ಮೃತಪಟ್ಟ ವಾರಿಯರ್ ಕುಟುಂಬಕ್ಕೆ ನೀಡಿಲ್ಲ ಪರಿಹಾರ
Team Udayavani, Jul 22, 2021, 6:04 PM IST
ಹರಪನಹಳ್ಳಿ: ಕೊರಾನಾದಿಂದ ಮೃತಪಟ್ಟ ಕುಟುಂಬಕ್ಕೆ ಇದುವರೆಗೂ ಪರಿಹಾರ ನೀಡಲಾಗದ ಆಡಳಿತರೂಢ ಬಿಜೆಪಿ ಸರ್ಕಾರ ಬರೀ ಸುಳ್ಳು ಪ್ರಚಾರ ಮಾಡುತ್ತ ಕಾಲಹರಣ ಮಾಡುತ್ತಿದೆ ಎಂದು ಮಾಜಿ ಸಚಿವ ಸಂತೋಷ್ ಲಾಡ್ ವಾಗ್ಧಾಳಿ ನಡೆಸಿದರು. ಪಟ್ಟಣದ ಹಳೇ ಬಸ್ ನಿಲ್ದಾಣದ ಸಮೀಪದ ಗರಡಿಮನೆ ಆವರಣದಲ್ಲಿ ದೈನಂದಿನ ಉಚಿತ ಊಟ ಸೇವಾ ಕೇಂದ್ರ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ದೇಶದ ಆರ್ಥಿಕ ವ್ಯವಸ್ಥೆ ಚೇತರಿಸಿಕೊಳ್ಳಲಾಗದಷ್ಟು ಕುಸಿತ ಕಂಡಿದೆ. ದುಡಿಯುವ ಕೈಗಳಿಗೆ ಕೆಲಸ ಇಲ್ಲದೆ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಗತ್ಯವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡ ಹಾಗೂ ಮಧ್ಯಮವರ್ಗದ ಕುಟುಂಬಗಳ ಬದುಕು ಆಯೋಮಯವಾಗಿದೆ. ರೂಪಾಯಿ ಮೌಲ್ಯ ಕುಸಿತವಾದರೂ, ಡಾಲರ್ ಮೌಲ್ಯ ಹೆಚ್ಚಳಕ್ಕೆ ಪ್ರಧಾನಿ ಮೋದಿಯವರೇ ಕಾರಣ, ರಾವಣರಾಜ್ಯ ಶ್ರೀಲಂಕಾ ದೇಶದಲ್ಲಿ ಪೆಟ್ರೋಲ್ ಬೆಲೆ ರೂ. 55 ಇದ್ದರೆ, ಸೀತೆಯ ನಾಡು ನೇಪಾಳದಲ್ಲಿ ರೂ. 60 ಇದೆ. ಆದರೆ ರಾಮರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಶತಕ ಬಾರಿಸಿವೆ.
ಜಿಡಿಪಿ ಬೆಳೆಸುವ ಮೂಲಕ ಆರ್ಥವ್ಯವಸ್ಥೆಯನ್ನು ಸರಿದಾರಿಗೆ ತರಬೇಕಾದ ಪ್ರಧಾನಮಂತ್ರಿಯವರು ತಮ್ಮ ಗಡ್ಡ ನೆವರಿಸಿಕೊಳ್ಳುವ ಮೂಲಕ ಶೋಕಿಗೆ ಇಳಿದಿದ್ದಾರೆ ಎಂದು ಕುಟುಕಿದರು. ಸಂಡೂರು ಕ್ಷೇತ್ರದ ಶಾಸಕ ಈ. ತುಕಾರಾಂ, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ. ಶಿವಯೋಗಿ, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಟಿ. ಸುಭಾಷ್ ಚಂದ್ರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಆಶಾಲತಾ, ಮುಖಂಡರಾದ ಸೋಮಪ್ಪ, ಮುಂಡರಗಿ ನಾಗರಾಜ್, ಇಮಾಮ್ ಹೊಸಪೇಟೆ, ಇರ್ಫಾನ್ ಮುದಗಲ್, ಸಿದ್ದು ಹಳ್ಳೇಗೌಡ, ತೆಲಿಗಿ ಉಮಾಕಾಂತ್, ಪುಷ್ಪಾ ದಿವಾಕರ್, ಶಿವುಕುಮಾರ್ ನಾಯ್ಕ, ಶ್ರೀಕಾಂತ್, ಜಿಷಾನ್ಅಲಿ, ವಿಜಯ್ ದಿವಾಕರ್, ಮತ್ತೂರು ಬಸವರಾಜ್, ಶಿವರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ
Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ
Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ