ಕೃಷಿ ಕ್ಷೇತ್ರಕ್ಕೆ ಸುಗ್ಗಿಕಾಲ


Team Udayavani, Jul 25, 2021, 5:33 PM IST

agriculture

ಕೊರೊನಾ ಎರಡೂ ಅಲೆಯ ಹಾವಳಿಯಿಂದ ಬಹುತೇಕ ಎಲ್ಲಕ್ಷೇತ್ರಗಳಿಗೆ ಪೆಟ್ಟು ಬಿದ್ದಿತು. ಆಯಾ ವರ್ಗಗಳು ತೀವ್ರ ಸಂಕಷ್ಟಎದುರಿಸಿದವು. ಇದರಿಂದ ಆ ಕ್ಷೇತ್ರಗಳ ಆಂತರಿಕ ವೃದ್ಧಿ ದರ ಪಾತಾಳಕ್ಕೆಕುಸಿಯಿತು.

ಈ ಸಂಕಷ್ಟದಲ್ಲೂ ಪ್ರಗತಿ ಸಾಧಿಸಿದ ಏಕೈಕ ಕ್ಷೇತ್ರ ಕೃಷಿ. ಇದಕ್ಕೆರೈತರ ಜತೆಗೆ ಕೃಷಿ ಇಲಾಖೆ ದೂರದೃಷ್ಟಿ ಮತ್ತು ಕಾರ್ಯಕ್ರಮಗಳುಕಾರಣ.ಲಾಕ್‌ಡೌನ್‌ ಸಂದರ್ಭದಲ್ಲಿ ರೈತರ ನೆರವಿಗಾಗಿ ಕೃಷಿ ಇಲಾಖೆ ವಾರ್‌ರೂಂ ಸ್ಥಾಪಿಸಿತು. ರೈತರು ತಮ್ಮ ಉತ್ಪನ್ನಗಳನ್ನು ಸಾಗಿಸಲು ನೀಡಿದ ಗ್ರೀನ್‌ಪಾಸ್‌, ಸ್ಥಳೀಯವಾಗಿ ನೇರ ಮಾರುಕಟ್ಟೆಗೆ ಅನುವು ಮಾಡಿಕೊಟ್ಟಿದ್ದು,

ಕೃಷಿ ಯಂತ್ರಧಾರೆ ಯೋಜನೆ ಇವೆಲ್ಲವೂ ಅನ್ನದಾತನ ಕೈಹಿಡಿಯಿತು.ಪರಿಣಾಮ ನೆರೆ ಮತ್ತು ಕೊರೊನಾ ಹಾವಳಿಗಳ ನಡುವೆಯೂ ಗುರಿಮೀರಿ ಆಹಾರ ಉತ್ಪಾದನೆ ಮಾಡಲು ಸಾಧ್ಯವಾಯಿತು. ಈ ಮೂಲಕದಾಖಲೆ ಕೃಷಿ ಇಲಾಖೆ ಬರೆಯಿತು. ಈಗ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ ಮಣ್ಣಿನಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ ಮತ್ತುಕೃಷಿಯಲ್ಲಿ ತಂತ್ರಜ್ಞಾನದ ಸಮರ್ಪಕ ಮತ್ತು ಪರಿಣಾಮಕಾರಿ ಬಳಕೆಗೆ ಸರ್ಕಾರ ಕಾರ್ಯಕ್ರಮ ರೂಪಿಸಿದ್ದು, ಇಲಾಖೆ ಅದನ್ನು ಕ್ರಮಬದ್ಧವಾಗಿಅನುಷ್ಠಾನಗೊಳಿಸಲಿದೆ. ಕಳೆದೆರಡು ವರ್ಷಗಳಲ್ಲಿ ಕೃಷಿ ಇಲಾಖೆಕಾರ್ಯಕ್ರಮ ಮತ್ತು ಸಾಧನೆಯ ಸಮಗ್ರ ನೋಟ ಇಲ್ಲಿದೆ.

ಅಧಿಕ ಬಿತ್ತನೆ; ದಾಖಲೆಯ ಉತ್ಪಾದನೆ

ಕೊರೊನಾ ಸೋಂಕಿನ ಸಂದರ್ಭದಲ್ಲಿ ರಾಜ್ಯದಲ್ಲಿ ನಿರ್ದಿಷ್ಟ ಗುರಿಗಿಂತಲೂಹೆಚ್ಚು ಕೃಷಿ ಪ್ರದೇಶದಲ್ಲಿ ಬಿತ್ತನೆ ಕಾರ್ಯನಡೆದಿದ್ದು, ದಾಖಲೆಯಪ್ರಮಾಣದಲ್ಲಿ ಆಹಾರ ಉತ್ಪಾದನೆ ಮಾಡಲಾಗಿದೆ.2019-20ನೇ ಸಾಲಿನಲ್ಲಿ 113.67 ಲಕ್ಷ ಹೆಕ್ಟೇರ್‌ ವಿಸ್ತೀರ್ಣದಲ್ಲಿವಿವಿಧ ಕೃಷಿ ಬೆಳೆಗಳ ಬಿತ್ತನೆ ಗುರಿ ಹೊಂದಲಾಗಿತ್ತು. 103.97 ಲಕ್ಷಹೆಕ್ಟೇರ್‌ ವಿಸ್ತೀರ್ಣದಲ್ಲಿ ಬಿತ್ತನೆಯಾಗಿತ್ತು. ಈ ಸಾಲಿನಲ್ಲಿ 138.67 ಲಕ್ಷಟನ್‌ ಆಹಾರ ಧಾನ್ಯಗಳ ಉತ್ಪಾದನಾ ಗುರಿ ಹೊಂದಲಾಗಿದ್ದು, ಈ ಪೈಕಿ136.41 ಲಕ್ಷಟನ್‌ ಉತ್ಪಾದನೆಯಾಗಿದೆ. 2020-21ನೇ ಸಾಲಿನಲ್ಲಿ110.00 ಲಕ್ಷ ಹೆಕ್ಟೇರ್‌ ವಿಸ್ತೀರ್ಣದಲ್ಲಿ ವಿವಿಧ ಕೃಷಿ ಬೆಳೆಗಳ ಬಿತ್ತನೆ ಗುರಿಇಟ್ಟುಕೊಳ್ಳಲಾಗಿತ್ತು. ಅದಕ್ಕಿಂತಲೂ ಅಧಿಕ ಅಂದರೆ 111.41 ಲಕ್ಷ ಹೆಕ್ಟೇರ್‌ವಿಸ್ತೀರ್ಣದಲ್ಲಿ ಬಿತ್ತನೆಯಾಗಿದೆ. ಅಲ್ಲದೆ, ಇದೇ ಸಾಲಿನಲ್ಲಿ 133.04 ಲಕ್ಷಟನ್‌ ಆಹಾರಧಾನ್ಯಗಳ ಉತ್ಪಾದನಾ ಮಾಡಲಾಗಿದ್ದು, ಅಂತಿಮವಾಗಿದಾಖಲೆಯ 158.73 ಲಕ್ಷ ಟನ್‌ ಪ್ರಮಾಣದಲ್ಲಿ ಉತ್ಪಾದನೆಯಾಗಿದೆ. ಈಮೂಲಕ ಸೋಂಕಿನ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗಳಿಗೆಯಾವುದೇ ಹಿನ್ನಡೆಯಾಗದಂತೆ ಕೃಷಿ ಇಲಾಖೆ ಕ್ರಮವಹಿಸಿದೆ.

ಅನ್ನದಾತರ ನೆರವಿಗೆ ಅಗ್ರಿ ವಾರ್‌ ರೂಂ

ಕೊರೊನಾ-19ರ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕೃಷಿ ಮತ್ತು ಕೃಷಿಸಂಬಂಧಿತ ಕ್ಷೇತ್ರಗಳಲ್ಲಿ ರೈತರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳನಿವಾರಣೆಗೆ ಸಲಹೆ ನೀಡಲು ಮತ್ತು ಕೃಷಿ ಚಟುವಟಿಕೆಯನ್ನುಸುಗಮಗೊಳಿಸಲು ಪ್ರಮುಖ ಹೆಜ್ಜೆಯಾಗಿ ಕೃಷಿ ಇಲಾಖೆಯಆವರಣದಲ್ಲಿ “ಅಗ್ರಿ ವಾರ್‌ ರೂಂ’ ಅನ್ನು ಸ್ಥಾಪಿಸಲಾಯಿತು. ರೈತರಿಗೆ ದೂರವಾಣಿ ಮೂಲಕ ಮಾಹಿತಿ ಒದಗಿಸಲಾಗುತ್ತಿತ್ತು. ಇದರಿಂದ ಅವರುತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇದು ನೆರವಾಗುತ್ತಿದೆ.ಇಂದಿಗೂ ಈ ವಾರ್‌ ರೂಂ ಕಾರ್ಯಾಚರಣೆಯಲ್ಲಿದೆ.ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳೂ ಕೂಡ ಅಗ್ರಿ ವಾರ್‌ ರೂಂ’ಪ್ರಾರಂಭಿಸಿ ಕೋವಿಡ್‌ ಸಂಕಟದ ಸಮಯದಲ್ಲಿ ರೈತರಿಗೆ ತಾಂತ್ರಿಕ ಮಾಹಿತಿ, ಸಲಹೆ ನೀಡಲು ಹಾಗೂ ಕ್ಷೇತ್ರ ಭೇಟಿಯ ಅಗತ್ಯಗಳಿಗೆಸ್ಪಂದಿಸಲು ನೆರವಾಗುತ್ತಿವೆ. ಸಂಪರ್ಕ ಮಾಹಿತಿ, ಮಾರಾಟ ವ್ಯವಸ್ಥೆಗೆ ಸಂಪರ್ಕ ಸೇತುವಾಗಿ ಕಾರ್ಯ ನಿರ್ವಹಿಸುತ್ತಿವೆ. ರೈತರಲ್ಲಿ ಕೊರೊನಾಸೋಂಕಿನ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಬೀಜ,ನರ್ಸರಿಗಳ ಹಾಗೂ ಮಾರುಕಟ್ಟೆ ಮಾಹಿತಿ ಒದಗಿಸುತ್ತಿವೆ.

ಸಂಚಾರಕ್ಕೆ ಗ್ರೀನ್‌ ಪಾಸ್‌

ರಾಜ್ಯದಲ್ಲಿ ಕೊರೊನಾ ಕಟ್ಟುನಿಟ್ಟಿನ ಲಾಕ್‌ಡೌನ್‌ಜಾರಿಯಲ್ಲಿದ್ದ ಅವಧಿಯಲ್ಲಿ ಒಂದು ಕಡೆಯಿಂದಮತ್ತೂಂದು ಕಡೆಗೆ ವಾಹನ ಸಂಚಾರಕ್ಕೆ ಹಾಗೂಜನರ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು.ಇಂತಹ ಸಂದರ್ಭದಲ್ಲಿ ಕೃಷಿಕರಿಗೆ ಅನಾನುಕೂಲಆಗಬಾರದು, ಅವರು ಬೆಳೆದ ಕೃಷಿ ಉತ್ಪನ್ನಗಳಮಾರಾಟಕ್ಕೆ ಹಾಗೂ ಕೃಷಿ ಕಾರ್ಯಕ್ಕೆ ಯಾವುದೇತೊಂದರೆ ಆಗಬಾರದು ಎಂಬ ಉದ್ದೇಶದಿಂದರೈತರಿಗೆ ಕೃಷಿ ಇಲಾಖೆಯ ವತಿಯಿಂದ “ಗ್ರೀನ್‌ಪಾಸ್‌’ ವಿತರಣೆ ಮಾಡಲಾಗಿತ್ತು. ಕೃಷಿಸಾಮಗ್ರಿಗಳ ಮತ್ತು ಕೃಷಿ ಉತ್ಪನ್ನಗಳ ಸಾಗಾಣಿಕೆಗೆಲಾಕ್‌ಡೌನ್‌ ನಿಂದ ಸಡಿಲಗೊಳಿಸಿ ಅನುಕೂಲಮಾಡಲಾಯಿತು.

ಸಂಚಾರ ಸಸ್ಯ ಆರೋಗ್ಯ ಚಿಕಿತ್ಸಾಲಯ

ಕೀಟ/ ರೋಗ ಮತ್ತು ಕಳೆಗಳ ಬಾಧೆ ಹಾಗುಮಣ್ಣಿನ ಪೋಷಕಾಂಶಗಳ ಕೊರತೆ ಮತ್ತುಸಮರ್ಪಕ ನಿರ್ವಹಣೆ ಕುರಿತಂತೆ ರೈತರತಾಕುಗಳಿಗೆ ಭೇಟಿ ನೀಡಿ ಹತೋಟಿ ಕ್ರಮಗಳಕುರಿತು ಮಾರ್ಗೋಪಾಯಗಳನ್ನು ಒದಗಿಸಲುರಾಜ್ಯ ಸರ್ಕಾರದ ವತಿಯಿಂದ 60 ಸಂಚಾರ ಸಸ್ಯಆರೋಗ್ಯ ಚಿಕಿತ್ಸಾಲಯಗಳನ್ನು (ಕೃಷಿ ಸಂಜೀವಿನಿವಾಹನ ಒಳಗೊಂಡಂತೆ) ಎಲ್ಲಾ ಜಿಲ್ಲೆಗಳಲ್ಲಿ ಸ್ಥಾಪಿಸಲಾಗಿದೆ. ಇದಕ್ಕಾಗಿ 2020-21ನೇಸಾಲಿನಲ್ಲಿ 12.70 ಕೋಟಿ ವೆಚ್ಚ ರೂ. ಅನುದಾನ ನೀಡಲಾಗಿದೆ.

 

ಟಾಪ್ ನ್ಯೂಸ್

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.