ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಬೊಮ್ಮಾಯಿ ಅವರು ಸರಿಪಡಿಸಲಿ: ಡಿ.ಕೆ. ಶಿವಕುಮಾರ್
Team Udayavani, Jul 28, 2021, 11:22 AM IST
ಬೆಂಗಳೂರು : ‘ಕಳೆದ ಎರಡು ವರ್ಷದಿಂದ ರಾಜ್ಯಕ್ಕಾಗಿರುವ ಅನ್ಯಾಯವನ್ನು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರಿಪಡಿಸಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಬುಧವಾರ ಮಾಧ್ಯಮ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು:
‘ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಕಳೆದ ಎರಡು ವರ್ಷಗಳಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಅವರು ಸರಿಪಡಿಸುತ್ತಾರೆಂಬ ನಿರೀಕ್ಷೆ ಇದೆ.
ಕೇಂದ್ರ ಸರ್ಕಾರ ನೀರಾವರಿ, ಹಣಕಾಸು ಸೇರಿದಂತೆ ಯಾವುದೇ ವಿಚಾರದಲ್ಲೂ ರಾಜ್ಯಕ್ಕೆ ಸಹಕಾರ ಕೊಟ್ಟಿಲ್ಲ. ಯಡಿಯೂರಪ್ಪನವರು ಕಣ್ಣಲ್ಲಿ ನೀರು ಹಾಕಿ, ನೋವು ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳು ಬೊಮ್ಮಾಯಿಯವರ ಹೆಸರು ಸೂಚಿಸಿದ್ದಾರೆ ಎಂದು ಮಾಧ್ಯಮಗಳಿಂದ ಗೊತ್ತಾಗಿದೆ. ನಮಗೆ ಒಳ್ಳೆಯ ಆಡಳಿತ ಬೇಕು ಅಷ್ಟೇ.
ಕೇಂದ್ರ ನಾಯಕರು ನನಗೆ ಸಂಪುಟ ರಚನೆಗೆ ಎರಡು ತಿಂಗಳು ಅವಕಾಶ ನೀಡಲಿಲ್ಲ ಎಂದು ಯಡಿಯೂರಪ್ಪನವರು ಹೇಳಿಕೊಂಡಿದ್ದಾರೆ. ಅನೇಕ ರೀತಿಯಲ್ಲಿ ತಮಗಾದ ನೋವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅನೇಕರು ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಚಂಡ ಹೋರಾಟ ಮಾಡಿದ್ದಾರೆ. ಕೆಲವು ಮಂತ್ರಿಗಳು ಸಿಎಂ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದರು, ಮತ್ತೆ ಕೆಲವರು ಪರೀಕ್ಷೆ ಬರೆದಿರುವುದಾಗಿ ತಿಳಿಸಿದರು. ಶಾಸಕರಿಂದಲೂ ಅವರಿಗೆ ವಿರೋಧ ವ್ಯಕ್ತವಾಗಿದೆ.
ಸರ್ಕಾರದಲ್ಲಿ ಸಮನ್ವಯತೆ ಇರಲಿಲ್ಲ. ಹೀಗಾಗಿ ಎರಡು ವರ್ಷಗಳಲ್ಲಿ ರಾಜ್ಯ 20 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ಏನೇನಾಗಿದೆ ಎಂದು ಬೇರೆ ಸಮಯದಲ್ಲಿ ಮಾತನಾಡೋಣ. ಬಿಜೆಪಿಯಲ್ಲಿ ಯಾರ ಕೈ ಮೇಲಾಯ್ತು ಎಂಬುದು ಆ ಪಕ್ಷದ ಆಂತರಿಕ ವಿಚಾರ. ಅದು ನಮಗೆ ಬೇಡ. ಬೊಮ್ಮಾಯಿ ಅವರು ಉತ್ತಮ ಆಡಳಿತ ನೀಡಲಿ, ರಾಜ್ಯಕ್ಕೆ ನ್ಯಾಯ ಒದಗಿಸಲಿ, ಅವರಿಗೆ ಶುಭವಾಗಲಿ.’
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್