ಯಡಿಯೂರಪ್ಪನವರಷ್ಟೇ ಸಮರ್ಥವಾಗಿ ಬೊಮ್ಮಾಯಿ ಕೂಡ ಕೆಲಸ ಮಾಡ್ತಾರೆ : ಬಸವ ಮರುಳಸಿದ್ಧ ಸ್ವಾಮೀಜಿ
Team Udayavani, Jul 28, 2021, 6:11 PM IST
ಶಿವಮೊಗ್ಗ : ಮಠಾಧೀಶರು ಲಿಂಗಾಯಿತರೇ ಸಿಎಂ ಅಗ್ಬೇಕು ಎಂದು ಎಲ್ಲಿಯೂ ಆಗ್ರಹ ಮಾಡಿಲ್ಲ. ಎಲ್ಲೋ ಒಬ್ಬರು, ಇಬ್ಬರು ಮಠಾಧೀಶರು ಮಾತ್ರ ಹಾಗೇ ಹೇಳಿದ್ದಾರೆ. ಅದ್ರೇ, ಎಲ್ಲರೂ ಯಡಿಯೂರಪ್ಪ ನವರೇ ಮುಂದುವರಿಯಲಿ ಎಂದು ಅಪೇಕ್ಷೆ ಪಟ್ಟಿದ್ದರು. ಆದ್ರೇ, ಅವರು ಯಾವುದೋ ಕಾರಣಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಅವರ ಸ್ಥಾನಕ್ಕೆ ಬೊಮ್ಮಾಯಿ ಅವರು ಸಿಎಂ ಆಗಿ ಅಧಿಕಾರ ಪಡೆದಿದ್ದಾರೆ ಎಂದು ಎಂದು ಶಿವಮೊಗ್ಗದಲ್ಲಿ ಬಸವಕೇಂದ್ರದ ಡಾ.ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿಕೆ ನೀಡಿದರು.
ಯಡಿಯೂರಪ್ಪನವರಷ್ಟೇ ಸಮರ್ಥವಾಗಿ ಬೊಮ್ಮಾಯಿ ಕೂಡ ಕೆಲಸ ಮಾಡ್ತಾರೆ. ಆಡಳಿತದ ಸುದೀರ್ಘ ಅನುಭವಿದೆ. ನೀರಾವರಿ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ನಾಡಿನ ಆಶೋತ್ತರಗಳನ್ನು ಈಡೇರಿಸುವ ಹಾಗೇ ಕೆಲಸ ಮಾಡಲಿ ಎಂದು ಅವರು ಶುಭ ಹಾರೈಸಿದರು.
ಬಸವರಾಜ್ ಬೊಮ್ಮಾಯಿ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಹಿಂದಿನ ಅವಧಿಯಲ್ಲಿ ಗೃಹ ಸಚಿವರಾಗಿ ಸಮರ್ಥವಾಗಿ ಕೆಲಸ ಮಾಡಿದ್ದಾರೆ. ರಾಜಕೀಯ ಅನುಭವ ಇದ್ದು, ಹಿಂದಿನ ಪರಂಪರೆ ಸಹ ಅವರಿಗೆ ಮಾದರಿಯಾಗಿದೆ. ಅವರಿಂದ ರಾಜ್ಯದ ಅಭಿವೃದ್ಧಿ ಕಾರ್ಯಗಳು ಮುಂದುವರೆಯಲಿ ಎಂದು ಶುಭ ಹಾರೈಸುತ್ತೇನೆ ಎಂದು ಶಿವಮೊಗ್ಗದಲ್ಲಿ ಬೆಕ್ಕಿನಕಲ್ಮಠದ ಡಾ.ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಶ್ರೀಗಳ ಹೇಳಿಕೆ ನೀಡಿದರು.
ನಾವೆಲ್ಲರೂ ಯಡಿಯೂರಪ್ಪ ಅವರನ್ನು ಮುಂದುವರೆಸಲು ಆಗ್ರಹಿಸಿದ್ದೇವು. ಅದು ನಿಜ. ಇದು ಪ್ರತಿಯೊಬ್ಬರ ಅಪೇಕ್ಷೇಯಾಗಿತ್ತು. ಅದನ್ನೇ ನಾವು ವ್ಯಕ್ತಪಡಿಸಿದ್ದೇವು. ಪ್ರಜಾಪ್ರಭುತ್ವ ಹಾಗೂ ರಾಜಕೀಯ ವ್ಯವಸ್ಥೆಯಲ್ಲಿ ಅವರು ಸೂಕ್ತವಾದ ನಿರ್ಧಾರ ಮಾಡಿದ್ದಾರೆ. ಅದನ್ನು ನಾವು ವಿರೋಧಿಸುವುದಿಲ್ಲ. ನಾವು ಅಪೇಕ್ಷೆ ಹೇಳಿದ್ದು ಅಷ್ಟೇ ಎಂದು ಶ್ರೀಗಳು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ