ಬಿಎಸ್‌ವೈ ಸಂವಹನಕಾರನಿಗೆ ಒಲಿದ ಸಿಎಂ ಪಟ್ಟ!

ಯಡಿಯೂರಪ್ಪ ಅವರನ್ನು ಮರಳಿ ಬಿಜೆಪಿಗೆ ಕರೆತರುವಲ್ಲಿಯೂ ಬೊಮ್ಮಾಯಿಯವರೇ ಪ್ರಮುಖ ಪಾತ್ರ ವಹಿಸಿದ್ದು ವಿಶೇಷ.

Team Udayavani, Jul 28, 2021, 9:45 AM IST

ಬಿಎಸ್‌ವೈ ಸಂವಹನಕಾರನಿಗೆ ಒಲಿದ ಸಿಎಂ ಪಟ್ಟ!

ದಾವಣಗೆರೆ: ಬಿ.ಎಸ್‌. ಯಡಿಯೂರಪ್ಪ ಅವರಿಗೆ ಅಘೋಷಿತ ಆಪ್ತ ಸಂವಹನಕಾರರಾಗಿ ಕೆಲಸ ಮಾಡುತ್ತ ಬಂದಿರುವ ಬಸವರಾಜ ಬೊಮ್ಮಾಯಿ ಅವರಿಗೆ ಯಡಿಯೂರಪ್ಪ ಅವರ ಉತ್ತರಾಧಿಕಾರಿ ಪಟ್ಟ ಒಲಿದು ಬಂದಂತಾಗಿದೆ.

ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ಪರಮಾಪ್ತರಲ್ಲಿ ಒಬ್ಬರು. ತಾವು ಮುಖ್ಯ ಮಂತ್ರಿ ಆದಾಗಲೆಲ್ಲ ಯಡಿಯೂರಪ್ಪ ಅವರು ಬೊಮ್ಮಾಯಿ ಅವರನ್ನು ತಮ್ಮ ಹತ್ತಿರದಲ್ಲಿಯೇ ಇಟ್ಟುಕೊಂಡಿರುತ್ತಿದ್ದರು. ಪಕ್ಷ ಹಾಗೂ ರಾಜಕೀಯ ವಿಚಾರವಾಗಿ ಕಂಡು ಬರುವ ಬೆಳವಣಿಗೆ, ಬದಲಾ ವಣೆ, ಸರಕಾರ, ಪಕ್ಷದ ವಿಷಯವಾಗಿ ವಿಚಾರ ವಿಮರ್ಶೆ ಹಾಗೂ ಪ್ರಮುಖ ನಿರ್ಧಾರಗಳನ್ನು ಯಡಿಯೂರಪ್ಪ ಪರವಾಗಿ ಕೇಂದ್ರದ ನಾಯಕರಿಗೆ ಇಂಗ್ಲಿಷ್‌ ಇಲ್ಲವೇ ಹಿಂದಿ ಭಾಷೆ ಯಲ್ಲಿ ಸ್ಪಷ್ಟವಾಗಿ ತಿಳಿಸುವಲ್ಲಿ ಬೊಮ್ಮಾಯಿ ಪ್ರಮುಖ ಪಾತ್ರ ವಹಿಸುತ್ತಿದ್ದರು. ಹೀಗಾಗಿ ಯಡಿಯೂರಪ್ಪ ಅವರು ದಿಲ್ಲಿಗೆ ಹೋಗುವಾಗಲೆಲ್ಲ ಬಸವರಾಜ ಬೊಮ್ಮಾಯಿ ಅವರನ್ನು ಕರೆದುಕೊಂಡೇ ಹೋಗುತ್ತಿದ್ದರು.

ಯಡಿಯೂರಪ್ಪ ಅವರು ಬೊಮ್ಮಾಯಿ ಅವರನ್ನು ಕೇವಲ ಆಪ್ತ ಸಂವಹನಕಾರರನ್ನಾಗಿ ಮಾಡಿಕೊಳ್ಳದೇ ಪ್ರಮುಖ ರಾಜಕೀಯ ವಿದ್ಯಮಾನಗಳ ಬಗ್ಗೆ ಸಲಹೆ ಗಳನ್ನೂ ಪಡೆದು ಕೊಳ್ಳುತ್ತಿದ್ದರು. ಪಕ್ಷದ ಆಂತರಿಕ, ಬಹಿರಂಗವಷ್ಟೇ ಅಲ್ಲದೆ ಯಡಿಯೂರಪ್ಪ ಅವರ ಕೆಲವು ವೈಯಕ್ತಿಕ ವಿಚಾರದಲ್ಲಿಯೂ ಬೊಮ್ಮಾಯಿ ವಾಸ್ತವಿಕತೆಯ ಚಿತ್ರಣ ಅನಾವರಣಗೊಳಿಸುವ ಕೈಗನ್ನಡಿಯಂತೆ ಕೆಲಸ ಮಾಡಿದ್ದಾರೆ. ಈ ಕಾರಣ ದಿಂದಾಗಿ ಬೊಮ್ಮಾಯಿ ಅವರಿಗೆ ಕೇಂದ್ರದ ಬಹುತೇಕ ಎಲ್ಲ ನಾಯಕರೊಂದಿಗೆ ಹಲವು ವರ್ಷಗಳಿಂದ ಉತ್ತಮ ಸಂವಹನ, ಸ್ನೇಹ ಬೆಳೆಸಲು ಸಾಧ್ಯವಾಗಿತ್ತು. ಕೇಂದ್ರದ ಪ್ರಮುಖರ ನಾಯಕರೊಂದಿಗೆ ಯಡಿಯೂರಪ್ಪ ಅವರ ಪರವಾಗಿ ಮಾಡಿದ ಸಂವಹನ‌ ಕಾರ್ಯ ಈಗ ರಾಜ್ಯದ ಮುಖ್ಯಮಂತ್ರಿ ಯನ್ನಾಗಿಸುವಲ್ಲಿಯೂ ಪರೋಕ್ಷವಾಗಿ ಸಹಕಾರಿಯಾಯಿತು ಎಂಬುದನ್ನು ಅವರ ಆಪ್ತರು ವಿಶ್ಲೇಷಿಸುತ್ತಾರೆ. ರಾಜಕೀಯ  ತಂತ್ರಜ್ಞ:  ಬಸವರಾಜ ಬೊಮ್ಮಾಯಿ ರಾಜಕಾರಣದ ಎಲ್ಲ ಪಟ್ಟುಗಳನ್ನು ಬಲ್ಲವರೂ ಹೌದು. ಬಿಜೆಪಿ ಆಡಳಿತಾವಧಿಯಲ್ಲಿ ಎದುರಾದ ಹತ್ತು ಹಲವು ಸಂಕಷ್ಟಗಳ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಸರಕಾರದ ಕಾರ್ಯವನ್ನು ಸಮರ್ಥಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹಾವೇರಿಯಲ್ಲಿ ಗೋಲಿಬಾರ್‌ ನಡೆದು ಇಬ್ಬರು ರೈತರು ಮೃತಪಟ್ಟ ಘಟನೆಯನ್ನು ವಿಪಕ್ಷದವರು ಬಳಸಿಕೊಂಡು ಸರಕಾರಕ್ಕೆ ಮುಖಭಂಗ ಮಾಡಲು ಮುಂದಾದಾಗ ಅದನ್ನು ನಾಜೂಕಾಗಿ ನಿಭಾಯಿಸಿದ್ದು ಒಂದು ಉದಾಹರಣೆಯಷ್ಟೆ.

ಬಿಎಸ್‌ವೈ ಮರಳಿ ಪಕ್ಷಕ್ಕೆ ಕರೆ ತಂದ ಚಾಣಾಕ್ಷ  :

ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ಅವರ ಆಪ್ತರಾಗಿದ್ದರೂ ಈ ಆಪ್ತತೆಯನ್ನು ತಮ್ಮ ರಾಜಕೀಯ ಭವಿಷ್ಯಕ್ಕೆ ಅಡ್ಡಿಯಾಗದಂತೆ ನೋಡಿಕೊಂಡ ಚಾಣಾಕ್ಷ. ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು ಕೆಜೆಪಿ ಪಕ್ಷ ಕಟ್ಟಿದಾಗ ಬೊಮ್ಮಾಯಿ ಬಿಜೆಪಿಯಲ್ಲಿಯೇ ಉಳಿದು ತಮ್ಮ ರಾಜಕೀಯ ಭವಿಷ್ಯಕ್ಕೆ ಬಿಜೆಪಿಯೇ ಬೆಳಕು ಎಂಬುದನ್ನು ನಿರ್ಧರಿಸಿದ್ದರು. ಬಳಿಕ ಯಡಿಯೂರಪ್ಪ ಅವರನ್ನು ಮರಳಿ ಬಿಜೆಪಿಗೆ ಕರೆತರುವಲ್ಲಿಯೂ ಬೊಮ್ಮಾಯಿಯವರೇ ಪ್ರಮುಖ ಪಾತ್ರ ವಹಿಸಿದ್ದು ವಿಶೇಷ.

 

-ಎಚ್‌.ಕೆ. ನಟರಾಜ

 

ಟಾಪ್ ನ್ಯೂಸ್

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.