ವರದಕ್ಷಿಣೆಯಾಗಿ ‘ಆಮೆ’ ಬೇಕೆಂದ ವರನ ಲೈಫ್ ಹರೋಹರ
Team Udayavani, Jul 23, 2021, 6:52 PM IST
ಔರಂಗಬಾದ್ : 21 ಉಗುರುಳ್ಳ ಆಮೆ, ಕಪ್ಪು ಲ್ಯಾಬ್ರಡಾರ್ ನಾಯಿಯನ್ನು ವರದಕ್ಷಿಣೆಯಾಗಿ ನೀಡುವಂತೆ ಬೇಡಿಕೆಯಿಟ್ಟಿದ್ದ ವರ ಮಹಾಶಯನೋರ್ವ ಇದೀಗ ಕಂಬಿ ಹಿಂದೆ ಕುಳಿತಿದ್ದಾನೆ.
ಸಾಮಾನ್ಯವಾಗಿ ವರದಕ್ಷಿಣೆ ರೂಪದಲ್ಲಿ ಬಂಗಾರ, ಹಣ, ವಾಹನ ಪಡೆಯುವುದು ಸಾಮಾನ್ಯ. ಆದರೆ, ಮಹಾರಾಷ್ಟ್ರದಲ್ಲೊಂದು ಕುಟುಂಬ ಹಣದ ಜೊತೆ ಆಮೆ-ನಾಯಿ ಕೇಳಿದ್ದಾರೆ.
ಇದೇ ವರ್ಷ ಫೆಬ್ರುವರಿ 10 ರಂದು ನಾಸಿಕ್ನಲ್ಲಿ ಭಾರತೀಯ ಸೇನೆಯ ಜವಾನನಾಗಿ ಕೆಲಸ ನಿರ್ವಹಿಸುತ್ತಿರುವ ವಿವಾಹ ನಿಶ್ಚಯ ಮಾಡಿಕೊಂಡಿದ್ದ. ನಿಶ್ಚಿತಾರ್ಥದ ಬಳಿಕ ವಧುವಿನ ಮನೆಯವರ ಬಳಿ ವರದಕ್ಷಿಣೆಯಾಗಿ ವಿಚಿತ್ರ ಬೇಡಿಕೆ ಸಲ್ಲಿಸಿದ್ದಾನೆ. 21 ಉಗುರುಳ್ಳ ಆಮೆ, ಕಪ್ಪು ಲ್ಯಾಬ್ರಡಾರ್ ನಾಯಿಯನ್ನು ವರದಕ್ಷಿಣೆಯಾಗಿ ನೀಡುವಂತೆ ಬೇಡಿಕೆಯಿಟ್ಟಿದ್ದ.
ವಧುವಿನ ಮನೆಯವರ ಬಳಿ ಈಗಾಗಲೇ 2 ಲಕ್ಷ ರೂಪಾಯಿ ನಗದು ಮತ್ತು 10 ಗ್ರಾಂ ಚಿನ್ನವನ್ನು ಪಡೆದಿದ್ದ. ವಧುವಿಗೆ ಕಾಯಂ ಸರ್ಕಾರಿ ಕೆಲಸ ಕೊಡಿಸುವುದಾಗಿ ಸುಮಾರು 10 ಲಕ್ಷ ರೂಪಾಯಿಯನ್ನು ಕಸಿದುಕೊಂಡಿರುವುದಾಗಿ ಹುಡುಗಿಯ ಮನೆಯವರು ಆರೋಪಿಸಿದ್ದಾರೆ.
21 ಉಗುರುಳ್ಳ ಆಮೆಯನ್ನು ಕೊಡಬೇಕು ಎಂದು ವಧುವಿನ ಮನೆಯವರನ್ನು ಪೀಡಿಸಿದ್ದಾನೆ. ಜೊತೆಗೆ ಕಪ್ಪು ಲ್ಯಾಬ್ರಡಾರ್ ನಾಯಿ, ಬುದ್ಧನ ವಿಗ್ರಹ, ಬೆಲೆಬಾಳುವ ದೇವರ ದೀಪಗಳ ಬೇಡಿಕೆ ಇಟ್ಟಿದ್ದಾನೆ. ಇಂತಹ ಆಮೆಯನ್ನು ಹುಡುಕಲು ವಧುವಿನ ಮನೆಯವರೂ ಹರಸಾಹಸ ಪಟ್ಟಿದ್ದಾರೆ. ವಿಫಲರಾದಾಗ ವರನಿಗೆ ಈ ವಿಚಾರ ತಿಳಿಸಿದ್ದಾರೆ. ವರ ಮದುವೆಯನ್ನು ಮುರಿಯುವುದಾಗಿ ತಿಳಿಸಿ, ಈಗಾಗಲೇ ಕೊಟ್ಟಿದ್ದ ಹಣ ಮತ್ತು ಅಮೂಲ್ಯ ವಸ್ತುಗಳನ್ನು ಹಿಂತಿರುಗಿಸಲು ನಿರಾಕರಿಸಿದ್ದಾನೆ. ಈ ವೇಳೆ ವಧುವಿನ ಕುಟುಂಬ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವರನನ್ನು ಬಂಧಿಸಿದ್ದಾರೆ.
ಇನ್ನು 21 ಉಗುರುಳ್ಳ ಆಮೆಗೆ ಭಾರೀ ಬೇಡಿಕೆ ಇದೆ. ಅಪರೂಪದ ಈ ಆಮೆಯಿಂದ ಅದೃಷ್ಟ ಕುಲಾಯಿಸುತ್ತದೆ ಎಂಬೆಲ್ಲ ಮೂಢನಂಬಿಕೆಗಳು ಇವೆ. ಹೀಗಾಗಿ ಕಪ್ಪು ಮಾರುಕಟ್ಟೆಯಲ್ಲಿ ಈ ಆಮೆಗೆ ಲಕ್ಷಾಂತರ ರೂಪಾಯಿ ಬೆಲೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ
Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
Rohit Vemula ದಲಿತ ಅಲ್ಲ; ಪೊಲೀಸ್ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
ಬಿಗ್ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ