ಬ್ಯಾಡಗಿಯಲ್ಲಿ ನಟ ದರ್ಶನ್ ನೋಡಲು ಜನಸಾಗರ
ಮಾಜಿ ಶಾಸಕ ಸುರೇಶಗೌಡ ಪಾಟೀಲಗೆ ಜನ್ಮದಿನದ ಶುಭಾಶಯ ಕೋರಲು ಆಗಮಿಸಿದ್ದ ಚಾಲೆಂಜಿಂಗ್ ಸ್ಟಾರ್
Team Udayavani, Jul 22, 2021, 7:46 PM IST
ಬ್ಯಾಡಗಿ: ಪಟ್ಟಣದ ಮಾಜಿ ಶಾಸಕ ಸುರೇಶಗೌಡ ಪಾಟೀಲ ಅವರ ಅತಿಥಿ ಗೃಹಕ್ಕೆ ಖಾಸಗಿ ಭೇಟಿ ನೀಡಿದ್ದ ಚಿತ್ರ ನಟ ದರ್ಶನ್ ಅವರನ್ನು ನೋಡಲು ಬುಧವಾರ ಜನಸಾಗರವೇ ಸೇರಿತ್ತು.
ಕಳೆದ ಕೆಲ ದಿನಗಳಿಂದ ವಿವಿಧ ಕಾರಣಗಳಿಗೆ ಸುದ್ದಿಯಲ್ಲಿರುವ ಚಿತ್ರ ನಟ ದರ್ಶನ್ ಕಳೆದ ಸೋಮವಾರ ರಾತ್ರಿ ಪಟ್ಟಣಕ್ಕೆ ಆಗಮಿಸಿ ಮಾಜಿ ಶಾಸಕ ಸುರೇಶಗೌಡ ಪಾಟೀಲ ಅವರ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುರೇಶಗೌಡ ಪಾಟೀಲ ಅವರಿಗೆ 74ನೇ ಜನ್ಮದಿನದ ಶುಭಾಶಯ ತಿಳಿಸಲು ಬಂದಿದ್ದರು ಎನ್ನಲಾಗಿದೆ.
ನಟ ದರ್ಶನ್ ಅವರು ಬ್ಯಾಡಗಿ ಪಟ್ಟಣಕ್ಕೆ ಗೌಪ್ಯವಾಗಿ ಭೇಟಿ ನೀಡಿದ ಕುರಿತು ಮಾಹಿತಿ ಪಡೆದ ಅಭಿಮಾನಿಗಳು ಮಂಗಳವಾರ ತಡರಾತ್ರಿಯೂ ಗುಮ್ಮನಹಳ್ಳಿ ರಸ್ತೆಯಲ್ಲಿರುವ ಗೆಸ್ಟ್ಹೌಸ್ ಬಳಿ ಸೇರಿ ನೆಚ್ಚಿನ ನಟನೊಂದಿಗೆ ಫೋಟೋ ತೆಗೆಸಿಕೊಳ್ಳಲು ಮುಗಿಬಿದ್ದಿದ್ದರು.
ಅಭಿಮಾನಿಗಳ ಒತ್ತಡಕ್ಕೆ ಮಣಿದು ದರ್ಶನ್ ಕೆಲವರ ಜತೆ ಫೋಟೋ ತೆಗೆಸಿಕೊಂಡಿದ್ದಾರೆ. ಬುಧವಾರ ಸಹ ದರ್ಶನ್ ಅವರನ್ನು ನೋಡಲು ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಗೆಸ್ಟ್ಹೌಸ್ ಬಳಿ ಸೇರಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಹೊರ ಬಂದ ದರ್ಶನ್ ನೇರವಾಗಿ ಕಾರನ್ನೇರಿ ಸುರೇಶಗೌಡ ಪಾಟೀಲ ಮನೆಗೆ ತೆರಳಿ ಉಪಾಹಾರ ಸೇವಿಸಿದರು. ನಂತರ ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ
LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ
Brahmavara-ಉಡುಪಿ ಟ್ರಾಫಿಕ್ ಜಾಮ್ ಸಮಸ್ಯೆ: ಸವಾರರು ಸುಸ್ತೋ ಸುಸ್ತು
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
Udupi: ಪರಿಸರ ಸ್ನೇಹಿ ಸಿಎನ್ಜಿ ಬಸ್ ಸಂಚಾರ-ಸಿಎನ್ಜಿ ಲಭ್ಯತೆ ಸಮಸ್ಯೆ