ಬೆಳಗಾವಿಯಲ್ಲಿ ತಗ್ಗಿದ ಮಳೆ ಆರ್ಭಟ : ಕೊಂಚ ನಿಟ್ಟುಸಿರು ಬಿಟ್ಟ ನಿರಾಶ್ರಿತರು
Team Udayavani, Jul 24, 2021, 1:31 PM IST
ಸಂಕೇಶ್ವರ: ನೆರೆಯ ಮಹಾರಾಷ್ಟ್ರದ ಸಹ್ಯಾದ್ರಿ ಘಟ್ಟ ಪ್ರದೇಶಗಳನ್ನು ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಯ ಅರ್ಭಟ ಅಲ್ಪಮಟ್ಟದಲ್ಲಿ ಕಡಿಯಾಗಿರುವ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿಯಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ 2 ಅಡಿ ಇಳಿಮುಖವಾಗಿದೆ. ಈ ನಿಟ್ಟಿನಲ್ಲಿ ತಮ್ಮ ಮನೆ, ಆಸ್ತಿ, ಗೃಹಪಯೋಗಿ ವಸ್ತುಗಳನ್ನು ಕಳೆಕೊಂಡಿದ್ದ ನಿರಾಶ್ರಿತರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ.
ಕಳೆದ ಒಂದು ವಾರದಿಂದ ನೆರೆಯ ಮಹಾರಾಷ್ಟ್ರದಲ್ಲಿ ಹಾಗೂ ಜಿಲ್ಲೆಯ ಗಡಿ ಭಾಗದಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮ ಹಿರಣ್ಯಕೇಶಿ ನದಿಗೆ ಪ್ರವಾಹ ಉಂಟಾಗಿ ಸಂಕೇಶ್ವರ ನಗರವು ಅರ್ಧದಷ್ಟು ಜಲಾವೃತ ವಾಗಿ ಹಳೆ ಸಂಕೇಶ್ವರ ನಗರವು ನಡುಗಡ್ಡೆಯಂತಾಗಿ ಪರಿವರ್ತನೆ ಗೊಂಡಿತ್ತು. ಹಲವಾರು ಕುಟುಂಬಗಳು ಈ ಜಲ ಪ್ರವಾಹಕ್ಕೆ ತುತ್ತಾಗಿ ತಮ್ಮ ಮನೆ, ಆಸ್ತಿ, ಗೃಹಪಯೋಗಿ ಸಾಮಗ್ರಿಗಳನ್ನು ಕಳೆದುಕೊಂಡು ನಿರ್ಗತಿಕರಾಗಿ ಕಾಳಜಿ ಕೇಂದ್ರಗಳಲ್ಲಿ ಸೇರಿಕೊಂಡಿದ್ದರು.
ಸಂಕೇಶ್ವರದ ಹೊರವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಮೇಲೆ ಸುಮಾರು ಅಡಿಗಳಷ್ಟು ನೀರಿನ ಸೆಳೆತ ಉಂಟಾಗುವ ಮೂಲಕ ಅದರಲ್ಲಿ ಲಾರಿಯೊಂದು ಚಾಲಕ ಸಮೇತ ಮುಳಗಿತ್ತು. ಆದರೆ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ಅಧಿಕಾರಿಗಳ ಪ್ರಯತ್ನದಿಂದ ಲಾರಿಯ ಟಪ್ಪ ಮೇಲೆರಿ ರಕ್ಚಣೆ ಮಾಡುವಂತೆ ಮನವಿ ಮಾಡುತ್ತಿದ್ದ ಚಾಲಕನನ್ನು ರಕ್ಷಣೆ ಮಾಡಲಾಗಿದೆ. ಅದರಂತೆ ಶನಿವಾರ ಬೆಳಿಗಿನ ಜಾವು ಎಸ್.ಡಿ.ಆರ್.ಎಫ್ ತಂಡವು ಸಂಕೇಶ್ವರಕ್ಕೆ ಆಗಮಿಸಿ ನಡುಗಡ್ಡೆಯಂತ್ತಿದ್ದ ಹಳೆ ಸಂಕೇಶ್ವರದಲ್ಲಿ ಸಿಲುಕಿಕೊಂಡಿದ್ದ ಕೆಲವು ನಿರಾಶ್ರಿತರನ್ನು ಹೊರತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ