ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸ ನಿಮ್ಮ ಆದ್ಯತೆಯಾಗಲಿ : ಬೊಮ್ಮಾಯಿಗೆ ಸಿದ್ದರಾಮಯ್ಯ ಸಲಹೆ
Team Udayavani, Jul 28, 2021, 3:21 PM IST
ಬೆಂಗಳೂರು : ಪ್ರಮಾಣವಚನ ಸ್ವೀಕಾರದ ಮೂಲಕ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವ ಅವಕಾಶವನ್ನು ಸಂವಿಧಾನಬದ್ದವಾಗಿ ಪಡೆದಿರುವ ಬಸವರಾಜ ಬೊಮ್ಮಾಯಿಯವರೇ ನಿಮಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು. ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ನಮ್ಮ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ನಿಮಗೆ ಸಿಗಲಿ ಎಂದು ಹಾರೈಸುತ್ತೇನೆ.
ಕಳೆದ ಎರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದಲ್ಲಿರುವ ನಿಮ್ಮದೇ ಪಕ್ಷದ ಸರ್ಕಾರ. ಅಧಿಕಾರದ ಆಸೆಯೋ, ತಿಳುವಳಿಕೆಯ ಕೊರತೆಯೋ, ಇಲ್ಲವೇ ಅವ್ಯಕ್ತ ಭೀತಿಯೋ, ಹಿಂದಿನ ಮುಖ್ಯಮಂತ್ರಿಗಳು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಸೊಲ್ಲೆತ್ತಲಿಲ್ಲ. ಆ ಧೈರ್ಯವನ್ನು ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ.
ಬರಪರಿಹಾರ, ಜಿಎಸ್ ಟಿ ಪಾಲು, ತೆರಿಗೆ ಹಂಚಿಕೆ, ಕೊರೊನಾ ನಿಯಂತ್ರಣಕ್ಕೆ ನೆರವು- ಈ ಎಲ್ಲ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ತೋರಿರುವ ಮಲತಾಯಿಧೋರಣೆ ನಿಮಗೆ ತಿಳಿದಿದೆ. ಇದನ್ನು ಪ್ರಧಾನಿ ಮೋದಿ ಮತ್ತು ಸಂಬಂಧಿತ ಸಚಿವರ ಗಮನಕ್ಕೆ ತಂದು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ನೀವು ಆದ್ಯತೆಯಿಂದ ಮಾಡಬೇಕೆಂಬುದು ನನ್ನ ಸಲಹೆ.
ರಾಜ್ಯಕ್ಕೆ ಅನ್ಯಾಯವಾದ ಸಂದರ್ಭದಲ್ಲಿ ಸರ್ವಪಕ್ಷಗಳ ಸಭೆ ಮತ್ತು ನಿಯೋಗದ ಮೂಲಕ ನ್ಯಾಯ ಪಡೆಯುವ ಪ್ರಯತ್ನದ ಪರಂಪರೆಯೊಂದು ನಮ್ಮಲ್ಲಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬುನಾದಿಯಾದ ಈ ರೀತಿಯ ಮುಕ್ತಚರ್ಚೆ-ಸಂವಾದಗಳೇ ನಿಂತುಬಿಟ್ಟಿವೆ. ನೀವು ಇದಕ್ಕೆ ಮರುಚಾಲನೆ ನೀಡುವಿರೆಂಬ ನಿರೀಕ್ಷೆ ನನ್ನದು.
ಪ್ರಧಾನಮಂತ್ರಿ ಇಲ್ಲವೇ ಮುಖ್ಯಮಂತ್ರಿ ಸ್ಥಾನ ಪಕ್ಷಕ್ಕೆ ಸೀಮಿತವಾದುದಲ್ಲ, ಅದು ಇಡೀ ದೇಶ ಮತ್ತು ರಾಜ್ಯಕ್ಕೆ ಸಂಬಂಧಿಸಿದ್ದು. ವಿರೋಧ ಪಕ್ಷವಾಗಿ ನಮ್ಮ ನಡುವಿನ ಸೈದ್ಧಾಂತಿಕ ಸಂಘರ್ಷ ಜಾರಿಯಲ್ಲಿದ್ದರೂ ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ನಾವೆಲ್ಲ ಒಂದು ತಂಡವಾಗಿ ಕೆಲಸಮಾಡಬೇಕೆಂದು ನಿಮಗಿಂತ ವಯಸ್ಸು ಮತ್ತು ಅನುಭವದಲ್ಲಿ ಹಿರಿಯನಾದ ನನ್ನ ಸಲಹೆಯಾಗಿದೆ.
ಸಾರ್ವಜನಿಕ ವಿಷಯಕ್ಕೆ ಸಂಬಂಧಿಸಿದ ಹಾಗೆ ಹಿಂದಿನ ಮುಖ್ಯಮಂತ್ರಿಗಳಿಗೆ ಹತ್ತಾರು ಪತ್ರಗಳನ್ನು ಬರೆದರೂ ಅದಕ್ಕೆ ಪ್ರತಿಕ್ರಿಯಿಸುವ ಕನಿಷ್ಠ ಸೌಜನ್ಯವನ್ನೂ ಅವರು ತೋರಿಲ್ಲ ಎನ್ನುವುದನ್ನು ವಿಷಾದದಿಂದ ಹೇಳಬೇಕಾಗಿದೆ. ಪಾರದರ್ಶಕತೆ ಪ್ರಜಾಪ್ರಭುತ್ವದ ಆತ್ಮವಾಗಿದೆ. ನಿಮ್ಮ ಕಾಲದಲ್ಲಿಯಾದರೂ ಮಾಹಿತಿಯ ವಿನಿಮಯ ಸುಗಮವಾಗಿ ನಡೆಯುವಂತೆ ಮಾಡುವಿರೆಂದು ನಂಬಿದ್ದೇನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ