ಸಿಂಗಂಗಳಾಗಲು ಪೊಲೀಸರು ಸಜ್ಜು


Team Udayavani, Jul 26, 2021, 5:50 PM IST

bangalore news

ಕೊರೊನಾ ಮೊದಲ ಮತ್ತು 2ನೇ ಅಲೆ ವೇಳೆ ಲಾಕ್ಡೌನ್ ಘೋಷಿಸಿದ್ದಾಗ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರು ಹಗಲಿರುಳೆನ್ನದೆ ದಿನದ 24 ಗಂಟೆ ನಿರಂತರವಾಗಿ ಕರ್ತವ್ಯದಲ್ಲಿ ತೊಡಗಿದ್ದರು. ಹೀಗಾಗಿ, ಲಾಕ್ಡೌನ್ ಅವಧಿಯಲ್ಲಿ ಅರೋಗ್ಯ ರಕ್ಷಣೆಯ ವಿಚಾರವಾಗಿ ಅತಿಹೆಚ್ಚು ಅಪಾಯ ಎದುರಿಸಿದ್ದು, ಪೊಲೀಸರು. ಜನರ ಪ್ರಾಣ ರಕ್ಷಣೆಗೆ ತಮ್ಮ ಪ್ರಾಣಗಳನ್ನು ಪಣಕ್ಕಿಟ್ಟು ಕೆಲಸ ಮಾಡಬೇಕಾದ ಅನಿವಾರ್ಯತೆ ಪೊಲೀಸರಿಗಿತ್ತು.

ಜನರ ಪ್ರಾಣ ರಕ್ಷಣೆಯ ಧಾವಂತದಲ್ಲಿ ಅನೇಕ ಪೊಲೀಸರು ತಮ್ಮ ಪ್ರಾಣಗಳನ್ನು ಕಳೆದುಕೊಂಡರು. ಸಾಮಾನ್ಯವಾಗಿ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರ ಆರೋಗ್ಯ ಸ್ಥಿತಿ, ದೈಹಿಕ ಸಾಮರ್ಥ್ಯದ ಬಗ್ಗೆ ಹೆಚ್ಚು ಗಮನ ನೀಡಲಾಗುತ್ತದೆ. ಕೊರೊನಾ ಈ ಕುರಿತು ಇನ್ನಷ್ಟು ಗಮನ ಕೇಂದ್ರೀಕರಿಸುವ ಸ್ಥಿತಿ ನಿರ್ಮಿಸಿದೆ.

ಅದಕ್ಕಾಗಿ, ಪೊಲೀಸರ ಆರೋಗ್ಯ, ದೈಹಿಕ ಸಾಮರ್ಥ್ಯವನ್ನು ಸದೃಢಗೊಳಿಸಲು ಅವರ ಮಾನಸಿಕ ಸ್ಥಿಮಿತವನ್ನು ನಿಯಂತ್ರಣದಲ್ಲಿಡಲು ಹತ್ತಾರು ಪ್ರಯೋಗಕ್ಕೆ ತೆರೆದುಕೊಂಡಿದೆ. ಪೊಲೀಸರ ಕರ್ತವ್ಯದೊತ್ತಡ ಕಂಡು ಕೆಲ ಸ್ವಯಂ ಸೇವಾ ಸಂಸ್ಥೆಗಳು ಉಚಿತವಾಗಿ ಪೊಲೀಸರಿಗೆ ನಿಯಮಿತವಾದ ಯೋಗಾಭ್ಯಾಸ, ದೈಹಿಕ ವ್ಯಾಯಾಮ, ಸೈಕ್ಲಿಂಗ್ ಜಾಥಾ ಮತ್ತಿತರರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಇಂಥ ಪ್ರಯತ್ನಕ್ಕೆ ಮೆಚ್ಚುಗೆಯೂ ವ್ಯಕ್ತವಾಗಿದೆ. ಆಪ್ತಸಮಾಲೋಚಕರಿಂದ ಸಲಹೆ: ವಿಧಾನಸೌಧ, ವಿಕಾಸಸೌಧ, ಮುಖ್ಯಮಂತ್ರಿಗಳು, ಸಚಿವರು, ಗಣ್ಯರ ಭದ್ರತೆ, ಪ್ರೊಟೋಕಾಲ್(ಶಿಷ್ಟಚಾರ)ಗೆ ನಿಯೋಜನೆಗೊಳ್ಳುವ ನಗರ ಸಶಸ್ತ್ರ ಮೀಸಲು(ಸಿಎಆರ್) ಪಡೆಯ ಸಿಬ್ಬಂದಿ ಅಧಿಕ ಕಾರ್ಯದೊತ್ತಡ ದಲ್ಲಿರುತ್ತಾರೆ. ಹೀಗಾಗಿ ತಮ್ಮ ಆರೋಗ್ಯದ ಕಡೆ ಗಮನ ಹರಿಸುವುದಿಲ್ಲ. ಕೊರೊನಾ ಎರಡೂ ಅಲೆ ಸಂದರ್ಭದಲ್ಲಿ ನಗರದಲ್ಲಿರುವ ಎರಡೂವರೆ ಸಾವಿರಕ್ಕೂ ಅಧಿಕ ನಗರ ಸಶಸ್ತ್ರ ಮೀಸಲು(ಸಿಎಆರ್) ಪಡೆಯ ಹತ್ತಾರು ಅಧಿಕಾರಿ-ಸಿಬ್ಬಂದಿ ಪ್ರಾಣಾ ತೆತ್ತಿ ದ್ದಾರೆ.

ಹೀಗಾಗಿ ನಗರ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಕಳೆದ ಹತ್ತು ತಿಂಗಳಿಂದ ಸಿಎಆರ್ನ ಪ್ರತಿಯೊಬ್ಬ ಅಧಿಕಾರಿ-ಸಿಬ್ಬಂದಿಗೆ ಕೌನ್ಸೆಲಿಂಗ್ ಮಾಡಲಾಗುತ್ತದೆ. ಮುಖಾಮುಖೀ- ಫೋನ್ ಮೂಲಕ ಮಹಿಳಾ ಕೌನ್ಸೆಲರ್ ಸೇರಿ 3-4 ಮಂದಿ ಆಪ್ತ ಸಮಾಲೋಚಕರು ಅಧಿಕಾರಿ-ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರಿಗೂ ಕೌನ್ಸೆಲಿಂಗ್ ಮಾಡಲಾಗುತ್ತಿದೆ. ಈ ಮೂಲಕ ಕೊರೊನಾ ಜತೆಗೆ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಸಲಹೆ ಸೂಚನೆಗಳನ್ನು ನೀಡಲಾಗುತ್ತದೆ.

ಅಲ್ಲದೆ, ಸೋಂಕಿಗೊಳಗಾದ ಅಧಿಕಾರಿ-ಸಿಬ್ಬಂದಿಗೆ ರೋಗನಿರೋಧಕ ಶಕ್ತಿ ಹೆಚ್ಚಿಸಲು ಡ್ರೈಫೂಲÅಟ್ಸ್ ಹಾಗೂ ಕೊರೊನಾ ಕಿಟ್ಗಳನ್ನು ನಗರ ಪೊಲೀಸ್ ಆಯುಕ್ತರ ಕಡೆಯಿಂದ ನೀಡಿ ಧೈರ್ಯ ತುಂಬಲಾಗುತ್ತಿದೆ.

ರೈಲ್ವೆ ಅಧಿಕಾರಿಸಿಬ್ಬಂದಿ ಆನ್ಲೈನ್ ಯೋಗಾಭ್ಯಾಸ: ನಾಗರೀಕ ಪೊಲೀಸರಂತೆ ರೈಲ್ವೆ ಪೊಲೀಸರು ಹೆಚ್ಚು ಕಾರ್ಯದೊತ್ತಡದಲ್ಲಿರುತ್ತಾರೆ. ರೈಲು ನಿಲ್ದಾಣ, ರೈಲುಗಳ ಭದ್ರತೆಗಾಗಿ ರೈಲುಗಳಲ್ಲಿ ದಿನಗಟ್ಟಲೇ ಪ್ರಯಾಣಿಸುವ ಅಧಿಕಾರಿ-ಸಿಬ್ಬಂದಿಯ ಆಹಾರ ಪದ್ದತಿಯಿಂದ ಸಾಕಷ್ಟು ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಈ ಕುರಿತು ಬೆಂಗಳೂರು ಸೇರಿ ರಾಜ್ಯದ ರೈಲ್ವೆ ಪೊಲೀಸ್ ಇಲಾಖೆಯ ಪ್ರತಿಯೊಬ್ಬ ಅಧಿಕಾರಿ-ಸಿಬ್ಬಂದಿ ಯೋಗಭ್ಯಾಸ ಮಾಡಲು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಡಿಜಿಪಿ ಭಾಸ್ಕರ್ ರಾವ್, ಎಸ್ಪಿ ಸಿರಿಗೌರಿ ಮಾರ್ಗದರ್ಶನದಲ್ಲಿ ಇಶಾ ಫೌಂಡೇಶನ್ ಸಂಸ್ಥೆ ರೈಲ್ವೆ ಅಧಿಕಾರಿ-ಸಿಬ್ಬಂದಿಗೆ ವಾರಕ್ಕೊಮ್ಮೆ ಆನ್ಲೈನ್ ಮೂಲಕ ಯೋಗಭ್ಯಾಸಕ್ಕೆ ಸೂಚಿಸಲಾಗಿದೆ. ಪ್ರತಿಭಾನುವಾರ ಬೆಳಗ್ಗೆ ಮತ್ತು ಸಂಜೆ ಒಂದು ಗಂಟೆಗಳ ಕಾಲ ಸಿಬ್ಬಂದಿ ಇರುವಲ್ಲಿಯೇ ಯೋಗಭ್ಯಾಸದಲ್ಲಿ ತೊಡಬೇಕೆಂದು ಸೂಚಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಎಸ್ಪಿ ಸಿರಿಗೌರಿ ಅವರು, ರೈಲ್ವೆ ಸಿಬ್ಬಂದಿ ಕಾರ್ಯನಿಮಿತ್ತ ಹೊರಗಡೆ ಹೋದರೆ ಎರಡೂ¾ರು ದಿನಗಳ ಕಾಲ ವಾಪಸ್ ಬರಲಾಗದು. ಹೀಗಾಗಿ ಇಶಾ ಫೌಂಡೇಶನ್ನಿಂದ ಆನ್ಲೈನ್ ತರಗತಿಗೆ ಸೂಚಿಸಿದ್ದು, ಫೌಂಡೇಶನ್ ಅವರು ಆನ್ಲೈನ್ ಲಿಂಕ್ ಕಳುಹಿಸುತ್ತಾರೆ. ಅದರಂತೆ ಎಲ್ಲರೂ ಯೋಗದಲ್ಲಿ ತೊಡಗುತ್ತಾರೆ. 8-10 ತಿಂಗಳಿಂದ ಯೋಗಭ್ಯಾಸ ಮಾಡುತ್ತಿದ್ದು, ಕೆಲವರು ಸ್ವಯಂ ಪ್ರೇರಿತವಾಗಿ ಮನೆ ಅಥವಾ ತಾವು ಉಳಿದುಕೊಂಡಿರುವ ಸ್ಥಳದಲ್ಲೇ ಆಭ್ಯಾಸದಲ್ಲಿ ನಿರತರಾಗಿದ್ದಾರೆ.

ಮೋಹನ್ ಭದ್ರಾವತಿ

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.