ಹಿಪ್ಪರಗಿ ಗ್ರಾಮದಲ್ಲಿ 20 ಕ್ಕೂ ಹೆಚ್ಚು ಮನೆಗಳ ಜಲಾವೃತ
Team Udayavani, Jul 26, 2021, 6:42 PM IST
ಬನಹಟ್ಟಿ : ಹಿಪ್ಪರಗಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟ ಪರಿಣಾಮವಾಗಿ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಗ್ರಾಮಕ್ಕೆ ಕೃಷ್ಣಾ ನದಿಯ ನೀರು ನುಗ್ಗಿದ್ದು, ಗ್ರಾಮದ ಇಂಚಗೇರಿ ಸಂಪ್ರದಾಯದ ಸಂಗಮೇಶ್ವರದ ಮಠವನ್ನು ಸುತ್ತುವರೆದಿದ್ದು, ಕರ್ತು ಗದ್ದುಗೆಯಲ್ಲಿ ನೀರು ತುಂಬಿಕೊಂಡಿದೆ.
ಕೆಲದಿನಗಳ ಹಿಂದೆ ಗ್ರಾಮದ ತಗ್ಗು ಪ್ರದೇಶಗಳಿಗೆ ಮಾತ್ರ ನೀರು ನುಗ್ಗಿತ್ತು ಈಗ ಸಂಗಮೇಶ್ವರ ಮಠದ ಸುತ್ತಮುತ್ತ ನೀರು ಸುತ್ತುವರೆದಿದ್ದು ಇನ್ನೂ ಹೆಚ್ಚಾದಲ್ಲಿ ಆವರಣವು ಕೂಡಾ ಜಲಾವೃಗೊಳ್ಳಲಿದೆ. ಇದು ಗ್ರಾಮಸ್ಥರಲ್ಲಿ ಮತ್ತೋಮ್ಮೆ ಮಹಾ ಪ್ರವಾಹದ ಆತಂಕವನ್ನುಂಟುಮಾಡಿದೆ.
ಅದೇ ರೀತಿಯಾಗಿ ಸಮೀಪದ ಶ್ರೀ ಜಗದ್ಗುರು ಪಂಚಾಚಾರ್ಯ ಪ್ರೌಢ ಶಾಲೆ ಸಂಪೂರ್ಣವಾಗಿ ನೀರಿನಲ್ಲಿ ನಿಂತಿದ್ದರೆ. ತೆಗ್ಗು ಪ್ರದೇಶದ ಬಹುತೇಕ ಮನೆಗಳಿಗೆ ನೀರು ನುಗ್ಗಿದೆ. ದಿನದಿಂದ ದಿನಕ್ಕೆ ನೀರು ಹೆಚ್ಚಾಗುತ್ತಿರುವುದರಿಂದ ಜಲಾಶಯದ ಪಕ್ಕದಲ್ಲಿರುವ ಗ್ರಾಮದ ಜನತೆ ಭಯಭೀತರಾಗಿದ್ದಾರೆ. ಜಲಾವೃತಗೊಂಡಿರುವ ಮನೆಗಳಲ್ಲಿ ವಾಸವಿರುವ ಜನರನ್ನು ತಾಲ್ಲೂಕು ಆಡಳಿತ ಬೇರೆ ಕಡೆಗೆ ಸ್ಥಳಾಂತರಿಸುತ್ತಿದೆ.
ಸದ್ಯ ಶೇ. 30 ರಷ್ಟು ಹಿಪ್ಪರಗಿ ಜಲಾವೃತವಾಗಿದ್ದು, ನಾಳೆ ನೀರಿನ ಪ್ರಮಾಣ ಇನ್ನೂ ಹೆಚ್ಚಾದರೆ ಬಹುತೇಕ ಎರಡು ವರ್ಷಗಳ ಹಿಂದೆ ಬಂದಂತಹ ಮಟ್ಟಕ್ಕೆ ತಲುಪಬಹುದು ಎನ್ನುತ್ತಾರೆ ಸ್ಥಳೀಯ ಗ್ರಾಮಸ್ಥರು.
ಸ್ಥಳಕ್ಕೆ ತಹಶೀಲ್ದಾರ್ ಸಂಜಯ ಇಂಗಳೆ, ಗ್ರೇಡ್-2 ತಹಶೀಲ್ದಾರ್ ಎಸ್.ಬಿ.ಕಾಂಬಳೆ, ಕಂದಾಯ ನಿರೀಕ್ಷಕ ಬಸವರಾಜ ತಾಳಿಕೋಟಿ, ನೋಡಲ್ ಅಧಿಕಾರಿ ಎನ್.ಎಂ.ದಿವಟೆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲನೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pen Drive Case ಪ್ರಜ್ವಲ್ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ
ಬಿಜೆಪಿ ಶಾಸಕ ಯತ್ನಾಳ ಶುಗರ್ ಫ್ಯಾಕ್ಟ್ರಿ ಹೆಂಗ್ ಕಟ್ಟಿದ್ರು: ಶಿವಾನಂದ ಪಾಟೀಲ
Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್ ಮನೆಗೆ ಕನ್ನ
Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ
Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ