ಇದಕ್ಕೆ ಸಾಕ್ಷಿ ಎಂಬಂತೆಪಾಲಿಕೆ ವ್ಯಾಪ್ತಿಯಲ್ಲಿ ಮತ್ತಷ್ಟು ಸಂಖ್ಯೆಯಲ್ಲಿಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳನ್ನು ತೆರೆಯಲು ಅಗತ್ಯಅನುದಾನವನ್ನು ಒದಗಿಸು ವಂತೆ ರಾಜ್ಯಸರ್ಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಿದೆ.
57 ವಾರ್ಡ್ಗಳಲಿಲ್ಲ ಪಿಎಚ್ಸಿಕೇಂದ್ರ: ಪಾಲಿಕೆ ವ್ಯಾಪ್ತಿಯ ಎಲ್ಲ ವಾಡ್ìಗಳಲ್ಲಿಯೂ ಪ್ರಾಥಮಿಕ ಆರೋಗ್ಯಕೇಂದ್ರಗಳು (ಪಿಎಚ್ಸಿ) ಇಲ್ಲ ಎಂಬಮಾಹಿತಿಯನ್ನು ಸ್ವತಃ ಪಾಲಿಕೆಯೇಬಹಿರಂಗ ಪಡಿಸಿದೆ. 198 ವಾರ್ಡ್ಗಳ ಪೈಕಿ ಪ್ರಸ್ತುತಕೇವಲ 141 ವಾರ್ಡ್ಗಳಲ್ಲಿ ಪ್ರಾಥಮಿಕ ಆರೋ ಗ್ಯಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಇನ್ನುಳಿದ 57ವಾರ್ಡ್ಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳುಇನ್ನೂ ಪ್ರಾರಂಭವಾಗಿಲ್ಲ.
114 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ: 57ವಾರ್ಡ್ಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನುತೆರೆಯಲು ರಾಜ್ಯ ಸರ್ಕಾರ, ಈಗಾಗಲೇ ಅನುಮತಿನೀಡಿದೆ. ಅಲ್ಲದೆ, 10 ಕೋಟಿ ರೂ. ಅನುದಾನವನ್ನುಬಿಡುಗಡೆ ಮಾಡಿದೆ. ಆದರೆ, ಪಾಲಿಕೆ ವ್ಯಾಪ್ತಿಯಲ್ಲಿಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನುನಿರ್ಮಾಣ ಮಾಡಲು 114 ಕೋಟಿ ರೂ. ಅನುದಾನವನ್ನು ಒದಗಿಸುವಂತೆ ಪಾಲಿಕೆ, ರಾಜ್ಯ ಸರ್ಕಾರಕ್ಕೆನೀಡಿರುವ ಪ್ರಸ್ತಾವನೆಯಲ್ಲಿ ಮನವಿ ಮಾಡಿದೆ ಎಂದುಪಾಲಿಕೆ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
28 ವಾರ್ಡ್ಗಳಲ್ಲಿ ಸ್ಪೆಷಾಲಿಟಿ ಆಸ್ಪತ್ರೆ: ನಗರದಲ್ಲಿಕೋವಿಡ್ ಎರಡನೇ ಅಲೆ ಸೃಷ್ಟಿಸಿದ ಅವಘಡಗಳುಹಾಗೂ ಮೂರನೇ ಅಲೆ ಆತಂಕದಿಂದ ಪಾಲಿಕೆಎಚ್ಚೆತ್ತುಕೊಂಡಿದೆ. ಮುಂದೆ ಎರಡನೇ ಅಲೆಯಲ್ಲಿನಡೆದಂತ ಘಟನೆಗಳು ಮರುಕಳಿಸದಂತೆ ಆರೋಗ್ಯವ್ಯವಸ್ಥೆಯನ್ನು ಭದ್ರಗೊಳಿಸಲು ನಿರ್ಧಾರಕೈಗೊಂಡಿದೆ. ಹೀಗಾಗಿ, ನಗರದ 28 ವಾರ್ಡ್ಗಳಲ್ಲಿಸ್ಪೆಷಾಲಿಟಿ ಆಸ್ಪತ್ರೆ (ಸೆಕೆಂಡರಿ ಹಾಸ್ಪಿಟಲ…) ತೆರೆಯಲುಉದ್ದೇಶಿಸಿದೆ.
ಜತೆಗೆ, ನಾಲ್ಕು ಕಡೆಗಳಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳನ್ನು ತೆರೆಯುವ ಉದ್ದೇಶದಿಂದಒಂದು ಸಾವಿರ ಕೋಟಿ ರೂ. ಅನುದಾನಕ್ಕಾಗಿಪ್ರಸ್ತಾವನೆಯಲ್ಲಿ ಉಲ್ಲೇಖೀಸಿದೆ.ತಿಂಗಳಾಂತ್ಯದಲ್ಲಿ ಬಾಡಿಗೆಕಟ್ಟಡ ಪ್ರಾರಂಭ: ಪಾಲಿಕೆವ್ಯಾಪ್ತಿಯಲ್ಲಿ ಸ್ವಂತ ಕಟ್ಟಡ (ಆಸ್ಪತ್ರೆ)ನಿರ್ಮಾಣಸಾಧ್ಯವಾಗದಲ್ಲಿ ತುರ್ತಾಗಿ ಬಾಡಿಗೆ ಕಟ್ಟಡಗಳಲ್ಲಿಆರಂಭಿಸಲು ಪಾಲಿಕೆ ಚಿಂತಿಸಿದೆ. ಇದಕ್ಕೆ ಸಿದ್ಧತೆಯಲ್ಲಿಕೈಗೊಳ್ಳಲಾಗಿದೆ.
ಈಗಾಗಲೇ, 20 ಬಾಡಿಗೆಕಟ್ಟಡಗಳನ್ನು ಅಂತಿಮಗೊಳಿಸಲಾಗಿದ್ದು, ಜುಲೈತಿಂಗಳಾಂತ್ಯದಲ್ಲಿ ಪ್ರಾರಂಭಿಸುವ ಸಾಧ್ಯತೆಯಿದೆ.ಉಳಿದಂತೆ,28 ಸ್ಪೆಷಾಲಿಟಿ ಆಸ್ಪತ್ರೆಗಳ ಪೈಕಿ ಈಗಾಗಲೇನಾಲ್ಕು ಆಸ್ಪತ್ರೆಗಳುಕಾರ್ಯ ನಿರ್ವಹಿಸುತ್ತಿದೆ. ಪಾಲಿಕೆವ್ಯಾಪ್ತಿಯ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ಆಸ್ಪತ್ರೆತೆರೆಯಲು ಯೋಜನೆ ಸಿದ್ಧಪಡಿಸಲಾಗಿದೆ ಎಂದುಪಾಲಿಕೆ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
3ನೇ ಅಲೆ ತಡೆಗೆ ಅಗತ್ಯ ಕ್ರಮ: ಮೂರನೇ ಅಲೆಸಾಧ್ಯತೆ ಹಿನ್ನೆಲೆಯಲ್ಲಿ ತಜ್ಞರ ಸಮಿತಿ ಸಲಹೆಯನ್ನುಪಾಲಿಕೆ ಕಟ್ಟುನಿಟ್ಟಾಗಿ ಕಾರ್ಯರೂಪಕ್ಕೆ ತರುತ್ತಿದೆ.ಅದರಂತೆ, ಕೊರೊನಾ ಸೋಂಕು ಹರಡದಂತೆ ಅಗತ್ಯಕ್ರಮ ಕೈಗೊಳ್ಳಲಾಗಿದೆ. ನಗರದಲ್ಲಿ ಅನ್ಲಾಕ್ಜಾರಿಯಲ್ಲಿದ್ದರೂ ಕೋವಿಡ್ ಪರೀಕ್ಷೆ ಕಡಿಮೆಯಾಗಿಲ್ಲ. ದೆಹಲಿ ಹಾಗೂ ಮುಂಬೈ ನಗರಕ್ಕಿಂತಎರಡು ಪಟ್ಟು ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ.ಜತೆಗೆ, ಎರಡನೇ ಅಲೆಯಲ್ಲಿ ಆಗಿದ್ದ ಆಕ್ಸಿಜನ್ಸಮಸ್ಯೆ ಮರುಕಳಿಸದಂತೆ ಆಕ್ಸಿಜನ್ ಪ್ಲಾಂಟ್ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದುಮಾಹಿತಿ ನೀಡಿದ್ದಾರೆ.
ವಿಕಾಸ್ ಆರ್. ಪಿಟ್ಲಾಲಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
MUST WATCH
ಹೊಸ ಸೇರ್ಪಡೆ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ