ವ್ಯಾಕ್ಸಿನ್ ಪಡೆಯಲು ಬಂದವನ ಮೇಲೆ ‘ಖಾಕಿ’ ದರ್ಪ: ಮನನೊಂದು ಯುವಕ ಆತ್ಮಹತ್ಯೆ
Team Udayavani, Jul 27, 2021, 6:36 PM IST
ಉತ್ತರ ಪ್ರದೇಶ : ಕಾರಣವಿಲ್ಲದೆ ಪೊಲೀಸರಿಂದ ಹಲ್ಲೆಗೆ ಒಳಗಾದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಸೋಮವಾರ (ಜು.26) ರಾತ್ರಿ 20 ವರ್ಷ ವಯಸ್ಸಿನ ಯುವಕ ತಮ್ಮ ಮನೆಯ ಪಕ್ಕದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಈತನ ಸಾವಿಗೆ ಪೊಲೀಸರ ಹಲ್ಲೆ ಕಾರಣ ಎಂದು ಮೃತನ ಕುಟುಂಬದವರು ಆರೋಪಿಸಿ ದೂರು ನೀಡಿದ್ದಾರೆ.
ಘಟನೆ ಹಿನ್ನೆಲೆ :
ಸೋಮವಾರ ಕೋವಿಡ್ ಲಸಿಕೆ ಪಡೆಯಲೆಂದು ಲಸಿಕಾ ಕೇಂದ್ರಕ್ಕೆ ತೆರಳಿದ್ದ ವೇಳೆ ಪೊಲೀಸ್ ಹಾಗೂ ಯುವಕನ ನಡುವೆ ಜಗಳ ನಡೆದಿತ್ತು. ವೈದ್ಯಕೀಯ ಸಿಬ್ಬಂದಿ ತನ್ನ ಹೆಸರು ಕೂಗಿದಾಗಲೂ ಒಳಗೆ ಬಿಡದ ಪೊಲೀಸರನ್ನು ಪ್ರಶ್ನಿಸಿದ್ದಕ್ಕಾಗಿ ಇಬ್ಬರು ಪೇದೆಗಳು ಈತನ ಮೇಲೆ ಹಲ್ಲೆ ನಡೆಸಿದರು. ಬಳಿಕ ಆತನನ್ನು ರೂಮಿನೊಳಗೆ ಕರೆದೊಯ್ದು ಲಾಠಿಗಳಿಂದ ಮನಬಂದಂಥೆ ಥಳಿಸಲಾಗಿದೆ. ನಂತರ ದರ ದರನೇ ಎಳೆದು ತಂದು ಹೊರಗೆ ನೂಕಿದ್ದಾರೆ. ಈ ಘಟನೆಯ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
ಪೊಲೀಸರಿಂದ ಲಾಠಿ ಏಟು ತಿಂದು ಮನೆಗೆ ಮರಳಿದ ಯುವಕ ಖಿನ್ನತೆಗೊಳಗಾಗಿದ್ದ. ತಡರಾತ್ರಿ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಇವನ ಸಾವಿಗೆ ಪೊಲೀಸರೆ ಕಾರಣ ಎಂದು ಮೃತನ ಕುಟುಂಬದವರು ಆಕ್ರೋಶ ಹೊರಹಾಕಿದ್ದಾರೆ.
5 ಜನ ಪೊಲೀಸರ ವಿರುದ್ಧ ಎಫ್ ಐ ಆರ್ :
ಇನ್ನು ಯುವಕನ ಕುಟುಂಬದವರ ದೂರಿನ ಹಿನ್ನೆಲೆ ಐವರು ಪೊಲೀಸ್ ಸಿಬ್ಬಂದಿ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಎಫ್ ಐ ಆರ್ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್
UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!