ಜುಲೈ 25ಕ್ಕೆ ಬರುವ ಸೂಚನೆಯನ್ನು 26ಕ್ಕೆ ಪಾಲಿಸುವುದಾಗಿ ಸಿಎಂ ಹೇಳಿದ್ದಾರೆ : ಈಶ್ವರಪ್ಪ
Team Udayavani, Jul 23, 2021, 11:16 AM IST
ಚಿತ್ರದುರ್ಗ : ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಭಾರೀ ಚರ್ಚೆ ನಡೆಯುತ್ತಿದ್ದು, ಇದೇ ವಿಚಾರವಾಗಿ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಈಗಾಗಲೇ ಈ ಬಗ್ಗೆ ಹೇಳಿದ್ದಾರೆ. ರಾಷ್ಟ್ರೀಯ ನಾಯಕರ ಆದೇಶ ಪಾಲಿಸುವುದಾಗಿ ತಿಳಿಸಿದ್ದಾರೆ. ರಾಜ್ಯದ ಬಿಜೆಪಿ ಕಾರ್ಯಕರ್ತರು ಸಿಎಂ ಹೇಳಿಕೆ ಮೆಚ್ಚಿಕೊಂಡಿದ್ದಾರೆ. ಜುಲೈ 25ಕ್ಕೆ ಬರುವ ಸೂಚನೆಯನ್ನು 26ಕ್ಕೆ ಪಾಲಿಸುವುದಾಗಿ ಸಿಎಂ ಹೇಳಿದ್ದಾರೆ ಎಂದು ಚಿತ್ರದುರ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಪರೀಕ್ಷೆ ಬರೆದು ಪಾಸಾಗಿದ್ದೇವೆಂದ ಸಚಿವ ಯೊಗೀಶ್ವರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಅದೆಲ್ಲ ಹಳೇ ಓಬಿರಾಯನ ಕಥೆಗಳು ಅಂತಾರಲ್ಲ ಹಾಗೇ.. ಯೊಗೀಶ್ವರ್, ಯತ್ನಾಳ್, ಬೆಲ್ಲದ್ ಹೀಗೆ ಅಂದರು ಅನ್ನೋದೆಲ್ಲ ಮುಗೀತು. ರಾಷ್ಟ್ರೀಯ ನಾಯಕರು, ಬಿಎಸ್ ವೈ ಮಾತು ಅಷ್ಟೇ ಉಳಿದಿರುವುದು. ಇನ್ನು ಯಾರ ಮಾತಿಗೂ ಬೆಲೆ ಇಲ್ಲ. ಸಂಚು ಏನು ಅಲ್ಲ ಅವರ ಭಾವನೆ ಹೇಳಿದ್ದಾರೆ ಅಷ್ಟೇ ಎಂದರು.
ಪಕ್ಷ ಸೂಚಿಸಿದ ದಿಕ್ಕಿನಲ್ಲಿ ಬರದಿದ್ದರೆ ಅನುಭವಿಸಬೇಕಾಗುತ್ತದೆ ಎಂದು ಯತ್ನಾಳ್, ಯೊಗೀಶ್ವರ್, ಬೆಲ್ಲದ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಸಿಎಂ ಸ್ಥಾನಕ್ಕೆ ಅಭಿಮಾನಿಗಳು ನಮ್ಮ ಹೆಸರು ಹೇಳುತ್ತಿರುತ್ತಾರೆ. ಬೇಡ ಅಂದರೂ ಅಭಿಮಾನಿಗಳು ಕೇಳುವುದಿಲ್ಲ. ಎಲ್ಲಾ ಶಾಸಕರ ಅಭಿಪ್ರಾಯ ಕೇಳಿ ಕೇಂದ್ರದಿಂದ ಮುಂದಿನ ಸಿಎಂ ಆಯ್ಕೆ ಎಂದು ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ