ಗುಂಡ್ಲುಪೇಟೆ ಕಾರ್ಯಕರ್ತನ ಮನೆಗೆ ಸುರೇಶ್ ಕುಮಾರ್ ಭೇಟಿ; ಸಾಂತ್ವನ


Team Udayavani, Jul 28, 2021, 11:21 PM IST

Untitled-1

ಚಾಮರಾಜನಗರ:  ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪನವರ ರಾಜಿನಾಮೆ   ಸುದ್ದಿ ಕೇಳಿ ಮಾನಸಿಕವಾಗಿ ನೊಂದು  ಆತ್ಮಹತ್ಯೆ ಮಾಡಿಕೊಂಡ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರಾಜಪ್ಪ (ರವಿ)ಯವರ ಮನೆಗೆ ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ರಾತ್ರಿ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವ್ವನ ಹೇಳಿದರು.

ಜಿಲ್ಲೆಯ ನಿಕಟಪೂರ್ವ ಉಸ್ತುವಾರಿ ಸಚಿವರೂ ಆದ ಸುರೇಶ್ ಕುಮಾರ್,  ಬುಧವಾರ ಮೃತನ ಪೋಷಕರಿಗೆ ಸಾಂತ್ವನ ಹೇಳಿದರು. ರವಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಟ್ಟಾ ಅಭಿಮಾನಿಯಾಗಿದ್ದರು. ಹಿಂದಿನ ದಿನ ರಾಜೀನಾಮೆ‌ ಸುದ್ದಿ ಕೇಳಿ ವಿಚಲಿತರಾಗಿದ್ದರೆಂದು ಅವರ ಕುಟುಂಬಸ್ಥರಿಂದ ಅರಿತಿದ್ದೇನೆ. ಯಡಿಯೂರಪ್ಪನವರ ರಾಜಿನಾಮೆಯನ್ನು ಸಹಿಸಲಾಗದೇ ಆತ್ಮಹತ್ಯೆ ಮಾಡಿಕೊಳ್ಳುವಂತಹ ವಿಪರೀತ ಕೃತ್ಯಕ್ಕೆ  ಅವರು ಮುಂದಾಗಬಾರದಾಗಿತ್ತು. ಅವರ ಕುಟುಂಬವನ್ನು  ಅವರು ಅನಾಥರನ್ನಾಗಿಸಿ  ಪೋಷಕರು ಮತ್ತು ಕುಟಂಬದ ಸದಸ್ಯರನ್ನು ತೀವ್ರ ಸಂಕಷ್ಟಕ್ಕೆ ಈಡು ಮಾಡುವ ನಿರ್ಧಾರವನ್ನು ಅವರು ತೆಗೆದುಕೊಳ್ಳಬಾರದಿತ್ತೆಂದು ವಿಷಾದ ವ್ಯಕ್ತಪಡಿಸಿದರು.

ಸುರೇಶ್ ಕುಮಾರ್ ಅವರು ಇಂದು ನೂತನ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡು ರಾಜಭವನದಿಂದ ನೇರವಾಗಿ ಬೊಮ್ಮಲಾಪುರಕ್ಕೆ ಆಗಮಿಸಿದರು.  ಮೃತ ರವಿಯವರ ಮನೆಗೆ ಭೇಟಿ ನೀಡಿ ಅವರ ತಾಯಿಯೊಂದಿಗೆ ಕುಳಿತು ಸುದೀರ್ಘವಾಗಿ ಮಾತನಾಡಿದರು.

ಯಾವುದೇ ಅಭಿಮಾನಿಗಳಾಗಿರಲಿ, ಪಕ್ಷದ ಕಾರ್ಯಕರ್ತರಾಗಿರಲಿ, ಯಾರೇ ಆಗಿರಲಿ ಆತ್ಮಹತ್ಯೆಯಂತಹ ಕೃತ್ಯಕ್ಕೆ ಕೈಹಾಕಬಾರದು. ಜೀವನದಲ್ಲಿ ಇಂತಹ ಹಲವಾರು ಘಟನೆಗಳು, ಕಷ್ಟನಷ್ಟಗಳು  ಬರುತ್ತವೆ. ಎಲ್ಲವನ್ನೂ ಸಮಾಧಾನದಿಂದ ಎದುರಿಸಬೇಕೆಂದು ಅವರು ಹೇಳಿದರು.

ರವಿಯವರು ತಮ್ಮ ರಾಜಿನಾಮೆ ಸುದ್ದಿ ಕೇಳಿ ಆತ್ಮಹತ್ಯೆಗೆ ಮುಂದಾಗಿದ್ದನ್ನು ತಿಳಿದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೂ ಸಹ ತೀವ್ರ ನೊಂದುಕೊಂಡಿದ್ದಾರೆಂದು ಸುರೇಶ್  ಕುಮಾರ್ ಹೇಳಿದರು.

ತಮ್ಮ ಅಭಿಮಾನಿ ಆತ್ಮಹತ್ಯೆ ರವಿಯವರ ಆತ್ಮಹತ್ಯೆ ಸುದ್ದಿ ತಿಳಿದ ಬಿ.ಎಸ್. ಯಡಿಯೂರಪ್ಪನವರೂ ಸಹ ಸೋಮವಾರವೇ ಮೃತನ ಪೋಷಕರೊಂದಿಗೆ ದೂರವಾಣಿ ಮೂಲಕವೇ ಮಾತನಾಡಿ ಸಾಂತ್ವನ  ಹೇಳಿದ್ದರು. ಹಾಗೆಯೇ ಯಾವುದೇ ಕಾರ್ಯಕರ್ತ, ಅಭಿಮಾನಿಗಳು ಸಹ ಇಂತಹ ಕೃತ್ಯಕ್ಕೆ ಮುಂದಾಗಬಾರದೆಂದು ಹೇಳಿದ್ದರಲ್ಲದೇ ಅಭಿಮಾನ ಅತಿರೇಕಕ್ಕೆ ಹೋಗಬಾರದು ಎಂದು ಸಲಹೆ ನೀಡಿದ್ದರು.

ಈ ಸಂದರ್ಭದಲ್ಲಿ ಗುಂಡ್ಲುಪೇಟೆ ಶಾಸಕ ಸಿ.ಎಸ್.  ನಿರಂಜನ್ ಕುಮಾರ್ ಮತ್ತು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.