ಅಭಿನಯ ಶಾರದೆಯ ಎರಡು ಕಣ್ಣು ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಜಯಂತಿ
Team Udayavani, Jul 26, 2021, 7:24 PM IST
ಬೆಂಗಳೂರು: ಇಂದು ವಿಧಿವಶರಾದ ಹಿರಿಯ ನಟಿ ಜಯಂತಿ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಅಭಿನಯ ಶಾರದೆ ಅವರ ಎರಡು ಕಣ್ಣುಗಳನ್ನು ನಾರಾಯಣ ನೇತ್ರಾಲಯದ ಡಾ ರಾಜ್ ಕುಮಾರ್ ಐ ಬ್ಯಾಂಕ್ ಗೆ ನೀಡಲಾಗಿದೆ. ಅವರ ಕಣ್ಣುಗಳನ್ನು ಬಾಲಕನೊಬ್ಬನಿಗೆ ನೀಡಲಾಗಿದೆ ಎನ್ನಲಾಗಿದೆ. ಈ ಮೂಲಕ ಸಾವಿನಲ್ಲೂ ಕೂಡ ಅವರು ಮಾನವೀಯತೆಯನ್ನು ಮೆರೆದು ಇತರರಿಗೆ ಮಾದರಿಯಾಗಿದ್ದಾರೆ.
ಪಂಚಭೂತದಲ್ಲಿ ಲೀನ :
ಇನ್ನೂ ಬೆಂಗಳೂರಿನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಜಯಂತಿ ಅವರ ಅಂತ್ಯಕ್ರಿಯೆ ನೆರವೇರಿದೆ.
ಪೋಲಿಸ್ ಗೌರವದೊಂದಿಗೆ ಜಯಂತಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ಅವರ ಪುತ್ರ ಕೃಷ್ಣಕುಮಾರ್ ಅಂತಿಮ ವಿಧಿವಿಧಾನಗಳನ್ನು ಪೂರೈಸಿದರು.
ಇಂದು ಬೆಳಗಿನ ಜಾವ ಅಗಲಿದ ನಟಿಯ ಅಂತಿಮ ದರ್ಶನದ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಆಪ್ತರು, ಸಿನಿಮಾ ರಂಗದವರು ಭಾಗಿಯಾಗಿದ್ದಾರೆ. ಕಲಾವಿದರು, ಅಭಿಮಾನಿಗಳು ಜಯಂತಿಯವರ ಅಂತಿಮ ದರ್ಶನ ಪಡೆದ ನಂತರ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಕನ್ನಡ ಚಿತ್ರರಂಗದ ಗಣ್ಯರು, ರಾಜಕೀಯ ರಂಗದ ಗಣ್ಯರು, ಜಯಂತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಜಯಂತಿ ಮೂಲತಃ ಬಳ್ಳಾರಿಯವರು. 1945ರಲ್ಲಿ ಜನಿಸಿದ ಅವರ ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ ತಾಯಿ ಸಂತಾನಲಕ್ಷ್ಮೀ ಜಯಂತಿಗೆ ಇಬ್ಬರು ಕಿರಿಯ ಸಹೋದರರಿದ್ದಾರೆ ಒಬ್ಬ ಪುತ್ರರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rachana inder: ಮರ್ಡರ್ ಮಿಸ್ಟರಿ 4 ಎನ್ 6
Sandalwood: ರಿಲಯನ್ಸ್ ತೆಕ್ಕೆಗೆ ʼಜಡ್ಜ್ ಮೆಂಟ್ʼ
Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ
ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ