ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ


Team Udayavani, Jul 26, 2021, 7:30 AM IST

ಕಾದು ನೋಡೋಣ : ವರಿಷ್ಠರ ಮೇಲೆ ಭಾರ ಹಾಕಿರುವ ಸಿಎಂ ಬಿಎಸ್‌ವೈ

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ವಿಚಾರ ಕ್ಷಣ ಕ್ಷಣಕ್ಕೂ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಅವರು ಸೋಮವಾರ ಪದತ್ಯಾಗ ಮಾಡುತ್ತಾರೆಯೇ ಎಂಬ ಕುತೂಹಲ ಮಾತ್ರ ಹಾಗೆಯೇ ಉಳಿದುಕೊಂಡಿದೆ.

ರವಿವಾರ ಸಂಜೆ ಹೊತ್ತಿಗೆ ಪಕ್ಷದ ವರಿಷ್ಠರಿಂದ ಸಂದೇಶ ಬರಲಿದೆ ಎಂಬ ವರದಿಗಳ ನಡುವೆಯೇ “ಪಕ್ಷದ ವರಿಷ್ಠರು ಸೂಚನೆ ನೀಡಿದರೆ ರಾಜೀನಾಮೆ ಸಲ್ಲಿಸುತ್ತೇನೆ’ ಎಂದು ಒತ್ತಿ ಹೇಳುವ ಮೂಲಕ ಯಡಿಯೂರಪ್ಪ ಹೊಸ ರಾಜಕೀಯ ದಾಳ ಉರುಳಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಸೋಮವಾರಕ್ಕೆ ಎರಡು ವರ್ಷ ಪೂರೈಸುತ್ತಿದೆ. ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಸೋಮವಾರ ಮಧ್ಯಾಹ್ನ ರಾಜ್ಯಪಾಲರ ಜತೆ ಮಾತುಕತೆಗೆ ಸಮಯ ನಿಗದಿಪಡಿಸಿಕೊಂಡಿದ್ದಾರೆ ಎಂಬ ವರದಿ ಮತ್ತಷ್ಟು ಊಹಾಪೋಹಗಳಿಗೆ ಕಾರಣವಾಗಿದೆ. ರವಿವಾರ ವರಿಷ್ಠರಿಂದ ಸಂದೇಶ ಬರಲಿದೆ ಎಂಬ ಸುದ್ದಿಗಳ ನಡುವೆಯೇ ಬೆಳಗಾವಿ ಪ್ರವಾಹಪೀಡಿತ ಪ್ರದೇಶಗಳ ವೀಕ್ಷಣೆಗೆ ತೆರಳಿದ್ದ ಯಡಿಯೂರಪ್ಪ “ವರಿಷ್ಠರ ಸಂದೇಶಕ್ಕಾಗಿ ಕಾಯುತ್ತಿದ್ದೇನೆ’ ಎಂದು ನಾಲ್ಕೈದು ಬಾರಿ ಹೇಳಿರುವುದು ಹಲವು ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಯಿತು.

ಇನ್ನೊಂದೆಡೆ ಗೋವಾದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು “ಯಡಿಯೂರಪ್ಪ ಅವರಿಗೆ ಪಕ್ಷ ಎಲ್ಲವನ್ನೂ ನೀಡಿದೆ’ ಎಂದು ಹೇಳಿದರೆ, ಮತ್ತೂಂದೆಡೆ ದಿಲ್ಲಿಯಲ್ಲಿ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, “ಬಿಎಸ್‌ವೈ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ’ ಎಂದಿದ್ದಾರೆ. ಇವೆರಡೂ ಬೇರೆ ಬೇರೆಯದೇ ವ್ಯಾಖ್ಯಾನಗಳನ್ನು ಹುಟ್ಟುಹಾಕಿದ್ದು, ದಿನವಿಡೀ ಗೊಂದಲ ಗೂಡಾಯಿತು.

ವರಿಷ್ಠರು ಇಕ್ಕಟ್ಟಿಗೆ?
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊನೇ ಘಳಿಗೆಯಲ್ಲಿ ಪ್ರವಾಹ ಪೀಡಿತ ಜಿಲ್ಲೆಗೆ ತೆರಳಿ ತಮ್ಮದೇ ರೀತಿಯಲ್ಲಿ ರಾಜಕೀಯ ಸಂದೇಶ ನೀಡಿದ್ದಾರೆ. ಇಂತಹ ಕಠಿನ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಗೆ ಸೂಚಿಸಿದರೆ ಭವಿಷ್ಯದಲ್ಲಿ ಬಿಜೆಪಿಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆ ಇರುವುದು ವರಿಷ್ಠರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಬಿಎಸ್‌ವೈ ಹೇಳಿಕೆ ಹಿಂದಿನ ಗುಟ್ಟೇನು?
“ವರಿಷ್ಠರು ಸಂದೇಶ ಕಳುಹಿಸಿದರೆ ಪಾಲಿಸುವೆ, ಕಾದು ನೋಡೋಣ’
1. “ರಾಜೀನಾಮೆಯ ಸಂದೇಶ ಕಳುಹಿಸಿ’ ಎನ್ನುವ ಬಹಿರಂಗ ಸವಾಲು?
2. ಇಂಥ ಕಠಿನ ಸಂದರ್ಭದಲ್ಲಿ ಬದಲಾಯಿಸಿ ನೋಡಿ ಎಂಬ ಪಂಥಾಹ್ವಾನ?
3. ನಿರ್ಲಿಪ್ತವಾಗಿದ್ದು, ಅನುಕಂಪ ಮೂಡಿಸುವ ತಂತ್ರ?

ದಿನದ ತಿರುವು
1. ವರಿಷ್ಠರ ಸಂದೇಶದ ನಿರೀಕ್ಷೆಯ ನಡುವೆ ಬೆಳಗಾವಿ ಪ್ರವಾಹ ವೀಕ್ಷಣೆ, ನಿರ್ಲಿಪ್ತವಾಗಿ ಕರ್ತವ್ಯ ನಿರ್ವಹಣೆ.
2. ಈವರೆಗೂ ಯಾವುದೇ ಸಂದೇಶ ಬಂದಿಲ್ಲ. ಬಂದ ಮೇಲೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂಬ ಸ್ಪಷ್ಟ ಹೇಳಿಕೆ.
3. ಯಡಿಯೂರಪ್ಪ ಅವರಿಗೆ ಪಕ್ಷ ಎಲ್ಲವನ್ನೂ ಕೊಟ್ಟಿದೆ ಎಂಬ ಸಿ.ಟಿ. ರವಿ ಹೇಳಿಕೆ.
4. ಬಿಎಸ್‌ವೈ ಉತ್ತಮ ಕೆಲಸ ಮಾಡಿದ್ದಾರೆ, ರಾಜಕೀಯ ಗೊಂದಲ ಇಲ್ಲ ಎಂಬ ಜೆ.ಪಿ. ನಡ್ಡಾ ಮಾತು.
5. ಸೋಮವಾರ ಅಪರಾಹ್ನ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡುವೆ ಎಂಬ ಬಿಎಸ್‌ವೈ ಹೇಳಿಕೆ
6. ಗಣಿ ಸಚಿವ ಮುರುಗೇಶ್‌ ನಿರಾಣಿ ದಿಲ್ಲಿ ಭೇಟಿಯ ದಿಢೀರ್‌ ಬೆಳವಣಿಗೆ.

ದಿಲ್ಲಿಗೆ ತೆರಳಿದ ಜೋಶಿ
ಜುಲೈ 26ರಂದು ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೇರುವ ಸಂಭಾವ್ಯರಲ್ಲಿ ಒಬ್ಬರಾದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಅವರು ರವಿವಾರ ಮಧ್ಯಾಹ್ನದ ವರೆಗೂ ಬೆಂಗಳೂರಿನಲ್ಲಿದ್ದರು. ಆದರೆ ಜು. 26ರಂದೇ ಯಡಿಯೂರಪ್ಪ ರಾಜೀನಾಮೆ ನೀಡುವುದು ಅನುಮಾನ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಹ್ಲಾದ್‌ ಜೋಶಿ ರವಿವಾರ ಸಂಜೆ ದಿಲ್ಲಿಗೆ ತೆರಳಿದ್ದಾರೆ.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.